ಬಸವರಾಜ ಬೊಮ್ಮಾಯಿ ರಾಜ್ಯ ಕಂಡ ದುರ್ಬಲ ಸಿಎಂ: ಸಿದ್ದರಾಮಯ್ಯ

ಚುನಾವಣೆ ಸಂದರ್ಭ ಬಂದಾಗ ಮಾತ್ರ ಮಹಾದಾಯಿ ನೆನಪಾಗುತ್ತದೆ

Team Udayavani, Jan 3, 2023, 6:35 AM IST

ಬಸವರಾಜ ಬೊಮ್ಮಾಯಿ ರಾಜ್ಯ ಕಂಡ ದುರ್ಬಲ ಸಿಎಂ: ಸಿದ್ದರಾಮಯ್ಯ

ಹುಬ್ಬಳ್ಳಿ: ಬಸವರಾಜ ಬೊಮ್ಮಾಯಿ ಅವರು ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ. ಧಮ್‌ ಇದ್ರೆ, ತಾಕತ್ತು ಇದ್ದರೆ ಎಂದು ಮಾತನಾಡುವ ನೀವು ಪ್ರಧಾನಿ ನರೇಂದ್ರ ಮೋದಿ ಎದುರು ಗಡಗಡ ನಡುಗುವುದ್ಯಾಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ನಗರದಲ್ಲಿ ಸೋಮವಾರ ಕಾಂಗ್ರೆಸ್‌ ಆಯೋಜಿಸಿದ್ದ ಮಹಾದಾಯಿ ಜಲ-ಜನ ಆಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಬೊಮ್ಮಾಯಿಗೆ ತಾಕತ್ತು, ಧಮ್‌ ಇದ್ದಿದ್ದರೆ ನಾವು ಆರಂಭಿಸಿದ್ದ ಮಹಾ ದಾಯಿ ಯೋಜನೆಯನ್ನು ಪೂರ್ಣ ಗೊಳಿಸಬೇಕಿತ್ತು. ನ್ಯಾಯಾಧಿಕರಣದ ಆದೇಶ ಬಂದು ನಾಲ್ಕು ವರ್ಷಗಳು ಕಳೆದಿವೆ. ಇದರಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದರೂ ಕೇಳುವ ತಾಕತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಇತ್ಯರ್ಥ ಪಡಿಸಬಹುದಿತ್ತು. ಆದರೆ ಇವರಿಗೆ ಈ ಭಾಗದ ಯೋಜನೆ ಸಾಕಾರಗೊಂಡು ಜನರಿಗೆ, ರೈತರಿಗೆ ನೀರು ಕೊಡುವುದು ಬೇಡ. ಚುನಾವಣೆ ಸಂದರ್ಭ ಮಹಾದಾಯಿ ನೆನಪಾಗುತ್ತದೆ. ಈ ಬೂಟಾಟಿಕೆ ಯಾಕೆ ಎಂದು ಪ್ರಶ್ನಿಸಿದರು.

ಜನದ್ರೋಹಿ ಬಿಜೆಪಿ ಎಲ್ಲ ಇಲಾಖೆಗಳಲ್ಲೂ ಲೂಟಿ ಮಾಡುತ್ತಿದೆ. ವಿಧಾನಸೌಧದ ಗೋಡೆಗಳು ಲೂಟಿ- ಲಂಚ ಎಂದು ಪಿಸುಗುಡುತ್ತಿವೆ. ಸುಳ್ಳು ಹಾಗೂ ಢೋಂಗಿತನ ಬಿಟ್ಟು ಜನರ ಪರ ಕೆಲಸ ಮಾಡಿ. ಜನರ ಬದಕು ರೂಪಿಸುವ ಕೆಲಸ ಮಾಡುವುದು ಬಿಟ್ಟು ಅವರ ಭಾವನೆಗಳಿಗೆ ಬೆಂಕಿ ಹಚ್ಚುವ ಕೆಲಸ ನಡೆಯುವುದಿಲ್ಲ. ಅಧಿಕಾರಕ್ಕೆ ಬಂದ ಮೇಲೆ ಯಾವ ಯೋಜನೆಗೆ ನ್ಯಾಯ ಕೊಟ್ಟಿದ್ದೀರಿ ಎಂದು ಆತ್ಮಾವಲೋಕನ ಮಾಡಿಕೊಳ್ಳಿ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿ ಕಾರಕ್ಕೆ ಬರುವುದು ನಿಶ್ಚಿತ. ಆ ಬಳಿ ಕ ಐದು ವರ್ಷಗಳಲ್ಲಿ ರಾಜ್ಯದ ಎಲ್ಲ ನೀರಾವರಿ ಯೋಜನೆಗಳಿಗೆ 2 ಲಕ್ಷ ಕೋಟಿ ರೂ. ಖರ್ಚು ಮಾಡಿ ಪೂರ್ಣ ಮಾಡುತ್ತೇವೆ ಎಂದರು.

ಕಾಂಗ್ರೆಸ್‌ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಮಾತನಾಡಿ, ಕಾಂಗ್ರೆಸ್‌ ಅಧಿಕಾರದ ಲ್ಲಿದ್ದ ಸಂದರ್ಭ ಬೇಷರತ್ತಾಗಿ ನೀಡಿದ್ದ ಅನುಮತಿಯನ್ನು ತಡೆಹಿಡಿದವರು ಬಿಜೆಪಿಯವರು. ಇವರಿಂದ ಮಹಾದಾಯಿ ಯೋಜನೆ ಸಾಕಾರಗೊಳ್ಳುತ್ತದೆ ಎಂಬುದು ಸತ್ಯಕ್ಕೆ ದೂರ. ಕೇವಲ ಸುಳ್ಳು, ಜನರನ್ನು ವಂಚಿಸಿ ಸುಳ್ಳಿನ ವಿಜಯೋತ್ಸವ ಮಾಡುತ್ತಾರೆ. ಇವರು ನೀರು ತರುವುದಿಲ್ಲ. ಅದರ ಹೆಸರಲ್ಲಿ ಚುನಾವಣೆ ರಾಜಕಾರಣ ಮಾಡುವುದೇ ಇವರ ಕೆಲಸ. ಅಧಿ ಕಾರಕ್ಕೆ ಬಂದ ಮೊದಲ ಅಧಿ ವೇಶನದಲ್ಲಿ ಸಮರ್ಪಕ ಅನುದಾನ ನೀಡಿ ಮಹಾದಾಯಿ ನೀರು ಕೊಡುವ ಕೆಲಸ ಮಾಡುತ್ತೇವೆ ಎಂದರು.

ಪ್ರಮುಖರಾದ ಬಿ.ಕೆ ಹರಿಪ್ರಸಾದ್‌, ಸತೀಶ ಜಾರಕಿ ಹೊಳಿ, ಸಲೀಂ ಅಹ್ಮದ್‌, ಎಚ್‌.ಕೆ. ಪಾಟೀಲ್‌, ಸಂತೋಷ ಲಾಡ್‌, ಬಸವರಾಜ ರಾಯರೆಡ್ಡಿ, ಪಿ.ಸಿ. ಸಿದ್ಧನಗೌಡ್ರ, ಕೆ.ಎಚ್‌.ಮುನಿಯಪ್ಪ, ಪ್ರೊ| ಐ.ಜಿ. ಸನದಿ, ಪ್ರಸಾದ ಅಬ್ಬಯ್ಯ, ಅಂಜಲಿ ನಿಂಬಾಳ್ಕರ್‌, ಶ್ರೀನಿವಾಸ ಮಾನೆ ಮುಂತಾದವರು ಉಪಸ್ಥಿತರಿದ್ದರು.

ಅಧಿಕಾರದಲ್ಲಿ ಯಾಕಿರಬೇಕು?
ಹಸಿ ಸುಳ್ಳು ಬಿಟ್ಟರೆ ಬಿಜೆಪಿಯವರ ಸಾಧನೆ ಏನಿಲ್ಲ. ಈ ಭಾಗದವರೇ ಕೇಂದ್ರ ಸಚಿವರು, ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಇದ್ದರೂ ಪ್ರತಿ ಯೊಂದರಲ್ಲೂ ಅನ್ಯಾಯವಾಗಿದೆ. ಡಬಲ್‌ ಎಂಜಿನ್‌ ಸರಕಾರವಿದ್ದರೂ ಈ ಭಾಗಕ್ಕೆ ಕುಡಿಯುವ ನೀರು ಸಿಗುತ್ತಿಲ್ಲ. ನ್ಯಾಯ ಕೊಡಲು ಆಗದಿ ದ್ದರೆ ಅ ಧಿಕಾರದಲ್ಲಿ ಯಾಕಿರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದರು. ರೈತರು, ಮಹಾದಾಯಿ ವಿಚಾರದಲ್ಲಿ ಇಂಥ ನಾಟಕ ಸರಿಯಲ್ಲ. ನೀವು ನಿಜವಾಗಿಯೂ ಮಾಡಿಸಿದ್ದರೆ ಹೋರಾಡಿದ ಒಂದಾದರೂ ಸಂಘಟನೆಗಳು ನಿಮ್ಮೊಂದಿಗೆ ಬಂದು ವಿಜಯೋತ್ಸವ ಮಾಡಿದ್ದಾರೆಯೇ? ನಿಮ್ಮ ನಾಯಕರೇ ಢೋಂಗಿ ವಿಜಯೋತ್ಸವದಲ್ಲಿ ಪಾಲ್ಗೊಂಡಿರಲಿಲ್ಲ ಎಂದು ಹೇಳಿದರು. ರಾಜಕಾರಣಕ್ಕಾಗಿ ರಾಜ್ಯದಲ್ಲಿ ಧರ್ಮ-ಜಾತಿಗಳ ನಡುವೆ ಕೋಮು ಸಂಘರ್ಷ ಹೆಚ್ಚಿಸಿ ಅಭಿವೃದ್ಧಿ ಇಲ್ಲದಂತೆ ಮಾಡಿದ್ದಾರೆ. ಹೀಗಾಗಿಯೇ ರಾಜ್ಯಕ್ಕೆ ಯಾವುದೇ ಕೈಗಾರಿಕೆಗಳು ಬರುತ್ತಿಲ್ಲ. ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಮುಂದಿನ ಬಜೆಟ್‌ ಮಾಡುವ ಕಾಂಗ್ರೆಸ್‌ ಸರಕಾರ ಮಹಾದಾಯಿಗೆ ಒಂದು ಸಾವಿ ರ ಕೋಟಿ ರೂ. ಮೀಸಲಿಟ್ಟು ಯೋಜನೆ ಪೂರ್ಣಗೊಳಿಸುತ್ತೇವೆ ಎಂದರು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.