ಶರಣರ ಚಿಂತನೆಗಳು ಸರ್ವಕಾಲಕ್ಕೂ ಪ್ರಸ್ತುತ
Team Udayavani, Apr 20, 2018, 5:26 PM IST
ಧಾರವಾಡ: ಬಸವಾದಿ ಶರಣರ ಚಿಂತನೆ, ಜೀವನ ಕ್ರಮ ಸರ್ವಕಾಲಕ್ಕೂ ಪ್ರಸ್ತುತ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ| ಎಸ್.ಜಿ. ಸಿದ್ದರಾಮಯ್ಯ ಹೇಳಿದರು.
ಕವಿವಿಯ ಶ್ರೀಬಸವೇಶ್ವರ ಪೀಠದಲ್ಲಿ ಬಸವ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಹಾದಾರ್ಶನಿಕ, ಮಾನವತಾವಾದಿ, ಸಮಾಜ ಚಿಂತಕ, ನಡೆ-ನುಡಿಗಳೆರಡರಲ್ಲಿ ಏಕತೆಯನ್ನು ಸಾಧಿ ಸಿದ ಬಸವೇಶ್ವರರ ಜೀವನ ಆದರ್ಶಪ್ರಾಯವಾಗಿದೆ. ಅವರ ಚಿಂತನೆಗಳನ್ನು ಇಡೀ ಮನಕುಲವೇ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದರು.
ಕವಿವಿ ಕುಲಸಚಿವ ಪ್ರೊ| ಮಲ್ಲಿಕಾರ್ಜುನ ಪಾಟೀಲ, ಅಧ್ಯಕ್ಷತೆ ವಹಿಸಿದ್ದ ಕವಿವಿ ಪ್ರಭಾರ ಕುಲಪತಿ ಪ್ರೊ| ನಾಗಪ್ಪ ಶಹಾಪುರ ಮಾತನಾಡಿದರು. ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ, ಡಾ| ಎಸ್.ಆರ್. ಗುಂಜಾಳ, ಪ್ರೊ| ಆರ್.ಎಲ್. ಹೈದರಾಬಾದ, ಶಿವಣ್ಣ ಬೆಲ್ಲದ ಇನ್ನಿತರರಿದ್ದರು. ಬಸವೇಶ್ವರ ಪೀಠದ ಸಂಯೋಜಕ ಡಾ| ಸಿ.ಎಂ. ಕುಂದಗೋಳ ಪರಿಚಯಿಸಿದರು. ಸಂತೋಷ ಹಿರೇಮಠ ನಿರೂಪಿಸಿದರು. ದನವಂತ ಹಾಜವಗೋಳ ವಂದಿಸಿದರು.
ಸಾಹಿತ್ಯ ಭವನದಲ್ಲಿ ಬಸವ ಜಯಂತಿ: ಇಲ್ಲಿಯ ಸಾಹಿತ್ಯ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬಸವ ಜಯಂತಿ ಆಚರಿಸಲಾಯಿತು. ಸಾಹಿತಿ ಪ್ರೊ| ಕೆ.ಎಸ್. ಕೌಜಲಗಿ, ಕಸಾಪ ಜಿಲ್ಲಾಧ್ಯಕ್ಷ ಡಾ| ಲಿಂಗರಾಜ ಅಂಗಡಿ ಹಾಗೂ ಡಾ| ಜಿನದತ್ತ ಹಡಗಲಿ ಮಾತನಾಡಿದರು, ಶಂಕರ ಕುಂಬಿ, ಎಫ್.ಬಿ. ಕಣವಿ, ಎಸ್.ಎನ್, ಗಡಾದ, ಚಂದ್ರಶೇಖರ ಕುಂಬಾರ, ಆರತಿ ದೇವಶಿಖಾಮಣಿ, ಎಚ್. ಕೆ. ಪಾಟೀಲ, ಪೂಜಾ ವಾಲೀಕಾರ ಇದ್ದರು. ಶಿವಾನಂದ ಟವಳಿ ನಿರೂಪಿಸಿದರು. ಚಂದ್ರಶೇಖರ ಕುಂಬಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ