ಮದುವೆಯಲ್ಲಿ ಜನರ ಕೈಗೆ ಬ್ಯಾಂಡ್ : ಮಾರ್ಗಸೂಚಿ ಪಾಲನೆಗೆ ಜಿಲ್ಲಾಡಳಿತದಿಂದ ವಿನೂತನ ಕ್ರಮ
Team Udayavani, Apr 24, 2021, 5:30 PM IST
ಧಾರವಾಡ: ರಾಜ್ಯ ಸರ್ಕಾರ ಏ.21ರಿಂದ ಜಾರಿಗೊಳಿಸಿದ ಹೊಸ ಮಾರ್ಗಸೂಚಿಗಳ ಪ್ರಕಾರ ಮದುವೆಗಳಲ್ಲಿ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದ್ದು, ಜಿಲ್ಲಾಡಳಿತವು ಈ ನಿಯಮ ಪಾಲನೆ ಹಾಗೂ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ವಿಶೇಷ ಕ್ರಮಕ್ಕೆ ಮುಂದಾಗಿದೆ.
ಜಿಲ್ಲೆಯಲ್ಲಿ ನಡೆಯುವ ಮದುವೆಗಳಲ್ಲಿ ಭಾಗವಹಿಸುವ 50 ಜನರಿಗೆ ತಮ್ಮ ಕೈಗಳಿಗೆ ಧರಿಸಲು ವಿಶೇಷವಾದ ಬ್ಯಾಂಡ್ಗಳನ್ನು ಮದುವೆ ಆಯೋಜಕರಿಗೆ ಅನುಮತಿಯೊಂದಿಗೆ ನೀಡಲು ಸಿದ್ಧತೆ ಮಾಡಿಕೊಂಡಿದೆ. ಈ ಕುರಿತು ಪ್ರಕಟಣೆ ನೀಡಿರುವ ಡಿಸಿ ನಿತೇಶ್ ಪಾಟೀಲ, ಮಹಾನಗರ-ಗ್ರಾಮೀಣ ಪ್ರದೇಶಗಳಲ್ಲಿ ಮೇ 4ರ ವರೆಗೆ ಜರುಗುವ ಮದುವೆಗಳಿಗೆ ಅನುಮತಿ ಪಡೆಯುವುದನ್ನು ಜಿಲ್ಲೆಯಲ್ಲಿ ಕಡ್ಡಾಯಗೊಳಿಸಲಾಗಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಲಯ ಸಹಾಯಕ ಆಯುಕ್ತರು ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ಉಳಿದ ಎಲ್ಲ ತಾಲೂಕು ವ್ಯಾಪ್ತಿಯಲ್ಲಿ ತಹಶೀಲ್ದಾರರು ಮದುವೆಗಳ ಆಯೋಜನೆಗೆ ಅನುಮತಿ ನೀಡಲು ಆದೇಶಿಸಲಾಗಿದೆ ಎಂದಿದ್ದಾರೆ.
ಮದುವೆಗಳಲ್ಲಿ ನಿಯಮ ಮೀರಿ 50ಕ್ಕಿಂತ ಹೆಚ್ಚು ಜನ ಪಾಲ್ಗೊಳ್ಳದಂತೆ ಜಾಗೃತಿ ವಹಿಸಲು ಹಾಗೂ ಆಯೋಜಕರಿಗೆ ಸಂಖ್ಯಾ ನೀತಿಯನ್ನು ಖಾತರಿಪಡಿಸಿಕೊಳ್ಳಲು ಅನುಕೂಲವಾಗುವಂತೆ ಅನುಮತಿ ಪಡೆಯಲು ಬರುವ ಆಯೋಜಕರಿಗೆ ಅನುಮತಿಯೊಂದಿಗೆ ಅನುಕ್ರಮ ಸಂಖ್ಯೆ ಇರುವ 50 ವಿಶೇಷವಾದ ಬ್ಯಾಂಡ್ಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಮಾರ್ಗಸೂಚಿಯಲ್ಲಿ ತಿಳಿಸಿರುವ ಸಂಖ್ಯೆಗಿಂತ ಹೆಚ್ಚು ಜನ ಭಾಗವಹಿಸಿರುವುದು ಕಂಡುಬಂದಲ್ಲಿ ಮದುವೆ ಆಯೋಜಕರ ಹಾಗೂ ಮದುವೆ ಮಂಟಪದ ಮಾಲೀಕರ ಮೇಲೆ ಎಫ್ಐಆರ್ ದಾಖಲಿಸಿ, ತಕ್ಷಣ ಕಲ್ಯಾಣ ಮಂಟಪ ಸೀಜ್ ಮಾಡಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ