ಕ್ಷಯರೋಗ ನಿಯಂತ್ರಣಕ್ಕೆ ಜಾಗೃತಿ ಅಗತ್ಯ


Team Udayavani, Nov 26, 2019, 10:32 AM IST

huballi-tdy-3

ಧಾರವಾಡ: ಕ್ಷಯರೋಗ ನಿಯಂತ್ರಿಸಿ ನಿವಾರಿಸಲು, ರೋಗಿಗಳಲ್ಲಿ ಜಾಗೃತಿ ಮೂಡಿಸಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸಬೇಕು ಎಂದು ಡಿಸಿ ದೀಪಾ ಚೋಳನ್‌ ಹೇಳಿದರು.

ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಹಮ್ಮಿಕೊಂಡಿದ್ದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ಷಯರೋಗ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ನಿರಂತರ ಔಷಧ ಸೇವಿಸುವುದರಿಂದ ರೋಗ ಪೂರ್ಣ ಗುಣಮುಖವಾಗುತ್ತದೆ ಎಂದರು.

ಮದ್ಯದಲ್ಲಿ ಔಷ ಧ ಸೇವಿಸುವುದನ್ನು ರೋಗಿಯು ಬಿಟ್ಟರೆ ರೋಗ ಮತ್ತಷ್ಟು ಉಲ್ಬನವಾಗುವ (ಡ್ರಗ್‌ ರಜಿಸ್ಟಂಟ್‌ ಟಿಬಿ) ಸಾಧ್ಯತೆ ಇರುತ್ತದೆ. ಆದ್ದರಿಂದ ನಿರಂತರ ಸೇವಿಸಬೇಕು. ಕ್ಷಯರೋಗ ಸಂಬಂಧಿಸಿದ ಚಿಕಿತ್ಸೆ ಮತ್ತು ಔಷ ಧಗಳನ್ನು ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡಲಾಗುತ್ತಿದೆ ಎಂದರು.

ಜಿಲ್ಲೆಯ ವಿವಿಧ ಪ್ರದೇಶಗಳ 3,21,221ಜನರನ್ನು ಪರೀಕ್ಷೆಗೊಳಪಡಿಸಿ ಮತ್ತು ಕೊಳಚೆ ಪ್ರದೇಶ, ಟ್ರಕ್‌ ಟರ್ಮಿನಲ್‌, ಶಾಲಾ ಕಾಲೇಜು ಸೇರಿದಂತೆ ವಿವಿಧ ಸ್ಥಳಗಳಲ್ಲಿ “ರೋಗ ದೂರವಿಡಿ; ರೋಗಿಯನ್ನಲ್ಲ’ ಸಂದೇಶದೊಂದಿಗೆ ಜನಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.ಕ್ಷಯರೋಗ ಪತ್ತೆ ಅಭಿಯಾನದಲ್ಲಿ ಕೈಗಾರಿಕಾ ಪ್ರದೇಶ, ಕೊಳಚೆ ಪ್ರದೇಶ, ಶಾಲಾ ಕಾಲೇಜು, ವಾಹನಗಳ ಚಾಲಕರು, ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಜಿಪಂ ಸಿಇಒ ಡಾ|ಬಿ.ಸಿ.ಸತೀಶ ಮಾತನಾಡಿ, 2025ರೊಳಗೆ ಭಾರತವನ್ನು ಕ್ಷಯರೋಗ ಮುಕ್ತ ರಾಷ್ಟ್ರವಾಗಿ ರೂಪಿಸಲು ಭಾರತ ಸರಕಾರ ಗುರಿ ಹೊಂದಿದ್ದು, ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಅಭಿಯಾನವನ್ನು ನವಂಬರ್‌ 25ರಿಂದ ಡಿಸೆಂಬರ್‌ 10ರವರೆಗೆ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಸದುಪಯೋಗ ಪಡೆಯಬೇಕು ಎಂದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ|ತನುಜಾ.ಕೆ.ಎನ್‌ ಮಾತನಾಡಿ, ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆಗಾಗಿ ಎಂಟು ಘಟಕಗಳಿವೆ. ಈಗಾಗಲೇ 1835 ಕ್ಷಯರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿ ತಿಂಗಳು 1000-1500 ಸಂಶಯಾಸ್ಪದ ಕ್ಷಯರೋಗಿಗಳ ಪರೀಕ್ಷೆ ಮಾಡಲಾಗುತ್ತಿದೆ. ಪ್ರಸ್ತುತ ವಿಶೇಷ ಅಭಿಯಾನದಲ್ಲಿ ಹೆಚ್ಚು ಜನರನ್ನು ಪರೀಕ್ಷಿಸುವ ಗುರಿ ಹೊಂದಲಾಗಿದೆ. ಅಭಿಯಾನ ಯಶಸ್ವಿಗೊಳಿಸಲು 284 ತಂಡ ರಚಿಸಲಾಗಿದೆ. ಇದರಲ್ಲಿ ಆಶಾ, ಆರೋಗ್ಯ ಕಾರ್ಯಕರ್ತರು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಒಟ್ಟು 568 ಜನ ಪಾಲ್ಗೊಳ್ಳಲಿದ್ದಾರೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ|ಯಶವಂತ ಮದೀನಕರ ಮಾತನಾಡಿ, ಕ್ಷಯರೋಗ ನಿಯಂತ್ರಣಕ್ಕಾಗಿ ಇಲಾಖೆಯಿಂದ ಹಲವಾರು ಯೋಜನೆ ಜಾರಿಗೊಳಿಸಲಾಗಿದೆ. ಕ್ಷಯರೋಗಿಗಳಿಗೆ ಚಿಕಿತ್ಸೆ ಅವಧಿ ಪೂರ್ಣಗೊಳ್ಳುವರೆಗೆ ಪ್ರತಿ ತಿಂಗಳು ನಿಕ್ಷಯ ಪೋಷಣೆ ಯೋಜನೆಯಡಿ 500 ರೂ.ಗಳ ಸಹಾಯಧನ ನೀಡಲಾಗುತ್ತಿದೆ. ಕ್ಷಯರೋಗಿಯನ್ನು ಗುರುತಿಸುವ ಖಾಸಗಿ ವೈದ್ಯರಿಗೆ 500 ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ|ಶಿವಕುಮಾರ ಮಾನಕರ, ಆರ್‌.ಸಿ.ಎಚ್‌ ಅಧಿಕಾರಿ ಡಾ|ಎಸ್‌.ಎಂ.ಹೊನಕೇರಿ, ನಿವೃತ್ತ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ|ವಿ.ಡಿ. ಕಪೂರಮಠ, ಜಿಲ್ಲಾ ಸಮೀಕ್ಷಣಾಧಿ ಕಾರಿ ಡಾ|ಸುಜಾತಾ ಹಸವಿಮಠ, ಜಿಲ್ಲಾ ಕುಷ್ಠರೋಗ ನಿಯಂತ್ರಣಾ ಧಿಕಾರಿ ಡಾ|ಶಶಿ ಪಾಟೀಲ, ಜಿಲ್ಲಾಸ್ಪತ್ರೆಯ ವೈದ್ಯರು ಮತ್ತು ನರ್ಸಿಂಗ್‌ ಕಾಲೇಜು ವಿದ್ಯಾರ್ಥಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿ ಧಿಗಳು ಭಾಗವಹಿಸಿದ್ದರು. ಕಾರ್ಯಕ್ರಮ ನಂತರ ಡಿಸಿ ದೀಪಾ ಚೋಳನ್‌ ಅವರು ಕ್ಷಯರೋಗ ಕುರಿತ ಜಾಗೃತಿ ಮಾಹಿತಿಯುಳ್ಳ ಸ್ಟಿಕರ್‌ ಅನ್ನು ತಮ್ಮ ಕಾರಿಗೆ ಅಂಟಿಸುವ ಮೂಲಕ ಐಇಸಿಸಾಮಗ್ರಿಗಳ ವಿತರಣೆಗೆ ಜಿಪಂ ಸಿಇಒ ಡಾ|ಬಿ.ಸಿ.ಸತೀಶ ಅವರೊಂದಿಗೆ ಚಾಲನೆ ನೀಡಿದರು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.