ಸವಾಲ್ ಹಾಕಿದವರಿಗೆ ಅವರ ಜಾಗದಲ್ಲೇ ಉತ್ತರ: ಯತ್ನಾಳ್
Team Udayavani, Nov 25, 2022, 6:00 AM IST
ಧಾರವಾಡ: ನನಗೆ ಬಹಳಷ್ಟು ಜನ ಸವಾಲು ಹಾಕುತ್ತಿದ್ದಾರೆ. ಧಾರವಾಡದಲ್ಲೂ ಒಬ್ಬರು ಸವಾಲು ಹಾಕಿದ್ದಾರೆ. ಶೀಘ್ರದಲ್ಲಿ ಅವರಿದ್ದಲ್ಲಿಗೇ ಹೋಗಿ ಉತ್ತರ ಕೊಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ತಾಲೂಕಿನ ಶ್ರೀಕ್ಷೇತ್ರ ಗರಗ ಮಡಿವಾಳೇಶ್ವರ ಮಠಕ್ಕೆ ಮುಮ್ಮಿಗಟ್ಟಿ ಬಳಿ ದ್ವಾರಬಾಗಿಲು ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಯತ್ನಾಳ್ ಧಾರವಾಡಕ್ಕೆ ಬಂದು ಹಿಜಾಬ್ ಬಗ್ಗೆ ಮಾತನಾಡಲಿ ಎಂದು ಸವಾಲು ಹಾಕಿದ್ದರು. ಧಾರವಾಡದಲ್ಲಿ ಯಾವ ಚೌಕ್ನಲ್ಲಿ ಹೇಳುತ್ತಾರೋ ಅಲ್ಲಿ ಪೆಂಡಾಲ್ ಹಾಕಿ ಸಮಾವೇಶ ಮಾಡುತ್ತೇನೆ. ಧಮ್ ಇದ್ದರೆ ಬರಲಿ. ಇದು ಪಾಕಿಸ್ಥಾನ ಅಲ್ಲ, ಹಿಂದುಸ್ಥಾನ. ಇತ್ತೀಚೆಗೆ ಗೋಕಾಕ್ನಲ್ಲೂ ಕೆಲವರು ಸವಾಲು ಹಾಕಿದ್ದರು. ವೇದಿಕೆ ಹತ್ತದಂತೆ ತಡೆಯುವ ಎಚ್ಚರಿಕೆ ನೀಡಿದ್ದರು. ಅಲ್ಲಿ ಸಮಾವೇಶ ಮಾಡಿ ಕೆಲವರಿಗೆ ಉತ್ತರ ಕೊಟ್ಟಿದ್ದೇನೆ. ಧಾರವಾಡದಲ್ಲೂ ಸಮಾವೇಶ ಮಾಡುತ್ತೇನೆ. ಬಿಜೆಪಿ ಹೈಕಮಾಂಡ್ ನನ್ನನ್ನು ಸ್ಟಾರ್ ಪ್ರಚಾರಕನಾಗಿ ಮಾಡಿದೆ. ಹೀಗಾಗಿ ರಾಜ್ಯದ ಎಲ್ಲ ಕ್ಷೇತ್ರಗಳಿಗೂ ಚುನಾವಣ ಪ್ರಚಾರಕ್ಕೆ ಹೋಗುತ್ತೇನೆ. ಶಿವಮೊಗ್ಗ, ಶಿಕಾರಿಪುರಕ್ಕೂ ಹೋಗುತ್ತೇನೆ ಎಂದರು.
ಆಂತರಿಕ ವಿಚಾರ:
ಸಿದ್ದರಾಮಯ್ಯ ಮತ್ತು ಡಿಕೆಶಿ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ಸಂತೋಷ್ ಲಾಡ್ ಹೇಳಿಕೆ ಅವರ ಪಕ್ಷದ ವಿಚಾರ. ಅವರಿಬ್ಬರು ಚುನಾವಣೆಯಲ್ಲಿ ಸೋಲಬಹುದು ಎಂಬ ಕಾರಣಕ್ಕೆ ಸಂತೋಷ ಲಾಡ್ ಹಾಗೆ ಹೇಳಿರಬಹುದು ಎಂದು ಯತ್ನಾಳ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ