ಸರಕಾರಿ ಬಂಗಲೆಗಾಗಿ ಏಳು ಪತ್ರ ಬರೆದಿದ್ದೇನೆ, ಸರಕಾರದ ಮುಂದೆ ಭಿಕ್ಷೆ ಬೇಡುವುದಿಲ್ಲ: ಹೊರಟ್ಟಿ
Team Udayavani, Sep 3, 2021, 10:23 AM IST
ಹುಬ್ಬಳ್ಳಿ: ತಮಗೆ ಸರಕಾರಿ ಬಂಗಲೆ ನೀಡಿಕೆ ಬಗ್ಗೆ ಸರಕಾರದ ಮುಂದೆ ಭಿಕ್ಷೆ ಬೇಡುವುದಿಲ್ಲ. ಈಗಾಗಲೇ ಏಳು ಪತ್ರ ಬರೆದಿದ್ದೇನೆ, ಬಂಗಲೆ ನೀಡಿದರೆ ನೀಡಲಿ ಇಲ್ಲವಾದರೆ ಬಿಡಲಿ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದರು.
ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಲ್ಯಾಮಿಂಗ್ಟನ್ ಶಾಲೆಯಲ್ಲಿ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಗಲೆಗಾಗಿ ಇನ್ನೊಂದು ಪತ್ರ ಬರೆಯುವೆ. ಮುಂದಿನ ನಿರ್ಧಾರ ಸರಕಾರಕ್ಕೆ ಬಿಟ್ಟಿದ್ದು, ಇನ್ನೆಂದೂ ಬಂಗಲೆ ವಿಚಾರವಾಗಿ ಕೇಳುವುದಿಲ್ಲ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೌಲ್ಯಧಾರಿತ ರಾಜಕೀಯ ಇಲ್ಲವಾಗುತ್ತಿದೆ. ಹಳೇ ಚುನಾವಣೆ ವ್ಯವಸ್ಥೆ ಇದೀಗ ಮುಗಿದ ಅಧ್ಯಾಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಶಾಲೆಗಳ ಆರಂಭದ ಕುರಿತು, ಈ ಹಿಂದೆಯೇ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವರಿಗೆ ಹೇಳಿದ್ದೆ. ಈಗಲೂ ಹೇಳುತ್ತೇನೆ ಶಾಲೆಗಳು ಆರಂಭಿಸಬೇಕು ಎಂದರು.
ಇದನ್ನೂ ಓದಿ:ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ: 533 ಮತಗಟ್ಟೆಗಳಲ್ಲಿ ಮತದಾನ ಶುರು
ಶಿಕ್ಷಕರ ವರ್ಗಾವಣೆ ಅರ್ಧ ತಾಸಿನ ಕೆಲಸ, ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆಲಸ ಆಗುತ್ತಿಲ್ಲ. ಕಳೆದ ನಾಲ್ಕು ವರ್ಷಗಳಿಂದ ಶಿಕ್ಷಕರು ವರ್ಗಾವಣೆ ಆಗಿಲ್ಲ. ಶಿಕ್ಷಣ ಇಲಾಖೆಯಲ್ಲಿ ನೂರಾರು ಕಡಿತಗಳು ಹಾಗೇ ಉಳಿದಿವೆ ಎಂದರು.
ಕೋವಿಡ್ ಭೀತಿ ಇರುವುದರಿಂದ ಮಾಸ್ಕ್ ಹಾಕದೆ ಇರುವವರಿಗೆ ಮತ ಹಾಕಲು ಅವಕಾಶ ಕೊಡಬಾರದು ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಜೋಶಿ ಪುತ್ರಿಯ ಮದುವೆಗೆ ಕೋವಿಡ್ ರೂಲ್ಸ್ ಬ್ರೇಕ್ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಡಿಸಿ ಸಹ ರಾಜಕಾರಣಿಗಳ ಕೈಯಲ್ಲಿ ಕೆಲಸ ಮಾಡುವವರು. ದಕ್ಷತೆಯಿಂದ ಕೆಲಸ ಮಾಡಬೇಕು. ಸದನದಲ್ಲಿ ಈ ಬಗ್ಗೆ ಯಾರಾದರೂ ಪ್ರಶ್ನೆ ಮಾಡಿದರೆ, ನಾನು ಸಹ ಈ ಬಗ್ಗೆ ಧ್ವನಿ ಎತ್ತುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ