ರಕ್ತ ಭಂಡಾರಗಳಲ್ಲಿ ಖಾಲಿಯಾಗ್ತಿದೆ ರಕ್ತ


Team Udayavani, Apr 28, 2021, 3:58 PM IST

uyiyiy7

ವರದಿ: ಹೇಮರಡ್ಡಿ ಸೈದಾಪುರ

ಹುಬ್ಬಳ್ಳಿ: ಕೋವಿಡ್‌ನಿಂದ ಜಿಲ್ಲೆಯ ರಕ್ತ ಭಂಡಾರಗಳಲ್ಲಿ ರಕ್ತ ಹಾಗೂ ಪ್ಲಾಸ್ಮಾ ಕೊರತೆ ಉಂಟಾಗಿದ್ದು, ಮುಂದಿನ ತಿಂಗಳು ಈ ಸಮಸ್ಯೆ ತೀವ್ರಗೊಳ್ಳಲಿದೆ. 18-45 ವಯಸ್ಸಿನವರಿಗೆ ಕೋವಿಡ್‌ ಲಸಿಕೆ ಅಭಿಯಾನದ ಪರಿಣಾಮ ರಕ್ತದ ಅಭಾವ ಮತ್ತಷ್ಟು ಹೆಚ್ಚಾಗಲಿದ್ದು, ಲಸಿಕೆ ಪಡೆಯುವ ಮೊದಲೇ ಆಸ್ಪತ್ರೆಗಳಲ್ಲಿರುವ ರಕ್ತ ಭಂಡಾರಗಳಿಗೆ ತೆರಳಿ ಇದರ ಅಭಾವ ನೀಗಿಸಲು ಮುಂದಾಗಬೇಕಿದೆ.

ಕೋವಿಡ್‌, ಕಾಲೇಜುಗಳು ರಜೆ, ಲಾಕ್‌ ಡೌನ್‌ ಪರಿಣಾಮ ಈಗಾಗಲೇ ಜಿಲ್ಲೆಯ ಎರಡು ಸರಕಾರಿ ರಕ್ತ ಭಂಡಾರಗಳಾದ ಧಾರವಾಡ ಜಿಲ್ಲಾಸ್ಪತ್ರೆ, ಹುಬ್ಬಳ್ಳಿಯ ಕಿಮ್ಸ್‌ ಸೇರಿದಂತೆ ಖಾಸಗಿ 11 ರಕ್ತ ಭಂಡಾರಗಳಲ್ಲಿ ರಕ್ತದ ಕೊರತೆ ಕಾಣಿಸಿಕೊಂಡಿದೆ. ಜನವರಿಯಿಂದ ಮಾರ್ಚ್‌ ಅಂತ್ಯದವರಿಗೆ ಶಿಬಿರಗಳ ಮೂಲಕ ಸಂಗ್ರಹಿಸಿದ ರಕ್ತ ಖಾಲಿಯಾಗುತ್ತಿದೆ. ಅಲ್ಪಸ್ವಲ್ಪ ಉಳಿದಿರುವ ವಿವಿಧ ಗುಂಪುಗಳ ರಕ್ತ 15 ದಿನಗಳಿಗೆ ಸಾಕಾಗಲಿದೆ.  ಸಾಂಪ್ರದಾಯಿಕ ರಕ್ತದಾನಿಗಳಾಗಿರುವ 18-45 ವಯಸ್ಸಿನವರಿಗೆ ಮೇ1 ರಿಂದ ಕೋವಿಡ್‌ ಲಸಿಕೆ ಅಭಿಯಾನ ನಡೆಯುವುದರಿಂದ ಮುಂದಿನ ತಿಂಗಳ ಅಂತ್ಯಕ್ಕೆ ಇದರ ಅಭಾವ ಹೆಚ್ಚಾಗಲಿದೆ ಎನ್ನುವ ಆತಂಕ ಆವರಿಸಿದೆ.

ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಪ್ರತಿ ತಿಂಗಳು 200-250 ಬ್ಯಾಗ್‌, ಕಿಮ್ಸ್‌ನಲ್ಲಿ 300 ಬ್ಯಾಗ್‌, ನವನಗರದ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ 100-120 ಬ್ಯಾಗ್‌, ರಾಷ್ಟ್ರೋತ್ಥಾನದಲ್ಲಿ 1200 ಬ್ಯಾಗ್‌ ಬಳಕೆ ಹಾಗೂ ಸಂಗ್ರಹವಿರುತ್ತಿತ್ತು. ಈಗ ಸಂಗ್ರಹ ಪ್ರಮಾಣ ಎರಡಂಕಿಗೆ ಇಳಿದಿದೆ. ರಕ್ತದಾನ ಮಾಡದಿದ್ದರೂ ನೀಡುತ್ತಿದ್ದ ರಾಷ್ಟ್ರೋತ್ಥಾನ ರಕ್ತ ನಿಧಿಯಲ್ಲಿ ಒಬ್ಬರು ರಕ್ತ ದಾನ ಮಾಡಿದರೆ ಬೇಕಾದ ರಕ್ತ ನೀಡುವ ಪರಿಸ್ಥಿತಿ ಉಂಟಾಗಿತ್ತು. ಇತರೆಡೆ ರೋಗಿಗಳ ಸಂಬಂಧಿ ಕರು ರಕ್ತ ನೀಡಿದರೆ ಮಾತ್ರ ರಕ್ತ ನೀಡುವ ವ್ಯವಸ್ಥೆ ಇರುವುದರಿಂದ ಇದು ಲಾಕ್‌ಡೌನ್‌ ಸಮಯದಲ್ಲಿ ಮತ್ತಷ್ಟು ಸಮಸ್ಯೆಯಾಗಲಿದೆ.

ರಕ್ತಕ್ಕೆ ಬೇಡಿಕೆ: ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆಲ ಶಸ್ತ್ರ ಚಿಕಿತ್ಸೆಗಳನ್ನು ಮುಂದೂಡಲಾಗಿದೆ. ಆದರೆ ಹೆರಿಗೆ, ಕ್ಯಾನ್ಸರ್‌, ಅಪಘಾತ, ಕೆಲವೊಂದು ಅಗತ್ಯ ಶಸ್ತ್ರ ಚಿಕಿತ್ಸೆ, ಹಿಮೋಫೇಲಿಯಾ, ತಲಸೀಮಿಯಾದಂತಹ ರೋಗಿಗಳಿಗೆ ರಕ್ತ ಅನಿವಾರ್ಯ. ಇದೀಗ ಉಂಟಾಗಿರುವ ಅಭಾವದಿಂದ ಅಗತ್ಯ ಗುಂಪಿನ ಮಾದರಿಯ ರಕ್ತ ದೊರೆಯದಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ ಬೇಡಿಕೆ, ಸಂಗ್ರಹಕ್ಕೆ ಸರಿಯಾಗಿದ್ದರೂ ಮುಂದೆ ಕಷ್ಟ ಎನ್ನುವ ಅಭಿಪ್ರಾಯಗಳಿದ್ದು, ಕಿಮ್ಸ್‌, ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ರಕ್ತದ ಬೇಡಿಕೆ ಕಡಿಮೆಯಾಗಿಲ್ಲ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.