ಹುಬ್ಬಳ್ಳಿ: ರಾಷ್ಟ್ರೀಕೃತ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್ ನೌಕರರ ಪ್ರತಿಭಟನೆ
Team Udayavani, Mar 15, 2021, 12:27 PM IST
ಹುಬ್ಬಳ್ಳಿ: ರಾಷ್ಟ್ರೀಕೃತ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್ ನೌಕರರು ಕರ್ತವ್ಯ ಬಹಿಷ್ಕರಿಸಿ ಕೇಂದ್ರ ಸರಕಾರ ಹಾಗೂ ಆರ್.ಬಿ.ಐ ನೀತಿಗಳನ್ನು ಖಂಡಿಸಿದರು.
ಸೋಮವಾರ ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿರುವ ಯೂನಿಯನ್ ಬ್ಯಾಂಕ್ ಮುಂಭಾಗದಲ್ಲಿ ವಿವಿಧ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳು ಹಾಗೂ ನೌಕರರು ಜಮಾಯಿಸಿ ಪ್ರತಿಭಟನೆ ನಡೆಸಿದರು.
ಸಾರ್ವಜನಿಕ ಬ್ಯಾಂಕ್ ಗಳನ್ನಾಗಿ ಬಂಡವಾಳಶಾಹಿಗಳ ಕಪಿ ಮುಷ್ಟಿಗೆ ನೀಡಲು ಕೇಂದ್ರ ಸರಕಾರ ಮುಂದಾಗಿದೆ. ಇದು ಜನ ಹಾಗೂ ಬ್ಯಾಂಕ್ ಉದ್ಯೋಗಿಗಳ ವಿರೋಧಿ ನೀತಿಯಾಗಿದೆ ಎಂದು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಇದನ್ನೂ ಓದಿ:ತಮಿಳುನಾಡು: ಚುನಾವಣಾ ಪ್ರಚಾರ ಮುಗಿಸಿ ವಾಪಾಸಾಗುತ್ತಿದ್ದ ಕಮಲ್ ಹಾಸನ್ ಮೇಲೆ ದಾಳಿ!
ಬ್ಯಾಂಕ್ ನೌಕರರ ಮುಖಂಡ ಸ್ಟೀಫನ್ ಜಯಚಂದ್ರ ಮಾತನಾಡಿ, ಹಲವು ದಶಕಗಳಿಂದ ಜನ ಸಾಮಾನ್ಯರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಿಕೊಂಡು ಬಂದಿರುವ ಬ್ಯಾಂಕ್ ಗಳನ್ನು ಖಾಸಗೀಕರಣ ಮಾಡಲು ಕೇಂದ್ರ ಸರಕಾರ ಮುಂದಾಗಿದೆ. ಈ ಬ್ಯಾಂಕ್ ಗಳಲ್ಲಿನ ಜನ ಸಾಮಾನ್ಯರ ಠೇವಣಿ ಮೇಲೆ ಕೇಂದ್ರ ಸರಕಾರ ಹಾಗೂ ಬಂಡವಾಳ ಶಾಹಿಗಳ ವಕ್ರದೃಷ್ಟಿ ಬೀರಿದೆ. ಖಾಸಗೀಕರಣ ಬ್ಯಾಂಕ್ ನೌಕರರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಯಾವುದೇ ಕಾರಣಕ್ಕೂ ರಾಷ್ಟ್ರೀಕೃತ ಬ್ಯಾಂಕ್ ಗಳನ್ನು ಖಾಸಗಿ ಮಾಡಲು ಬಿಡುವುದಿಲ್ಲ ಎಂದರು.
ಕಾರ್ಮಿಕ ಮುಖಂಡ ಮಹೇಶ ಪತ್ತಾರ ಮಾತನಾಡಿ, ಹಲವು ತಿಂಗಳುಗಳಿಂದ ಕೃಷಿ ವಿರೋಧಿ ನೀತಿ ಖಂಡಿಸಿ ರೈತರು ಚಳಿ, ಮಳೆ ಎನ್ನದೆ ಹೋರಾಟ ಮಾಡುತ್ತಿದ್ದು, ಕೇಂದ್ರ ಸರಕಾರ ಹಲವು ಸೌಲಭ್ಯಗಳನ್ನು ಕಡಿತಗೊಳಿಸುವ ಮೂಲಕ ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಬ್ಯಾಂಕ್ ನೌಕರರು ಒಗ್ಗಟ್ಟಿನಿಂದ ಹೋರಾಡುವ ಮೂಲಕ ಖಾಸಗೀಕರಣಕ್ಕೆ ಅವಕಾಶ ನೀಡಬಾರದು. ಏಕ ವ್ಯಕ್ತಿಯ ಸರಕಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದ್ದು, ದೇಶವನ್ನು ಲೂಟಿ ಹೊಡೆಯಲು ಮುಂದಾಗಿರುವ ಸರಕಾರಕ್ಕೆ ಚುನಾವಣೆ ಮೂಲಕವೇ ಉತ್ತರ ನೀಡಬೇಕು ಎಂದರು.
ವಿವಿಧ ರಾಷ್ಟ್ರೀಕೃತ ಬ್ಯಾಕ್ ಗಳ ಅಧಿಕಾರಿಗಳು, ಸಿಬ್ಬಂದಿ ಹಾಗು ಕಾರ್ಮಿಕ ಮುಖಂಡರು ಪಾಲ್ಗೊಂಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ