ಬಸವಣ್ಣ ಜಾಗತಿಕ ಮೇರು ವ್ಯಕ್ತಿ
ಕಾಯಕ, ದಾಸೋಹ, ಅನುಭಾವ ತತ್ವಗಳನ್ನು ಜಗತ್ತಿಗೆ ನೀಡಿದ ಬಸವಣ್ಣ
Team Udayavani, May 7, 2019, 10:34 AM IST
ಹುಬ್ಬಳ್ಳಿ: ಸಂಸ್ಕೃತ ಪಾರಮ್ಯ ಕಾಲದಲ್ಲಿ ಅಚ್ಚಕನ್ನಡದಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವಂತೆ ವಚನಗಳನ್ನು ರಚಿಸಿ ಸಾಮಾಜಿಕ ಕ್ರಾಂತಿ ಮಾಡಿದ ಬಸವಣ್ಣ ಕೇವಲ ನಮ್ಮ ನಾಡಿಗೆ ಸಿಮೀತ ವ್ಯಕ್ತಿಯಲ್ಲ, ಜಾಗತಿಕ ಮೇರು ವ್ಯಕ್ತಿಯಾಗಿದ್ದಾರೆ ಎಂದು ರುದ್ರಾಕ್ಷಿ ಮಠದ ಶ್ರೀಬಸವಲಿಂಗ ಸ್ವಾಮೀಜಿ ಹೇಳಿದರು.
ಬಸವ ಜಯಂತಿ ನಿಮಿತ್ತ ಮೂರುಸಾವಿರ ಮಠದ ಆವರಣದಲ್ಲಿ ವೀರಶೈವ ಸಂಘಟನಾ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯಕ್ಕೆ ವಚನಗಳನ್ನು ನೀಡಿದ್ದಲ್ಲದೇ ಶರಣ ಹಾಗೂ ಶರಣೆಯರಿಗೆ ವಚನಗಳನ್ನು ರಚಿಸಲು ಪ್ರೇರೇಪಿಸಿದ ಮಹಾತ್ಮ ಬಸವಣ್ಣ. ಲಿಂಗ, ವರ್ಣ, ವರ್ಗ ಭೇದ ಹೋಗಲಾಡಿಸಲು ಪ್ರಯತ್ನ ಪಟ್ಟ ವ್ಯಕ್ತಿ ಎಂದರು.
ಬಸವಣ್ಣ ಕಾಯಕ, ದಾಸೋಹ ಹಾಗೂ ಅನುಭಾವ ತತ್ವಗಳನ್ನು ಜಗತ್ತಿಗೆ ನೀಡಿದ್ದಾನೆ. ಶರಣ ಪರಂಪರೆಯ ವಚನಗಳನ್ನು ಓದಿ ಅರಿತುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಬಸವಣ್ಣನ ವಚನಗಳ ಚಿಂತನೆ ಬೋಧನೆಯೊಂದಿಗೆ ಆಚರಣೆಯೂ ನಡೆಯಬೇಕಿದೆ. ಆಗ ಸಮಾಜ, ದೇಶ ಸುಧಾರಣೆಗೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ಸಾಧಕರಾದ ರಾಹುಲ್ ಸಂಕನೂರ, ವಿಜಯಕುಮಾರ ಚೌರಾಸಿಯಾ, ಸಂಗಮೇಶ ಗುಬ್ಬಿ ಅವರನ್ನು ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿದ ಐಎಎಸ್ ಟಾಪರ್ ರಾಹುಲ್ ಸಂಕನೂರ ಮಾತನಾಡಿ, ಗುರಿ ದೊಡ್ಡದಾಗಿರಬೇಕೆನ್ನುವ ಮಹತ್ವದ ಪಾಠವನ್ನು ಮಕ್ಕಳಿಗೆ ಕಲಿಸಬೇಕು. ದೊಡ್ಡ ಗುರಿ ಇಟ್ಟುಕೊಳ್ಳುವುದರೊಂದಿಗೆ ಶ್ರದ್ಧೆ, ನಿಷ್ಠೆಯಿಂದ ಗುರಿಯೆಡೆಗೆ ಸಾಗಬೇಕು ಎಂಬುದನ್ನು ಪಾಲಕರು ಮಕ್ಕಳಿಗೆ ತಿಳಿಸಿಕೊಡಬೇಕು. ಮಕ್ಕಳನ್ನು ಸಾಧನೆಗೆ ಪ್ರೇರೇಪಿಸುವುದು ಪಾಲಕರ ಜವಾಬ್ದಾರಿ ಎಂದರು.
ಸತತ 4 ವರ್ಷ ಪ್ರಯತ್ನದ ನಂತರ ನಾನು ಐಎಎಸ್ ಉತ್ತೀರ್ಣನಾಗಿದ್ದೇನೆ. ಪರಿಶ್ರಮದಿಂದ ಯಾರಾದರೂ ಸಾಧನೆ ಮಾಡಬಹುದೆಂಬುದಕ್ಕೆ ನಾನೇ ಸಾಕ್ಷಿ ಎಂದರು.
ಚನ್ನಬಸಪ್ಪ ಧಾರವಾಡಶೆಟ್ಟರ ಅಧ್ಯಕ್ಷತೆ ವಹಿಸಿದ್ದರು. ಶ್ರೀಶೈಲಪ್ಪ ಶೆಟ್ಟರ, ಜಗದೀಶ ಕಾಳಣ್ಣವರ, ಅಂದಾನಪ್ಪ ಹರದಾರಿ, ಬಸವರಾಜ ಹತ್ತಿಕಾಳ, ಅಂದಾನಪ್ಪ ಸಜ್ಜನರ, ವೀರಣ್ಣ ನೀರಲಗಿ, ತಾರಾದೇವಿ ವಾಲಿ, ಜಯಲಕ್ಷ್ಮಿ ಉಮಚಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
MUST WATCH
ಹೊಸ ಸೇರ್ಪಡೆ
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ