ಆಯುಷ್ಮಾನ್ ಕಾರ್ಡ್; ಬೆಳಗಾವಿ ವಿಭಾಗ ರಾಜ್ಯಕ್ಕೆ ಪ್ರಥಮ
Team Udayavani, Sep 18, 2019, 9:24 AM IST
ಧಾರವಾಡ: ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆಯಲ್ಲಿ ಧಾರವಾಡ ಜಿಲ್ಲೆ ರಾಜ್ಯಕ್ಕೆ ಎಂಟನೇ ಹಾಗೂ ಬೆಳಗಾವಿ ವಿಭಾಗ ಪ್ರಥಮ ಸ್ಥಾನದಲ್ಲಿದೆ ಎಂದು ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಡಾ| ಗಿರಿಧರ ಆರ್. ಕುಕನೂರ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ಮಾತನಾಡಿ, ಎಬಿಎಆರ್ಕೆ ಯೋಜನೆಯಡಿ ಬೆಳಗಾವಿ ವಿಭಾಗದ ಬೆಳಗಾವಿ ಜಿಲ್ಲೆಯಲ್ಲಿ 1,86,436 ಕಾರ್ಡ್ ವಿತರಣೆಯಾಗಿದ್ದು, 11,981 ಜನ ಲಾಭ ಪಡೆದಿದ್ದಾರೆ. ಬಾಗಲಕೋಟೆ 95,731 ಕಾರ್ಡ್ ವಿತರಣೆ-7,233 ಜನ ಸೌಲಭ್ಯ; ವಿಜಯಪುರ 91,789 ಕಾರ್ಡ್ ವಿತರಣೆ-4,739 ಜನ ಸೌಲಭ್ಯ; ಹಾವೇರಿ 2,11,920 ಕಾರ್ಡ್ ವಿತರಣೆ-4,198 ಜನ ಸೌಲಭ್ಯ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ 1,57,339 ಕಾರ್ಡ್ ವಿತರಣೆಯಾಗಿದ್ದು 3,979 ಜನ ಸೌಲಭ್ಯ ಪಡೆದಿದ್ದಾರೆ. ಬೆಳಗಾವಿ ವಿಭಾಗದಲ್ಲಿ ಈ ಯೋಜನೆಯಡಿ 10,43,570 ಎಬಿಎಆರ್ಕೆ ಕಾರ್ಡ್ ವಿತರಿಸಲಾಗಿದ್ದು, 46,218 ಜನ ಫಲಾನುಭವಿಗಳು ಯೋಜನೆ ಸೌಲಭ್ಯ ಪಡೆದಿದ್ದಾರೆ ಎಂದರು.
ಆಯುಷ್ಮಾನ್ ಯೋಜನೆಯನ್ನು ಹೆಚ್ಚು ಜನರಿಗೆ ತಲುಪಿಸಲು ರಾಜ್ಯಾದ್ಯಂತ ಸೆ.15ರಿಂದ 30ರವರೆಗೆ ವಿಶೇಷ ಪಾಕ್ಷಿಕ ಅಭಿಯಾನ ಆಯೋಜಿಸಲಾಗಿದೆ. ಜಿಲ್ಲಾಸ್ಪತ್ರೆಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ವಿಭಾಗದ ಉಪ ನಿರ್ದೇಶಕ ಡಾ| ಅಪ್ಪಾಸಾಹೇಬ್ ನರಹಟ್ಟಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ|ಯಶವಂತ ಮದಿನಕರ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ| ಎಸ್.ಎಂ. ಹೊನಕೇರಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ| ಶಶಿ ಪಾಟೀಲ, ಡಿಇಐಸಿಯ ತಜ್ಞ ವೈದ್ಯ ಡಾ| ಎನ್.ಎಂ. ಅಂಗಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ