ಲಾಕ್ಡೌನ್ ಸಡಿಲಿಕೆ ದುರುಪಯೋಗವಾಗದಂತೆ ನೋಡಿಕೊಳ್ಳಿ
Team Udayavani, May 2, 2020, 3:36 PM IST
ಅಳ್ನಾವರ: ಕಳೆದ ಒಂದು ತಿಂಗಳಿನಿಂದ ಲಾಕ್ ಡೌನ್ ಘೋಷಣೆಯಾಗಿ ಸ್ಥಗಿತಗೊಂಡಿದ್ದ ಅಗತ್ಯ ಕೆಲಸಗಳಿಗೆ ಸರ್ಕಾರ ಅನುಮತಿ ನೀಡಿದೆ. ದುಡಿಮೆಗಾರರು, ವ್ಯವಹಾರಸ್ಥರು ಹಾಗೂ ರೈತರಿಗೆ ಅನುಕೂಲವಾಗಲಿದೆ. ಆದರೂ ಸರ್ಕಾರದ ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ಶಾಸಕ ಸಿ.ಎಂ. ನಿಂಬಣ್ಣವರ ಹೇಳಿದರು
ಪಪಂದಲ್ಲಿ ಅಧಿಕಾರಿಗಳು, ಉದ್ಯಮಿಗಳು ಹಾಗೂ ವರ್ತಕರ ಸಭೆ ನಡೆಸಿ ಅವರು ಮಾತನಾಡಿದರು. ನಿಯಮಾವಳಿಗಳಲ್ಲಿ ಸ್ವಲ್ಪ ಮಟ್ಟಿಗೆ ಸಡಿಲಿಕೆ ಮಾಡಿ ಆರ್ಥಿಕ ಚಟುವಟಿಕೆ ಕೈಕೊಳ್ಳಲು ಅನುಕೂಲ ಮಾಡಿಕೊಡಲಾಗಿದೆ. ಈ ಸಡಿಲಿಕೆಯು ಜನದಟ್ಟಣೆಗೆ ಕಾರಣವಾಗದಂತೆ ನೋಡಿಕೊಳ್ಳಬೇಕೆಂದರು.
ಹೆಚ್ಚಿನ ದರಕ್ಕೆ ವಸ್ತುಗಳನ್ನು ಮಾರಾಟ ಮಾಡುವುದು ಕಂಡುಬಂದರೆ ಅಂತಹವರ ಮೇಲೆ ಕ್ರಮ ಕೈಕೊಳ್ಳಬೇಕು. ಅವಶ್ಯ ವಸ್ತುಗಳು ಜನರಿಗೆ ಸರಾಗವಾಗಿ ಸಿಗುವಂತೆ ನೋಡಿಕೊಳ್ಳಬೇಕು. ಕೆಲಸಕ್ಕೆ ಹೊರಗಿನಿಂದ ಕಾರ್ಮಿಕರನ್ನು ಕರೆತರಬಾರದು. ರೈತರು ಕೃಷಿ ಚಟುವಟಿಕೆಗಳಿಗೆ ಹೊಲಗಳಿಗೆ ಓಡಾಡಲು ಅಡಚಣೆ ಮಾಡಬಾರದೆಂದು ಹೇಳಿದರು.
ತಹಶೀಲ್ದಾರ್ ಅಮರೇಶ ಪಮ್ಮಾರ, ಪಪಂ ಮುಖ್ಯಾಧಿಕಾರಿ ವೈ.ಜಿ. ಗದ್ದಿಗೌಡರ, ಪಿಎಸ್ಐ ಎಸ್.ಆರ್. ಕಣವಿ, ಎಂಎಸ್ ಐಎಲ್ ನಿರ್ದೇಶಕ ಶಿವಾಜಿ ಡೊಳ್ಳಿನ, ಸರ್ಕಾರಿ ಆಸ್ಪತ್ರೆ ವೈದ್ಯ ಡಾ| ಎನ್.ಎಸ್. ಪಾಟೀಲ, ಲಿಂಗರಾಜ ಮೂಲಿಮನಿ, ನಾರಾಯಣ ಮೋರೆ, ಉದ್ದಿಮೆದಾರ ಎಂ.ಸಿ.ಹಿರೇಮಠ, ಬಸವೇಶ ಹಟ್ಟಿಹೋಳಿ, ಯಲ್ಲಾರಿ ಹುಬ್ಬಳಿಕರ, ಸುನಂದಾ ಕಲ್ಲು, ರಾಜೇಶ ಬೈಕೇರಿಕರ,ಪ್ರತಾಪ ಕಲಾಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ