ಬೇಂದ್ರೆ ಸಾರಿಗೆ ರಹದಾರಿ ನವೀಕರಣ ತೀರ್ಪು ಇಂದು


Team Udayavani, Sep 25, 2019, 9:19 AM IST

huballi-tdy-1

ಧಾರವಾಡ: ಡಿಸಿ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದೀಪಾ ಚೋಳನ್‌ ಅಧ್ಯಕ್ಷತೆಯಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ಮಂಗಳವಾರ ಜರುಗಿತು.

ಮೋಟಾರು ವಾಹನ ನಿಯಮಾವಳಿ 1989 ನಿಯಮ (55) ರ ಪ್ರಕಾರ ಮಜಲು, ಸರಕು ಸಾಗಣೆ, ಮೋಟಾರ್‌ಕ್ಯಾಬ್‌, ಶಾಲಾವಾಹನ, ಆಟೋರಿಕ್ಷಾಗಳಿಗೆ ರಹದಾರಿಗಳನ್ನು ಸಭೆಯಲ್ಲಿ ನವೀಕರಿಸಲಾಯಿತು. ಈ ವೇಳೆ ಖಾಸಗಿ ಮಜಲು ವಾಹನಗಳ ರಹದಾರಿಗಾಗಿ ಧಾರವಾಡ ನಗರದ ವಿವಿಧ ಎಂಟು ಮಾರ್ಗಗಳಲ್ಲಿ ನವೀಕರಣ ಕೋರಿ ಬೇಂದ್ರೆ ಸಾರಿಗೆ ಸಂಸ್ಥೆ ಸಲ್ಲಿಸಿರುವ ಅರ್ಜಿ ಕುರಿತು ವಿಚಾರಣೆ ಕೈಗೊಳ್ಳಲಾಯಿತು.

ನವನಗರದಿಂದ ಧಾರವಾಡ ಕವಿವಿ, ಧಾರವಾಡ ಸಿಬಿಟಿಯಿಂದ ಕಲ್ಯಾಣ ನಗರ, ಕೋಟೂರು, ಶಿವಳ್ಳಿ, ಸಾಧನಕೇರಿ, ಮಂಡಿಹಾಳ, ತೇಜಸ್ವಿನಗರ ಮಾರ್ಗಗಳಲ್ಲಿ ಎಂಟು ರಹದಾರಿಗಳನ್ನು ನವೀಕರಿಸಬೇಕು ಎಂದು ಬೇಂದ್ರೆ ಸಂಸ್ಥೆಯ ಪರ ವಕೀಲ ನಾಗೇಶ್‌ ಎಂ.ಇ. ಮನವಿ ಮಾಡಿದರು.

ಆಗ ಪ್ರತಿವಾದ ಮಂಡಿಸಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಸಂಸ್ಥೆಯ ಕಾನೂನು ಅ ಧಿಕಾರಿ ನಾರಾಯಣಪ್ಪ, ಧಾರವಾಡ ಶಹರದ ಒಳಮಾರ್ಗಗಳಲ್ಲಿ ರಹದಾರಿ ಹೊಂದಿರುವ ಬೇಂದ್ರೆ ಸಾರಿಗೆ ಸಂಸ್ಥೆಯು ಆ ಮಾರ್ಗಗಳಲ್ಲಿ ನಿಯಮಿತವಾಗಿ ವಾಹನಗಳನ್ನು ಓಡಿಸುತ್ತಿಲ್ಲ. ಸಾರ್ವಜನಿಕರಿಗೆ ಸೇವೆ ನೀಡುತ್ತಿಲ್ಲ. ಈ ಕುರಿತು ದೂರು ಇರುವುದರಿಂದ ನವೀಕರಣ ಮಾಡಬಾರದು ಎಂದು ವಿನಂತಿಸಿದರು.

ಉಭಯ ಪಕ್ಷಗಾರರ ವಾದ ಆಲಿಸಿದ ಡಿಸಿ ದೀಪಾ ಚೋಳನ್‌ ಅವರು, ಈ ಕುರಿತ ಆದೇಶವನ್ನು ಸೆ. 25ರಂದು ಪ್ರಕಟಿಸುವುದಾಗಿ ತಿಳಿಸಿದರು. ಇದಲ್ಲದೇ ಬೇಂದ್ರೆ ಸಂಸ್ಥೆಯ ವಾಹನಗಳು ಬಿಆರ್‌ಟಿಎಸ್‌ ನಿಲ್ದಾಣಗಳಿಂದ ಒಳಮಾರ್ಗಗಳಿಗೆ ಸಂಪರ್ಕ ಸೇವೆಒದಗಿಸಲು ಮುಂದೆ ಬರಬೇಕು ಎಂದರು.

ಬಸ್‌ನಲ್ಲಿ ಗಾಲಿ ಖುರ್ಚಿ: ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಪ್ರಕಾರ ವಿಕಲಚೇತನರಿಗೆ ಸಾರ್ವಜನಿಕ ಮತ್ತು ಖಾಸಗಿ ಸಾರಿಗೆ ವಾಹನಗಳಲ್ಲಿ ಅನುಕೂಲ ಕಲ್ಪಿಸಲು ಗಾಲಿ ಖುರ್ಚಿ ಅಳವಡಿಸಬೇಕು. ಬಸ್‌ನಿಲ್ದಾಣಗಳಲ್ಲಿ ಕೂಡಾ ಈ ಸೌಲಭ್ಯಗಳು ಒದಗಿಸಬೇಕು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು ಹಾಗೂ ಬೇಂದ್ರೆ ಸಾರಿಗೆ ಸಂಸ್ಥೆಗಳ ಮಾಲೀಕರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ರವೀಂದ್ರ ಕವಲಿ, ಅಪ್ಪಯ್ಯ ನಾಲತ್ವಾಡಮಠ, ಡಿವೈಎಸ್‌ಪಿ ಗುರು ಮತ್ತೂರ, ವಾಕರಸಾಸಂ ಅಧಿಕಾರಿಗಳಾದ ವಿವೇಕಾನಂದ ವಿಶ್ವಜ್ಞ, ಅಶೋಕ ಪಾಟೀಲ ಮತ್ತಿತರರಿದ್ದರು.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.