ಸೌಲಭ್ಯ ವಿತರಣಾ ಸಮಾವೇಶಕ್ಕೆ ನೀಲನಕ್ಷೆ


Team Udayavani, Sep 23, 2017, 1:28 PM IST

hub1.jpg

ಧಾರವಾಡ: ಕಳೆದ ನಾಲ್ಕು ವರ್ಷಗಳಲ್ಲಿ ಸರಕಾರ ಅನುಷ್ಠಾನಗೊಳಿಸಿದ ಜನಪರ ಕಾರ್ಯಕ್ರಮಗಳ ಕುರಿತು ಜನಸಾಮಾನ್ಯರಿಗೆ ಮಾಹಿತಿ ನೀಡುವ ಉದ್ದೇಶದಿಂದ ಅ. 23ರಂದು ಧಾರವಾಡದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಬೆಳಗಾವಿ ವಿಭಾಗಮಟ್ಟದ ಸೌಲಭ್ಯ ವಿತರಣಾ ಸಮಾವೇಶದ ಯಶಸ್ಸಿಗೆ ಎಲ್ಲ ಜಿಲ್ಲೆಗಳ ಅಧಿಕಾರಿಗಳಿಗೆ ಶೀಘ್ರದಲ್ಲಿಯೇ ಸ್ಪಷ್ಟ ಚಿತ್ರಣ ನೀಡಲಾಗುವುದು ಎಂದು ಸಚಿವ ಆರ್‌.ವಿ. ದೇಶಪಾಂಡೆ ಹೇಳಿದರು. 

ಇಲ್ಲಿನ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಸರಕಾರಿ ಯೋಜನೆಗಳನ್ನು ಬಿಂಬಿಸುವ ಆಕರ್ಷಕ ಕಲಾಪ್ರದರ್ಶನ, ಮಳಿಗೆಗಳು, ಕಿರು ಪ್ರಕಟಣೆಗಳು, ಜಾಹೀರಾತು, ವಾಹಿನಿಗಳಲ್ಲಿ ನೇರ ಪ್ರಸಾರದ ವ್ಯವಸ್ಥೆಗಳನ್ನು ವಾರ್ತಾ ಮತ್ತು  ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರು ಮಾಡಲಿದ್ದಾರೆ.

ಸಮಾವೇಶಕ್ಕೆ ಫಲಾನುಭವಿಗಳನ್ನು ಆಯ್ಕೆ ಮಾಡಿ ಕರೆತರಲು ಪ್ರತಿ ತಾಲೂಕಿಗೆ ಒಬ್ಬರು ನೋಡಲ್‌ ಅ ಧಿಕಾರಿಯನ್ನು ನೇಮಿಸಬೇಕು ಎಂದು ಹೇಳಿದರು. ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಎಲ್ಲ ಜಿಲ್ಲೆಗಳು ಸಿದ್ಧಪಡಿಸಿ, ಸಮಾವೇಶಕ್ಕೆ ಅರ್ಹ ಫಲಾನುಭವಿಗಳನ್ನು ಸುರಕ್ಷಿತವಾಗಿ ಕರೆತರುವ ಕುರಿತು ಸಮರ್ಪಕ ಯೋಜನೆ ಮಾಡಿಕೊಳ್ಳಬೇಕು. 

ಬೆಳಗಾವಿ ವಿಭಾಗದ ಎಲ್ಲ 49 ತಾಲೂಕುಗಳು ಮತ್ತು 57 ವಿಧಾನಸಭಾ ಕ್ಷೇತ್ರಗಳಿಂದ ವಿವಿಧ ಯೋಜನೆಗಳಿಗೆ ಸೇರಿದ ಫಲಾನುಭವಿಗಳನ್ನು ಗುರುತಿಸಬೇಕು. ಅವರಲ್ಲಿ ಆಯ್ದ ಫಲಾನುಭವಿಗಳಿಗೆ ಮಾತ್ರ ಮುಖ್ಯಮಂತ್ರಿಗಳು ಸಾಂಕೇತಿಕ ಸೌಲಭ್ಯಗಳನ್ನು ವಿತರಿಸುವರು. ಉಳಿದ ಎಲ್ಲ ಫಲಾನುಭವಿಗಳಿಗೆ ಅ.28ರೊಳಗಾಗಿ ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರ ಸಮ್ಮುಖದಲ್ಲಿ ಸೌಲಭ್ಯಗಳ ವಿತರಣೆಯಾಗಬೇಕು ಎಂದರು. 

ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಮಾತನಾಡಿ, ಇತ್ತೀಚೆಗೆ ವಿಜಯಪುರ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ನಾಮಕರಣ ಮಾಡಿದ ಸಮಾರಂಭ ಮತ್ತು ಕೊಪ್ಪಳದಲ್ಲಿ ಜರುಗಿದ ಸೌಲಭ್ಯ ವಿತರಣಾ ಸಮಾವೇಶದ ಸಂಘಟನೆಯ ಅನುಭವಗಳನ್ನು ಬಳಸಿಕೊಂಡು ಧಾರವಾಡ ಸಮಾವೇಶವನ್ನು ರೂಪಿಸಬೇಕು ಎಂದರು. 

ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಮಾತನಾಡಿ, ಸಮಾವೇಶಕ್ಕೆ ಸ್ಥಳೀಯ ಧಾರವಾಡ ಜಿಲ್ಲೆಯಿಂದ ಹೆಚ್ಚು ಜನರು ಆಗಮಿಸುವರು. ಅ.22ರಂದು ಬೆಳಗ್ಗೆ ಪ್ರದರ್ಶನ ಮಳಿಗೆ ಉದ್ಘಾಟಿಸಿ, ಬೀದಿ ನಾಟಕ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅ.23ರಂದು ಮುಖ್ಯ ಕಾರ್ಯಕ್ರಮದಲ್ಲಿ ಆಹಾರ, ಕುಡಿವ ನೀರು ಮತ್ತುಸಾರಿಗೆ ಸಂಪರ್ಕದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಹೆಚ್ಚು ಒತ್ತು ನೀಡಬೇಕು ಎಂದರು. 

ಸಚಿವರಾದ ಉಮಾಶ್ರೀ, ರುದ್ರಪ್ಪ ಲಮಾಣಿ, ಆರ್‌.ಬಿ.ತಿಮ್ಮಾಪುರ, ಶಾಸಕ ಬಿ.ಆರ್‌.ಯಾವಗಲ್‌, ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಡಾ| ಪಿ.ಎಸ್‌.ಹರ್ಷ ಸೇರಿದಂತೆ ಬೆಳಗಾವಿ ವಿಭಾಗದ ಏಳು ಜಿಲ್ಲೆಗಳ ಜಿಲ್ಲಾ  ಅಧಿಕಾರಿಗಳು, ಜಿಪಂ ಸಿಇಒ ಅ ಧಿಕಾರಿಗಳು ಸಭೆಯಲ್ಲಿ ಇದ್ದರು. ಡಾ| ಎಸ್‌.ಬಿ. ಬೊಮ್ಮನಹಳ್ಳಿ ವಂದಿಸಿದರು.  

ಟಾಪ್ ನ್ಯೂಸ್

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; Government should have woken up after Neha case: Jayamrinthujaya Swamiji

Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Anjali Ambigera Case; Girish and Anjali got married 15 days ago!

Anjali Ambigera Case; ಹಂತಕ ಗಿರೀಶ್ ಗೂ ಅಂಜಲಿಗೂ 15 ದಿನಗಳ ಮೊದಲೇ ಮದುವೆಯಾಗಿತ್ತು!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.