ವಾಕರಸಾ ಸಿಬ್ಬಂದಿ ಹಾಜರಾತಿಗೆ ಬಯೋಮೆಟ್ರಿಕ್‌


Team Udayavani, Sep 23, 2019, 10:35 AM IST

huballi-tdy-3

ಹುಬ್ಬಳ್ಳಿ: ಸಮಯಪಾಲನೆ, ಕರ್ತವ್ಯದಲ್ಲಿ ಶಿಸ್ತು ಮೂಡಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತನ್ನ ಸಿಬ್ಬಂದಿಗೆ ಬಯೋಮೆಟ್ರಿಕ್‌ ಹಾಜರಾತಿ ವ್ಯವಸ್ಥೆ ಅನುಷ್ಠಾನಕ್ಕೆ ಮುಂದಾಗಿದೆ.

ಕೆಲಸಕ್ಕೆ ಎಷ್ಟೊತ್ತಿಗೆ ಬಂದರೂ ನಡೆಯುತ್ತೆ ಎನ್ನುವ ಮನಸ್ಥಿತಿಯ ಸಿಬ್ಬಂದಿ ಆಟಾಟೋಪಕ್ಕೆ ಇದರಿಂದ ಸಂಪೂರ್ಣ ಕಡಿವಾಣ ಬೀಳಲಿದೆ. ಕರ್ತವ್ಯಕ್ಕೆ ವಿಳಂಬ ಹಾಜರಿ, ತಡವಾಗಿ ಬಂದರೆ ಕೇಳುವರ್ಯಾರುಎನ್ನುವ ಅಶಿಸ್ತು, ಕರ್ತವ್ಯದ ಹೆಸರಲ್ಲಿನ ವೈಯಕ್ತಿಕ ಕೆಲಸಕ್ಕೆ ತಿರುಗಾಡುತ್ತಿದ್ದ ಸಿಬ್ಬಂದಿ ಚಟುವಟಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಬಯೋಮೆಟ್ರಿಕ್‌ ವ್ಯವಸ್ಥೆಗೆ ಮುಂದಾಗಿದೆ.

ಕೇಂದ್ರ ಕಚೇರಿಯಿಂದ ಹಿಡಿದು ಡಿಪೋವರೆಗೂ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯಗೊಳ್ಳಲಿದ್ದು, ವಾಯವ್ಯ ಸಾರಿಗೆ ಸಂಸ್ಥೆಯ ಈ ಪ್ರಯತ್ನ ಇತರೆ 4 ಸಂಸ್ಥೆಗಳ ಪೈಕಿ ಮೊದಲು. ನಾಲ್ಕು ವರ್ಷಗಳ ಹಿಂದೆಯೇ ಸಂಸ್ಥೆ ವ್ಯಾಪ್ತಿಯಲ್ಲಿ ಬಯೋಮೆಟ್ರಿಕ್‌ ಜಾರಿ ಹಿನ್ನೆಲೆಯಲ್ಲಿ ಪ್ರಾಯೋಗಿಕವಾಗಿ ಕೇಂದ್ರ ಕಚೇರಿಯಲ್ಲಿ ಆಧಾರ ಸಂಖ್ಯೆ ಆಧಾರಿತ ಬಯೋಮೆಟ್ರಿಕ್‌ ಯಂತ್ರಗಳನ್ನು ಅಳವಡಿಸಲಾಗಿತ್ತು. ಆದರೆ ಅಧಿಕಾರಿಗಳ ಬದಲಾವಣೆಯಿಂದ ಇದು ವಿಭಾಗ ಹಾಗೂ ಘಟಕಗಳ ಹಂತಕ್ಕೆ ತಲುಪಲಿಲ್ಲ. ಕೆಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮಯ ಪಾಲನೆ ಮಾಡುತ್ತಿಲ್ಲ ಎನ್ನುವ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ನಡೆದ ಸಂಸ್ಥೆ ಬೋರ್ಡ್‌ ಸಭೆಯಲ್ಲಿ ಚರ್ಚೆ ಮಾಡಿ ನಿರ್ಧಾರಕ್ಕೆ ಬರಲಾಗಿದೆ.

ಆಡಳಿತ-ಮೆಕ್ಯಾನಿಕ್‌ ಸಿಬ್ಬಂದಿಗೆ ಕಡ್ಡಾಯ: ಮೊದಲ ಹಂತದಲ್ಲಿ ಆಡಳಿತ ಸಿಬ್ಬಂದಿ, ಮೆಕ್ಯಾನಿಕ್‌ ಹಾಗೂ ಅಧಿಕಾರಿಗಳನ್ನು ಬಯೋಮೆಟ್ರಿಕ್‌ ವ್ಯಾಪ್ತಿಗೆ ತರಲು ನಿರ್ಧರಿಸಲಾಗಿದೆ. ಈ ಸಿಬ್ಬಂದಿ ಮೇಲೆಯೇ ಕರ್ತವ್ಯದ ಸಮಯಕ್ಕೆ ಬರುವುದಿಲ್ಲ ಎನ್ನುವ ದೂರುಗಳಿವೆ. ಪ್ರಮುಖವಾಗಿ ಕೆಲ ಘಟಕ ವ್ಯವಸ್ಥಾಪಕರು ಪೀಕ್‌ ಅವರ್‌ನಲ್ಲಿ ಡಿಪೋಗಳಲ್ಲಿ ಇರದೆ ಕಿರಿಯ ಅಧಿಕಾರಿಗಳ ಮೇಲೆ ದೂಡುತ್ತಿದ್ದಾರೆ ಎನ್ನುವ ದೂರುಗಳಿವೆ. ಇದರಿಂದ ಬಸ್‌ಗಳ ಕಾರ್ಯಾಚರಣೆಗೆ ತೊಂದರೆಯಾಗುತ್ತಿವೆ. ಅಧಿಕಾರಿಗಳ ವಿಳಂಬ ಹಾಜರಾತಿ ತಡೆಗೆ ಅವರಿಗೂ ಬಯೋಮೆಟ್ರಿಕ್‌ ಕಡ್ಡಾಯವಾಗಲಿದೆ.

 ಕಾಗದ ರಹಿತ ಕಚೇರಿಗೆ ಪ್ರೇರಣೆ: ವಾಯವ್ಯ ಸಾರಿಗೆ ಸಂಸ್ಥೆ ವ್ಯಾಪ್ತಿಯ 51 ಘಟಕ, 9 ವಿಭಾಗೀಯ ಕಚೇರಿ, 9 ವಿಭಾಗೀಯ ಕಾರ್ಯಾಗಾರ, ಪ್ರಾದೇಶಿಕ ಕಾರ್ಯಾಗಾರ, ಪ್ರಾದೇಶಿಕ ತರಬೇತಿ ಕೇಂದ್ರ ಹಾಗೂ ಕೇಂದ್ರ ಕಚೇರಿಗಳಲ್ಲಿ ಬಯೋಮೆಟ್ರಿಕ್‌ ಯಂತ್ರಗಳು ಅಳವಡಿಕೆಯಾಗಲಿವೆ. ಒಟ್ಟು 70 ಬಯೋಮೆಟ್ರಿಕ್‌ ಯಂತ್ರಗಳನ್ನು ಖರೀದಿಸಲು ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ. ಈ ವ್ಯವಸ್ಥೆ ಜಾರಿಗೊಳಿಸುವುದರಿಂದ ಕಾಗದ ರಹಿತ ಕಚೇರಿ ವ್ಯವಸ್ಥೆಗೆ ಪ್ರೇರಣೆಯಾಗಲಿದೆ. ಹಾಜರಾತಿಯನ್ನು ಪೆರೋಲ್‌ ವೇತನ ತಂತ್ರಾಂಶಕ್ಕೆ ಲಿಂಕ್‌ ಮಾಡಲಿದ್ದಾರೆ. ಇದರಿಂದ ತಿಂಗಳ ಕೊನೆಗೆ ವೇತನ ಸಿದ್ಧಪಡಿಸಲು ಹಾಜರಾತಿ ಪುಸ್ತಕ ನಿರ್ವಹಣೆ ಸೇರಿದಂತೆ ಇತರೆ ಕಾರ್ಯಗಳಿಗೆ ಬಳಸುವ ಕಾಗದ ಕೂಡ ಉಳಿಯಲಿದೆ.

ವೇತನ ಕಡಿತ-ಶಿಸ್ತುಕ್ರಮ: ನಿಗದಿತ ಸಮಯಕ್ಕಿಂತ ಕೊಂಚ ತಡವಾಗಿ ಬಂದರೂ ಬಾಕಿ ರಜೆಗಳಲ್ಲಿ ಕಡಿತ, ವೇತನ ಕಡಿತ, ಪುನರಾವರ್ತನೆಯಾದರೆ ಶಿಸ್ತುಕ್ರಮ ಎದುರಿಸಬೇಕಾಗುತ್ತದೆ. ಕೆಲವೊಮ್ಮೆ ಕರ್ತವ್ಯ ನಿಷ್ಠ ಸಿಬ್ಬಂದಿಗೆ ಅನಿವಾರ್ಯ ಕಾರಣಗಳಿಂದವಿಳಂಬವಾಗುತ್ತದೆ. ಅಂತಹ ಸಂದರ್ಭಗಳಲ್ಲಿ ಅವರಿಗೆ ಪೂರ್ಣ ಹಾಜರಿ ಕೊಡುವ ಅಧಿಕಾರವನ್ನು ಶಾಖೆಯ ಮುಖ್ಯಸ್ಥರಿಗೆ ನೀಡುವ ಆಯಾಮದಲ್ಲಿ ನಿಯಮ ರೂಪಿಸುವ ಕೆಲಸ ನಡೆಯುತ್ತಿದೆ. ಇಂತಹ ಹಸ್ತಕ್ಷೇಪದಿಂದ ಯೋಜನೆ ಉದ್ದೇಶ ಈಡೇರುವುದಿಲ್ಲ ಎನ್ನುವ ಅಭಿಪ್ರಾಯವೂ ಅಧಿಕಾರಿಗಳಲ್ಲಿದೆ.

ಚಾಲಕ-ನಿರ್ವಾಹಕರಿಗೆ ವಿನಾಯ್ತಿ ಬಯೋಮೆಟ್ರಿಕ್‌ ವ್ಯವಸ್ಥೆಯಡಿ ಚಾಲಕ-ನಿರ್ವಾಹಕರನ್ನು ತರುವುದು ತಾಂತ್ರಿಕವಾಗಿ ಸವಾಲಿನ ಕಾರ್ಯ. ಮೂರ್‍ನಾಲ್ಕು ದಿನಗಳ ಕಾಲ ಕರ್ತವ್ಯದ ಮೇಲೆ ತೆರಳುವುದರಿಂದ ಅವರಿಗೆ ಅಷ್ಟೊಂದು ಊರ್ಜಿತವಲ್ಲ ಎನ್ನುವ ಅಭಿಪ್ರಾಯಗಳಿವೆ. ಹೀಗಾಗಿ ಬಯೋಮೆಟ್ರಿಕ್‌ ವ್ಯವಸ್ಥೆ ಚಾಲಕ-ನಿರ್ವಾಹಕರಿಗೆ ಸದ್ಯಕ್ಕಿಲ್ಲ. ಎರಡನೇ ಹಂತದಲ್ಲಿ ಇವರ ಬಗ್ಗೆ ನಿರ್ಧಾರವಾಗಲಿದೆ.

 

-ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.