ಮಾಜಿ ಶಾಸಕರ ಮಗನಿಗೆ ನಕಲಿ ಅಶ್ಲೀಲ ವಿಡಿಯೋ ಬಳಸಿ ಬ್ಲಾಕ್ ಮೇಲ್!
Team Udayavani, Mar 22, 2021, 6:25 PM IST
ಧಾರವಾಡ : ನಕಲಿ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಬಳಸಿಕೊಂಡು ತಮ್ಮನ್ನು ಹಣಕ್ಕಾಗಿ ಪೀಡಿಸಲಾಗುತ್ತಿದ್ದು, ಈ ಕುರಿತು ಪೊಲೀಸರಿಗೆ ದೂರು ಸಲ್ಲಿಸಿರುವುದಾಗಿ ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಪುತ್ರ ನವೀನ ಕೋನರಡ್ಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಕುರಿತು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫೆ.18ಕ್ಕೆ ನನ್ನ ಮೊಬೈಲ್ಗೆ ವಿಡಿಯೋಕಾಲ್ ಒಂದು ಬಂದಿತ್ತು. 12 ಸೆಕೆಂಡ್ ನ ಈ ಕಾಲ್ ನಲ್ಲಿ ಆ ಕಡೆಯಿಂದ ಮಾತನಾಡುವವರು ಯಾರು ಎಂಬುದೇ ಗೊತ್ತಾಗಲಿಲ್ಲ. ಸ್ವಲ್ಪ ಹೊತ್ತಿನ ನಂತರ ನನಗೆ ಮರಳಿ ಮೊಬೈಲ್ ಸ್ಕ್ರೀನ್ ಶಾಟ್ನ ಚಿತ್ರವೊಂದನ್ನು ಹರಿಬಿಟ್ಟರು.
ಇದರಲ್ಲಿ ನನ್ನ ಮುಖ ಮತ್ತು ಜೊತೆಗೆ ನಗ್ನ ಚಿತ್ರವಿರುವ ಹುಡುಗಿಯ ಫೋಟೊವಿತ್ತು. ಕೂಡಲೇ ನಾನು ಗಾಬರಿಯಾಗಿ ನನ್ನ ತಂದೆಗೆ ತಿಳಿಸಿದೆ. ಅವರು ಪೊಲೀಸರಿಗೆ ದೂರು ನೀಡುವಂತೆ ಸಲಹೆ ನೀಡಿದರು ಎಂದರು.
ಈ ಮಧ್ಯೆ ಇದನ್ನು ಬಹಿರಂಗೊಳಿಸಬಾರದು ಎಂದರೆ ಕೂಡಲೇ ತಮ್ಮ ಅಕೌಂಟ್ಗೆ ಹಣ ಹಾಕುವಂತೆ ಪೀಡಿಸಿದರು. ನಾನು ಕೂಡ ದೂರು ನೀಡುವ ಮುಂಚೆ ಇದು ಬಹಿರಂಗಗೊಳ್ಳಬಾರದು ಎನ್ನುವ ಉದ್ದೇಶದಿಂದ ಅವರಿಗೆ 13 ಸಾವಿರ ರೂ ಹಣವನ್ನು ಪೇಟಿಎಮ್ ಮೂಲಕ ರವಾನಿಸಿದೆ.
ನಂತರ ಪೊಲೀಸರಿಗೆ ದೂರು ನೀಡಿದೆ. ಅವರೆಲ್ಲ ಹಣ ವರ್ಗಾವಣೆಯಾದ ಅಕೌಂಟ್ ಮೂಲಕ ಅವರನ್ನು ಪತ್ತೆ ಹಚ್ಚಲಾಗಿದೆ. ಅವರು ರಾಜಾಸ್ತಾನ ಮೂಲದವರು ಎಂದು ಪೊಲೀಸರು ಹೇಳಿದ್ದಾರೆ ಎಂದರು. ಧಾರವಾಡದ ಸೈಬರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ನವೀನ ಕೋನರಡ್ಡಿ, ನಾನು ಯಾವುದೇ ತಪ್ಪು ಮಾಡಿಲ್ಲ. ಆದರೂ ಹಣಕ್ಕಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಈ ರೀತಿ ಪೀಡಿಸುವ ದಂಧೆಕೋರರ ಕರಾಳ ಮುಖ ಎಲ್ಲರಿಗೂ ಗೊತ್ತಾಗಲಿ ಎಂದು ನಾನೇ ಖುದ್ದು ದೂರು ನೀಡಿದ್ದೇನೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ದೂರು ದಾಖಲಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ