ಜನಾರ್ದನ ರೆಡ್ಡಿಯವರನ್ನು ಬಿಜೆಪಿ ಕೈಬಿಡುವುದಿಲ್ಲ: ಶ್ರೀರಾಮುಲು
Team Udayavani, Dec 22, 2022, 3:33 PM IST
ಹುಬ್ಬಳ್ಳಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಆರಂಭಿಸುತ್ತಾರೆ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಬಿಜೆಪಿ ಸಹ ಅವರನ್ನು ಕೈಬಿಡುವುದಿಲ್ಲ. ಪಕ್ಷದಲ್ಲಿಯೇ ಉಳಿಸಿಕೊಳ್ಳುವ ವಿಶ್ವಾಸವಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮಲು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಅವರು ಸಾರ್ವಜನಿಕರ ಬದುಕಲ್ಲಿ ಬರಬೇಕು ಎಂದು ಅಷ್ಟೇ ಹೇಳಿದ್ದಾರೆ ಹೊರತು ಪಕ್ಷ ಮೀರಿ, ಪಕ್ಷಕ್ಕೆ ತೊಂದರೆ ನೀಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಈ ಕುರಿತು ನಾನು ಸಹ ಪಕ್ಷದ ಹಿರಿಯರ ಜೊತೆ ಚರ್ಚೆ ಮಾಡಿದ್ದೇನೆ. ಮುಖ್ಯಮಂತ್ರಿ ಅವರು ಸಹ ಅವರೊಂದಿಗೆ ಮಾತನಾಡಿದ್ದಾರೆ ಎಂದರು.
ಜನಾರ್ದನ ರೆಡ್ಡಿ ಅವರೊಂದಿಗೆ ಸ್ನೇಹಕ್ಕೆ ಧಕ್ಕೆ ಬರುವುದಿಲ್ಲ. ಪಕ್ಷ ರಾಜಕೀಯವಾಗಿ ಸ್ಥಾನ-ಮಾನ ನೀಡಿದೆ. ಸ್ನೇಹ ಹಾಗೂ ಪಕ್ಷ ಬಿಡಲಾರದ ಸಂದರ್ಭದಲ್ಲಿ ಪಕ್ಷದ ನಾಯಕರ ಜೊತೆ ಮಾತನಾಡಿದ್ದೇನೆ. ಅವರೇ ಪರಿಹಾರ ಒದಗಿಸುತ್ತಾರೆ ಎಂದರು.
ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಸೂದೆ ಕುರಿತು ಸದಸದಲ್ಲಿ ಚರ್ಚೆ ನಡೆಸಲಿದೆ. ರಪಾಂಟ ಮಾಡುವುದು ಬೇಡ. ಎಲ್ಲರೂ ಒಮ್ಮತದಿಂದ ಮಸೂದೆ ಪಾಸ್ ಮಾಡಿ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದರು.
ಉತ್ತರ ಕರ್ನಾಟಕದ ಅಭಿವೃದ್ಧಿ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಸದನದಲ್ಲಿ ಚರ್ಚೆ ನಡೆಸಬೇಕಿತ್ತು. ಆದರೆ ಸಣ್ಣಪುಟ್ಟ ವಿಚಾರವಾಗಿ ವಿಪಕ್ಷದವರು ಸದನವೇ ನಡೆಯದಂತೆ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಲಾ-ಕಾಲೇಜು ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಬಸ್ ಸೌಲಭ್ಯ ಒದಗಿಸುವ ಕಾರ್ಯ ನಾನು ಮಾಡುತ್ತೇನೆ. ಯಾವ ಹಳ್ಳಿಗಳಿಗೆ ರಸ್ತೆ ಹಾಗೂ ಸಾರಿಗೆ ಸಂಪರ್ಕವಿಲ್ಲ ಅಲ್ಲಿಗೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ