ಕಾಣೆಯಾಗಿದ್ದ 8 ವರ್ಷದ ಬಾಲಕ ಶವವಾಗಿ ಪತ್ತೆ: ಕೊಲೆ ಶಂಕೆ
Team Udayavani, Mar 31, 2023, 4:50 PM IST
ಹುಬ್ಬಳ್ಳಿ: ಕಾಣೆಯಾಗಿದ್ದ ಬಾಲಕನೋರ್ವ ಶುಕ್ರವಾರ ಮಧ್ಯಾಹ್ನ ಸುಮಾರಿಗೆ ಮಿಲತ್ ನಗರದ ದೊಡ್ಡಮನಿ (ಮಿರ್ಚಿ) ಮೈದಾನದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಭೈರಿದೇವರ ಕೊಪ್ಪದ ನದೀಮ್ ಹುಬ್ಬಳ್ಳಿ (8) ಮೃತಪಟ್ಟ ಬಾಲಕ. ಆತನ ದೇಹದ ಮೇಲೆ ಕೆಲ ಗಾಯಗಳಾಗಿದ್ದು, ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಶುಕ್ರವಾರ ಮೈದಾನಕ್ಕೆ ಹೋದ ಸಾರ್ವಜನಿಕರು ಶವವನ್ನು ನೋಡಿ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ನೀಡಿದ ಬೆಂಡಿಗೇರಿ ಪೊಲೀಸ ಪರಿಶೀಲನೆ ನಡೆಸಿದ್ದಾರೆ.
ಗುರುವಾರ ರಾತ್ರಿ ಮಗ ಮನೆಗೆ ಬಂದಿಲ್ಲ ಎಂದು ಮೃತ ಬಾಲಕ ಕುಟುಂಬದವರು ಎಲ್ಲ ಕಡೆ ಹುಡುಕಾಡಿದ್ದಾರೆ. ಅಷ್ಟೇ ಅಲ್ಲದೇ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ದೂರ ಸಹ ನೀಡಿದ್ದರು. ಪೊಲೀಸರು ದೂರಿನ ಅನ್ವಯ ಬಾಲಕನ ಶೋಧದಲ್ಲಿ ತೊಡಗಿದ್ದರು. ಮೃತಪಟ್ಟ ನದೀಮ್ ಕಳೆದ ಎರಡು ದಿನ ಹಿಂದೆ ಬೆಂಡಿಗೇರಿಯಲ್ಲಿರುವ ಅಜ್ಜಿಯ ಮನೆಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕ ಮೃತಪಟ್ಟ ವಿಷಯ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ