ಕೃಷಿ ವಿವಿಯಲ್ಲಿ ಬೆಳಗಾವಿ ವಿಭಾಗ ಮಟ್ಟದ ಕಾರ್ಯಕ್ರಮ
Team Udayavani, Sep 7, 2017, 12:37 PM IST
ಧಾರವಾಡ: ಬೆಳಗಾವಿ ವಿಭಾಗ ಮಟ್ಟದ “ಸರಕಾರಿ ಸೌಲಭ್ಯಗಳ ವಿತರಣಾ’ ಸಮಾವೇಶವನ್ನು ಮೂರು ದಿನಗಳ ಕಾಲ ಅಕ್ಟೋಬರ್ ತಿಂಗಳಲ್ಲಿ ಇಲ್ಲಿನ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಸಮಾವೇಶದ ಸಿದ್ಧತೆ ಕುರಿತಂತೆ ಪೂರ್ವಭಾವಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಅಧಿಕಾರಕ್ಕೆ ಬಂದು ನಾಲ್ಕು ವರ್ಷ, ನಾಲ್ಕು ತಿಂಗಳಾಗಿವೆ. ಚುನಾವಣೆಗೂ ಮುನ್ನ ನೀಡಿದ್ದ ಪ್ರಣಾಳಿಕೆಯ ಭರವಸೆಯನ್ನು ಬಹುತೇಕ ಅನುಷ್ಠಾನಕ್ಕೆ ತಂದಿದ್ದೇವೆ.
ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳ ಫಲಾನುಭವಿಗಳನ್ನು ಸಮಾವೇಶದಲ್ಲಿ ಕರೆ ತಂದು ಅವರ ಮನದ ಮಾತು ಕೇಳುತ್ತೇವೆ. ಹೀಗಾಗಿ 2017-18ನೇ ಸಾಲಿನ ಫಲಾನುಭವಿಗಳ ಪಟ್ಟಿಯನ್ನು ಸೆ.30ರೊಳಗೆ ಸಿದ್ದಪಡಿಸುವಂತೆ ಹೇಳಿದ್ದೇವೆ. ಫಲಾನುಭವಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ಸಚಿವರು, ಶಾಸಕರು ಹಾಗೂ ಅಧಿಕಾರಿ ವರ್ಗದವರಿಗೆ ನೀಡಲಾಗಿದೆ ಎಂದರು.
ಇದು ಸರಕಾರದ ಕಾರ್ಯಕ್ರಮ ಆಗಿದ್ದು, ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಏಳು ಜಿಲ್ಲೆಗಳ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ವಿರೋಧ ಪಕ್ಷದವರನ್ನೂ ಸಮಾವೇಶಕ್ಕೆ ಆಮಂತ್ರಿಸಲಾಗುವುದು. ಈ ಸಮಾವೇಶದ ಯಶಸ್ವಿ ಮಾಡುವ ನಿಟ್ಟಿನಲ್ಲಿ ರೂಪರೇಷೆ ಸಿದ್ದಪಡಿಸಲು ಸೂಚನೆ ನೀಡಿದ್ದೇವೆ ಎಂದರು.
ಪೂರ್ವಭಾವಿ ಸಭೆ: ಇದಕ್ಕೂ ಮುನ್ನ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ದೇಶಪಾಂಡೆ, ಬೆಳಗಾವಿ ವಿಭಾಗದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕೂಡಲೇ ತಮ್ಮ ಜಿಲ್ಲೆಗಳ ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಬೇಕು.
ಸರಕಾರದ ಯೋಜನೆಗಳ ಫಲಾನುಭವಿಗಳನ್ನು ಒಂದೆಡೆ ಸೇರಿಸಿ ಸೌಲಭ್ಯಗಳನ್ನು ವಿತರಿಸಬೇಕು ಎಂಬುದು ಮುಖ್ಯಮಂತ್ರಿಗಳ ಆಶಯವಾಗಿದೆ. ಈ ಸಮಾವೇಶ ಸರಕಾರದ ಯೋಜನೆಗಳ ಮೌಲ್ಯಮಾಪನಕ್ಕೂ ಅನುಕೂಲವಾಗಲಿದೆ ಎಂದರು. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್ ಸಚಿವ ಎಚ್. ಕೆ. ಪಾಟೀಲ ಮಾತನಾಡಿದರು.
ಬೆಳಗಾವಿ ವಿಭಾಗದಲ್ಲಿ ಸುಮಾರು 1500 ಗ್ರಾಮ ಪಂಚಾಯತಿಗಳಿವೆ. ಪ್ರತಿಯೊಂದು ಗ್ರಾಪಂ ವ್ಯಾಪ್ತಿಯ ಫಲಾನುಭವಿಗಳು ಸಮಾವೇಶದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಬೇಕು. ಅಚ್ಚುಕಟ್ಟಾದ ಸಾರಿಗೆ, ಆಹಾರ, ವೇದಿಕೆ ನಿರ್ಮಾಣಕ್ಕೆ ಪ್ರತ್ಯೇಕ ಸಮಿತಿಗಳನ್ನು ರಚಿಸಿ ಸಮಾವೇಶ ಯಶಸ್ವಿಗೊಳಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್
Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ
Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ
Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ
Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ
MUST WATCH
ಹೊಸ ಸೇರ್ಪಡೆ
Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ
Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ
Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ
List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!
Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್ಗೂ ಹಾನಿ