ಮೂರು ಸಾವಿರ ಮಠದಲ್ಲಿ ಬಸವ ಜಯಂತಿ
ಧರ್ಮದಲ್ಲಿ ರಾಜಕೀಯ ಬರಬಾರದು: ಡಾ| ಮಳೆಣ್ಣವರ
Team Udayavani, May 6, 2019, 2:14 PM IST
ಧಾರವಾಡ: ತಾಲೂಕಿನ ಮನಗುಂಡಿ ಗ್ರಾಮದ ಚನ್ನಯ್ಯಗಿರಿಯ ಶ್ರೀಗುರು ಬಸವ ಮಹಾಮನೆಯಲ್ಲಿ 131ನೇ ಮಾಸಿಕ ಶಿವಾನುಭವ ಗೋಷ್ಠಿ ಹಾಗೂ ವಿಶ್ವಗುರು ಬಸವಣ್ಣನವರ ಜಯಂತಿ ಆಚರಿಸಲಾಯಿತು.
ಸಾನಿಧ್ಯವಹಿಸಿದ್ದ ಬೊಮ್ಮಹಳ್ಳಿ ವಿರಕ್ತಮಠದ ಶಿವಯೋಗೀಶ್ವರ ಸ್ವಾಮೀಜಿ ಮಾತನಾಡಿ, ಜೀವನ ಸಾರ್ಥಕವಾಗಬೇಕಾದರೆ ಬಸವತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರೊಂದಿಗೆ ನೀರಿನ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು. ಪರಿಸರ ಕಾಳಜಿ ವಹಿಸಬೇಕು ಎಂದರು.
ತೇಜೋಮಯಿ ಮಾತಾಜಿ ಮಾತನಾಡಿ, ವಿವೇಕಾನಂದರ ಆದರ್ಶಗಳು ಮತ್ತು ಜೀವನವನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಹೇಳಿದರು. ಮನಗುಂಡಿ ಗುರುಬಸವ ಮಹಾಮನೆಯ ಬಸವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.
ಟೆಡ್ಸ್ ನವೋದಯ ತರಬೇತಿ ಕೇಂದ್ರದ ಅಧ್ಯಕ್ಷ ಶಿವಾನಂದ ಗಾಳಿ ಉಪನ್ಯಾಸ ನೀಡಿದರು. ಲೇಖಕಿ ಡಾ| ವಿಜಯಲಕ್ಷ್ಮೀ ಬಾಳೇಕುಂದ್ರಿ ಅವರು ಕಾಯಕ ಮತ್ತು ದಾಸೋಹ ಹಾಗೂ ಬಸವತತ್ವಗಳ ಬಗ್ಗೆ ಮಾತನಾಡಿದರು.
ಸುಗುಣಾತಾಯಿ, ಸ್ವರ್ಣಭೂಮಿ ಗೋಶಾಲಾ ಸಂಸ್ಥಾಪಕ ರಾಘವೇಂದ್ರ ಇದ್ದರು. ಕಾರ್ಯಕ್ರಮಕ್ಕೂ ಮುನ್ನ ಬಸವಾನಂದ ಸ್ವಾಮೀಜಿ ಅವರು ಸ್ವಯಂ ರಕ್ತದಾನ ಮಾಡುವ ಮೂಲಕ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ