ಬಂದ್ ಸಂಪೂರ್ಣ ವಿಫಲ; ಎಂದಿನಂತಿತ್ತು ಜನಜೀವನ
Team Udayavani, Feb 14, 2020, 11:55 AM IST
ಹುಬ್ಬಳ್ಳಿ/ಧಾರವಾಡ: ಡಾ| ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಅವಳಿನಗರ ಸೇರಿದಂತೆ ಜಿಲ್ಲೆಯಲ್ಲಿ ಯಾವುದೇ ಪರಿಣಾಮ ಬೀರಲಿಲ್ಲ. ಸಾರಿಗೆ, ಜನಜೀವನ ಎಂದಿನಂತೇ ಇತ್ತು.
ಕೆಲ ಸಂಘಟನೆಗಳನ್ನು ಹೊರತುಪಡಿಸಿ ಬಹುತೇಕ ಸಂಘಟನೆಗಳು ಬಂದ್ಗೆ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡದ್ದರಿಂದ ಬಂದ್ ಮೇಲೆ ಯಾವುದೇ ಪರಿಣಾಮವಾಗಲಿಲ್ಲ. ಎಂದಿನಂತೆ ರಾಜ್ಯ ನಗರ ಸಾರಿಗೆ ಬಸ್, ಆಟೋ ರಿಕ್ಷಾಗಳು, ಖಾಸಗಿ ವಾಹನಗಳ ಸಂಚಾರವಿತ್ತು. ಹೋಟೆಲ್ ಉದ್ಯಮ ಸೇರಿದಂತೆ ಎಲ್ಲ ವಹಿವಾಟು ಸುಗಮವಾಗಿ ನಡೆದವು. ಶಾಲಾ-ಕಾಲೇಜುಗಳು ತೆರೆದುಕೊಂಡಿದ್ದವು.
ಹುಬ್ಬಳ್ಳಿಯಲ್ಲಿ ಪ್ರತಿಭಟನೆ: ಡಾ|ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ನವನಿರ್ಮಾಣ ವೇದಿಕೆ, ಕರ್ನಾಟಕ ಸಂಗ್ರಾಮ ಸೇನೆ, ಕನ್ನಡ ಕ್ರಾಂತಿ ದೀಪ, ಭಗತಸಿಂಗ್ ಯುಥ್ ಪವರ್ ಸಂಘಟನೆ, ಸಮಗ್ರ ಕರ್ನಾಟಕ ರಕ್ಷಣಾ ಸೇನೆ, ರಾಜ್ಯ ಮಾನವ ಹಕ್ಕುಗಳ ರಕ್ಷಣೆ ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಮಿತಿ, ಎಸ್ಎಸ್ಕೆ ಸಮಾಜದ ಯುವಕರ ಸಂಘದ ಬೆರಳೆಣಿಕೆಯ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮಿನಿ ವಿಧಾನಸೌಧ ವರೆಗೆ ತಳ್ಳುವ ಗಾಡಿ ಹಿಡಿದು ಪ್ರತಿಭಟನೆ ನಡೆಸಿದರು.
ಈರಪ್ಪ ಎಮ್ಮಿ, ಸಂಜೀವ ಧುಮ್ಮಕನಾಳ, ರವಿ ಕದಂ, ಬಸವರಾಜ ಮಣ್ಣೂರಮಠ, ಕುಬೇರ ಪವಾರ, ನಾಗರಾಜ ಬಡಿಗೇರ, ಆನಂದ ದಲಬಂಜನ, ರಾಮಚಂದ್ರ ಕುಲಕರ್ಣಿ, ನೀಲಕಂಠ ತಡಸದಮಠ, ಷಣ್ಮುಖಯ್ಯ ಪಂಚಾಂಗಮಠ, ರಾಹುಲಕುಮಾರ ಜಿ.ಎಸ್., ಬಸವರಾಜ ಬೆಲ್ಲದ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…