ಬಿಜೆಪಿಯಿಂದ ಪ್ರತಿಭಟನೆ
Team Udayavani, Feb 18, 2017, 3:13 PM IST
ಧಾರವಾಡ: ಹೆಬ್ಬಳ್ಳಿ ಜಿಪಂ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣವನ್ನು ರಾಜ್ಯ ಪೊಲೀಸರಿಂದ ಮರು ತನಿಖೆ ಮತ್ತು ಸಿಬಿಐ ತನಿಖೆಗೂ ಒಳಪಡಿಸುವಂತೆ ಆಗ್ರಹಿಸಿ ಯೋಗೀಶಗೌಡ ಪತ್ನಿ ಮಲ್ಲಮ್ಮ ಹಾಗೂ ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ನಾಗರಾಜ ಗಾಣಿಗೇರ ನೇತೃತ್ವದಲ್ಲಿ ನಗರದ ಡಿಸಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ತಾಲೂಕು ಘಟಕದ ಪದಾಧಿಕಾರಿಗಳು ಹಾಗೂ ಜಿಪಂ ಮಾಜಿ ಸದಸ್ಯರಾದ ಅಮೃತ ದೇಸಾಯಿ, ತವನಪ್ಪ ಅಷ್ಟಗಿ ಅವರೊಂದಿಗೆ ಡಿಸಿ ಕಚೇರಿಗೆ ಆಗಮಿಸಿದ ಮಲ್ಲಮ್ಮ, ಪತಿ ಯೋಗೀಶಗೌಡರ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಳಪಡಿಸುವುದರ ಜೊತೆಗೆ ನಮ್ಮ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡುವಂತೆ ಮನವಿ ಮಾಡಿದರು.
ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮಲ್ಲಮ್ಮ ಮನವಿ ಸಲ್ಲಿಸಿದರೆ,ಬಿಜೆಪಿ ಘಟಕದಿಂದ ಡಿಸಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಪತಿಯ ಹತ್ಯೆಯ ಆರೋಪದಲ್ಲಿ ಈಗ ಬಂಧನಕ್ಕೆ ಒಳಗಾಗಿರುವ ಆರೋಪಿಗಳೆಲ್ಲ ಸಚಿವ ವಿನಯ ಕುಲಕರ್ಣಿ ಅವರ ಪರಮಾಪ್ತರು. ಇದಲ್ಲದೇ ಹತ್ಯೆಗೂ ಮುನ್ನ ನನ್ನ ಪತಿಗೆ ಸಚಿವರ ಸಹೋದರ ವಿಜಯ ಕುಲಕರ್ಣಿ ಹೆಸರಿನಲ್ಲಿ ಜೀವ ಬೆದರಿಕೆ ಪತ್ರ ಬಂದಿದ್ದವು.
ರಾಜಕೀಯ ವಿಷಯವಾಗಿ ಸಚಿವರೊಂದಿಗೆ ಸಾಕಷ್ಟು ಜಗಳಗಳಾಗಿವೆ. ಹೀಗಾಗಿ ಈ ಹತ್ಯೆಯ ಹಿಂದೆ ಇನ್ನೂ ಅನೇಕ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ. ಆದರೆ ಪೊಲೀಸರು ಕೋರ್ಟ್ಗೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಲೋಪ-ದೋಷಗಳಿದ್ದು, ಈಪ್ರಕರಣವನ್ನು ಮರು ತನಿಖೆಗೆ ಒಳಪಡಿಸಿ ಹತ್ಯೆಯ ಹಿಂದಿರುವ ಪ್ರಭಾವಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ.
ಬಂಧನದಲ್ಲಿರುವ ಹತ್ಯೆಯ ಆರೋಪಿಗಳು ಸಚಿವ ವಿನಯ ಕುಲಕರ್ಣಿ ಆಪ್ತರು ಅಷ್ಟೇ ಅಲ್ಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೂ ಹೌದು. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮರುತನಿಖೆಗೆ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಮಲ್ಲಮ್ಮ ಗೌಡರ ಮನವಿಯಲ್ಲಿ ಒತ್ತಾಯಿಸಿದ್ದಾರೆ. ಬಿಜೆಪಿ ಮುಖಂಡರಾದ ವೀರೇಶ ಅಂಚಟಗೇರಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಗೋವಿನಕೊಪ್ಪ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ