ಬಿಜೆಪಿ ನಾಯಕರು ಬರೀ ಢೋಂಗಿಗಳು
|ಜನರು ಅಧಿಕಾರ ಕೊಟ್ಟಾಗ ಸುಸ್ಥಿರ ಸರಕಾರ ನಡೆಸಲಾಗದವರಿಗೆ ಮತ್ತೆ ಮತ ನೀಡಬೇಕಾ?: ಸಿದ್ದರಾಮಯ್ಯ ಪ್ರಶ್ನೆ
Team Udayavani, May 17, 2019, 10:05 AM IST
ಹುಬ್ಬಳ್ಳಿ: ಯರಗುಪ್ಪಿಯಲ್ಲಿ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
ಹುಬ್ಬಳ್ಳಿ: ಬಿಜೆಪಿ ನಾಯಕರು ಬರೀ ಢೋಂಗಿಗಳು. ಅವರಿಗೆ ಜನರು ಅಧಿಕಾರ ಕೊಟ್ಟಾಗ ಐದು ವರ್ಷದಲ್ಲಿ ಮೂವರು ಮುಖ್ಯಮಂತ್ರಿ, ಸುಸ್ಥಿರ ಸರಕಾರ ಕೊಡಲು ಅವರಿಂದ ಸಾಧ್ಯವಾಗಲಿಲ್ಲ. ಇಂತಹವರಿಗೆ ಮತ್ತೆ ಅಧಿಕಾರ ಕೊಡಬೇಕಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಯರಗುಪ್ಪಿ ಗ್ರಾಮದಲ್ಲಿ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಹಸಿರು ಶಾಲು ಹಾಕಿಕೊಳ್ಳುವ ಮಿಸ್ಟರ್ ಯಡಿಯೂರಪ್ಪ ಒಂದೇ ಒಂದೂ ರೂಪಾಯಿ ರೈತರ ಸಾಲಮನ್ನಾ ಮಾಡಲಿಲ್ಲ. ಬರೀ ಢೋಂಗಿತನದ ಮಾತುಗಳು ಅವರದು. ಬಡವರ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಜೀವನ ಮೀಸಲಿಟ್ಟ ದಿ| ಸಿ.ಎಸ್. ಶಿವಳ್ಳಿ ಅವರನ್ನು ನಂಬಬೇಕು. ಅವರಿಂದ ತೆರವಾದ ಸ್ಥಾನಕ್ಕೆ ಅವರ ಪತ್ನಿ ಕುಸುಮಾವತಿ ಶಿವಳ್ಳಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವ ಮೂಲಕ ವಿಧಾನಸೌಧಕ್ಕೆ ಕಳುಹಿಸಬೇಕು ಎಂದರು.
ಹಿಂದೆ ನಾನು ಅಧಿಕಾರದಲ್ಲಿದ್ದಾಗ ಹಾಗೂ ಮೈತ್ರಿ ಸರಕಾರದಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇನೆ. ನಾವೇನು ನಮ್ಮಪ್ಪನ ಮನೆಯಿಂದ ಹಣ ತಂದು ರೈತರ ಸಾಲ ಮನ್ನಾ ಮಾಡಲಿಲ್ಲ. ನಿಮ್ಮ ಹಣವನ್ನು ನೀವು ಸಂಕಷ್ಟದಲ್ಲಿದ್ದಾಗ ನಿಮಗೆ ನೀಡಿದ್ದೇವೆ. ಇದರಲ್ಲಿ ನಮ್ಮ ಹೆಚ್ಚುಗಾರಿಕೆ ಏನಿಲ್ಲ. ರೈತರ ಸಾಲ ಮನ್ನಾ ಮಾಡೋಣ ಎಂದು ಮೋದಿಗೆ ಗೋಗರೆದರೆ ಆ ಆಸಾಮಿ ಕಾರ್ಪೊರೇಟ್ ಕ್ಷೇತ್ರದ 3.5 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದರು. ಇದು ಬಿಜೆಪಿ ನಾಯಕರಿಗೂ ಹಾಗೂ ನಮಗೆ ಇರುವ ವ್ಯತ್ಯಾಸ ಎಂದರು.
ಮಾಜಿ ಸಚಿವೆ ಉಮಾಶ್ರೀ ಮಾತನಾಡಿ, ಓರ್ವ ಮಹಿಳೆ ಸ್ಪರ್ಧಿಸಿದ್ದಾರೆ ಎನ್ನುವ ಕಾರಣಕ್ಕೆ ಬಿಜೆಪಿ ನಾಯಕರು ಕುಸುಮಾವತಿ ಬಗ್ಗೆ ಏನೆಲ್ಲ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯು ಮಹಿಳಾ ವಿರೋಧಿಯಾಗಿದೆ ಎಂದು ಆರೋಪಿಸಿದರು. ಮುಖಂಡರಾದ ಪ್ರೊ| ಐ.ಜಿ. ಸನದಿ, ವೀರಣ್ಣ ಮತ್ತಿಕಟ್ಟಿ, ವಿನಯ ಕುಲಕರ್ಣಿ, ಎಂ.ಎಸ್. ಅಕ್ಕಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ