ಶಿಕ್ಷಣ ಇಲಾಖೆ ‘ಬುಕ್ಬ್ಯಾಂಕ್’ಗೆ ಉತ್ತಮ ಸ್ಪಂದನೆ
ಶೇ.60 ವಿದ್ಯಾರ್ಥಿಗಳಿಂದ ಮರಳಿ ಪುಸ್ತಕ ನೀಡಿಕೆ | 50 ಸಾವಿರ ಪಠ್ಯಪುಸ್ತಕ ಸಂಗ್ರಹ ನಿರೀಕ್ಷೆ
Team Udayavani, Aug 7, 2021, 1:37 PM IST
ವರದಿ: ಬಸವರಾಜ ಹೂಗಾರ
ಹುಬ್ಬಳ್ಳಿ: ಹಿಂದಿನ ಶೈಕ್ಷಣಿಕ ವರ್ಷದ ಪಠ್ಯಪುಸ್ತಕಗಳನ್ನು ಶಾಲೆಗೆ ಮರಳಿಸಿ ಎಂಬ ಶಿಕ್ಷಣ ಇಲಾಖೆಯ ಬುಕ್ ಬ್ಯಾಂಕ್ ಯೋಜನೆಗೆ ವಿದ್ಯಾರ್ಥಿಗಳು-ಪಾಲಕರಿಂದ ಉತ್ತಮ ಸ್ಪಂದನೆ ದೊರೆತಿದೆ.
1-10ನೇ ತರಗತಿವರೆಗೆ ಶೇ. 60 ವಿದ್ಯಾರ್ಥಿಗಳು ಹಿಂದಿನ ವರ್ಷದ ತಮ್ಮ ಪಠ್ಯ-ಪುಸ್ತಕಗಳನ್ನು ಶಾಲೆಗೆ ಹಿಂದಿರುಗಿಸಿ ಮಾದರಿಯಾಗಿದ್ದಾರೆ. ವಿದ್ಯಾರ್ಥಿಗಳಿಂದ ಪಡೆದ ಪಠ್ಯ-ಪುಸ್ತಕಗಳನ್ನು ಇಲಾಖೆ ಹೊಸದಾಗಿ ತರಗತಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ನೀಡುತ್ತಿದ್ದು, ಇದೊಂದು ರೀತಿಯಲ್ಲಿ ರಾಷ್ಟ್ರೀಯ ಉಳಿತಾಯ ರೂಪ ಪಡೆದಿದೆ ಎಂದರೂ ತಪ್ಪಾಗಲಾರದು. ಜತೆಗೆ ಸಕಾಲಕ್ಕೆ ವಿದ್ಯಾರ್ಥಿಗಳಿಗೆ ಪಠ್ಯ-ಪುಸ್ತಕ ಲಭ್ಯವಾಗುವಂತೆ ಮಾಡುತ್ತದೆ. ವಿದ್ಯಾರ್ಥಿಗಳಲ್ಲಿ ಶಿಸ್ತು ಬೆಳೆಸುವ ಯತ್ನ ಮಾಡುತ್ತಿದೆ.
1 ರಿಂದ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ಎಲ್ಲ ಮಕ್ಕಳು ಪುಸ್ತಕಗಳನ್ನು ಮರುಳಿ ನೀಡುತ್ತಿದ್ದು, ಇಲ್ಲಿಯವರೆಗೆ ಎಲ್ಲ ಭಾಷೆಯ ಹಾಗೂ ವಿಷಯಗಳ ಸುಮಾರು 25 ಸಾವಿರಕ್ಕೂ ಅಧಿಕ ಪಠ್ಯ-ಪುಸ್ತಕಗಳು ಶಹರ ವ್ಯಾಪ್ತಿಯ ಶಾಲೆಗಳಿಗೆ ಬಂದಿವೆ. ಇದೇ ಪುಸ್ತಕಗಳನ್ನು ಈ ವರ್ಷದ ಮಕ್ಕಳಿಗೆ ನೀಡುವ ಮೂಲಕ ವ್ಯಾಸಂಗಕ್ಕೆ ಅನುಕೂಲ ಕಲ್ಪಿಸಲಾಗುತ್ತಿದೆ.
ಎಲ್ಲ ಶಾಲೆಗಳಲ್ಲಿ ಶೇ.60ಕ್ಕೂ ಹೆಚ್ಚು ಮಕ್ಕಳು ಪುಸ್ತಕಗಳನ್ನು ಮರಳಿ ಶಾಲೆಗೆ ನೀಡಿದ್ದು, ಇನ್ನುಳಿದ ಶೇ.40 ಮಕ್ಕಳು ಪುಸ್ತಕಗಳನ್ನು ಮರಳಿ ಶಾಲೆಗೆ ನೀಡಬೇಕಾಗಿದೆ. ಒಟ್ಟು ಸುಮಾರು 50 ಸಾವಿರದಷ್ಟು ಪಠ್ಯ-ಪುಸ್ತಕಗಳು ಮರಳುವ ವಿಶ್ವಾಸ ಶಿಕ್ಷಣ ಇಲಾಖೆಯದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ