ಶಿಸ್ತು ಪಾಠ ಮಾಡಿದ ಭಾಗವತ್
Team Udayavani, Aug 21, 2017, 12:44 PM IST
ಹುಬ್ಬಳ್ಳಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ ಭಾಗವತ ಅವರು ಹುಬ್ಬಳ್ಳಿ ಭೇಟಿಯ ಕೊನೆಯ ದಿನ ಭಾನುವಾರ ಸಂಘದ ಪ್ರಮುಖರಿಗೆ ಸಂಘದ ಶಿಸ್ತು ಹಾಗೂ ಸಮಾಜಮುಖೀ ಸೇವೆ ಕುರಿತು ಬೋಧಿಸಿದರು.
ಇಲ್ಲಿನ ಕುಸುಗಲ್ ರಸ್ತೆಯ ಶ್ರೀನಿವಾಸ ಗಾರ್ಡನ್ನಲ್ಲಿ ನಡೆದ ಆರೆಸ್ಸೆಸ್ ಪ್ರಮುಖರ ಬೈಠಕ್ನಲ್ಲಿ ಮೋಹನ ಭಾಗವತ ಅವರು, ಸ್ವಯಂ ಸೇವಕರು ತಮ್ಮ ಬದುಕಿನಲ್ಲಿ ಸ್ವಯಂ ಶಿಸ್ತು ರೂಢಿಸಿಕೊಂಡು ಸಮಾಜಕ್ಕೆ ಹೇಗೆ ಮಾದರಿಯಾಗಿರಬೇಕು.
ಸಮಾಜಮುಖೀಯಾಗಿ ಹೇಗೆ ಕೆಲಸ ಮಾಡಬೇಕು ಸೇರಿದಂತೆ ಹಲವು ವಿಷಯಗಳ ಕುರಿತು ಸಂಘದ ಪ್ರಮುಖರಿಗೆ ತಿಳಿಸಿಕೊಟ್ಟರು. ಸಮಾಜ ಕೆಟ್ಟ ದೃಷ್ಟಿಯಿಂದ ನೋಡುವಂಥ ಕಾರ್ಯಗಳಲ್ಲಿ ಸಂಘದ ಸ್ವಯಂ ಸೇವಕರು ತೊಡಗಿಕೊಳ್ಳದೆ ಸಮಾಜಮುಖೀಯಾಗಿ ಕೆಲಸ ಮಾಡಬೇಕು.
ಸಂಘದ ಕಾರ್ಯಗಳಲ್ಲಿ ಹೆಚ್ಚೆಚ್ಚು ತೊಡಗಿಕೊಳ್ಳುವ ಮೂಲಕ ಗ್ರಾಮೀಣ ಭಾಗದಲ್ಲಿ ಶಾಖೆಗಳನ್ನು ಆರಂಭಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನಗಳಾಗಬೇಕು ಎಂದು ತಿಳಿಸಿದರು. ರಾಜ್ಯದ ವಿದ್ಯಮಾನಗಳ ಬಗ್ಗೆ ಪ್ರಮುಖರಿಂದ ಮಾಹಿತಿ ಪಡೆದ ಭಾಗವತ ಅವರು, ಸಂಘಟನೆಯಲ್ಲಿ ತೊಡಗಿರುವ ಸಂಘಟಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಯುವಕರನ್ನು ಸಂಘಕ್ಕೆ ಆಕರ್ಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಿರಿ. ಸಾಮಾಜಿಕ ಸೇವೆಗಳು ಸಮಾಜದ ಎಲ್ಲ ಸ್ತರದ ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಸ್ವಯಂ ಸೇವಕರು ಮುಂದಾಗಬೇಕು ಎಂದರು. ಧ್ವನಿಯಿಲ್ಲದವರಿಗೆ ಧ್ವನಿಯಾಗುವ ಕೆಲಸ ಸ್ವಯಂ ಸೇವಕರಿಂದ ಆಗಬೇಕು. ಈ ನಿಟ್ಟಿನಲ್ಲಿ ಸಮಾಜಕ್ಕೆ ಹತ್ತಿರವಾಗುವಂಥ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ