ಮಕ್ಕಳ ಜ್ಞಾನಾಭಿವೃದ್ಧಿಗೆ ಪುಸ್ತಕಗಳು ಸಹಕಾರಿ
ಮಹಾನ್ ಪುರುಷರ ಕಿರುಹೊತ್ತಿಗೆಗಳ ಹಸ್ತಾಂತರ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.
Team Udayavani, Sep 24, 2022, 6:23 PM IST
ನವಲಗುಂದ: ದೇಶಭಕ್ತಿ, ನೈತಿಕತೆ, ಮಾನವೀಯ ಮೌಲ್ಯಗಳನ್ನು ತಿಳಿಸುವಂತಹ ಪುಸ್ತಕಗಳನ್ನು ಯುವ ಪೀಳಿಗೆ ಓದಿದರೆ ಜ್ಞಾನ ಹೆಚ್ಚಲು ಸಾಧ್ಯ. ಓದುವ ಹವ್ಯಾಸ ಬೆಳೆಸುವ ಇಂತಹ ಕೆಲಸ ಶ್ಲಾಘನೀಯ ಎಂದು ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಶ್ರೀ ವಿಜಯಾನಂದ ಸರಸ್ವತಿ
ಮಹಾರಾಜರು ಹೇಳಿದರು.
ಪಡೇಸೂರ ಗ್ರಾಮದಲ್ಲಿ ಹುಬ್ಬಳ್ಳಿ ನಿರಾಮಯ ಫೌಂಡೇಷನ್, ಸಾಹಿತ್ಯ ಪರಿಷತ್, ಹುಬ್ಬಳ್ಳಿ ಬಾಲಾಜಿ ನರರೋಗ ಸಂಸ್ಥೆ, ಶ್ರೀಪೂರ್ಣ ಫೌಂಡೇಷನ್ ಕ್ಯಾನ್ವಾಸ್ ಆರ್ಟ್ಸ್ ಸಹಯೋಗದಲ್ಲಿ ನಡೆದ ಮಹಾನ್ ಪುರುಷರ ಕಿರುಹೊತ್ತಿಗೆಗಳ ಹಸ್ತಾಂತರ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ನಿರಾಮಯ ಫೌಂಡೇಷನ್ ಅಧ್ಯಕ್ಷ ಡಾ| ಮಲ್ಲಿಕಾರ್ಜುನ ಬಾಳಿಕಾಯಿ ಮಾತನಾಡಿ, ಯುವ ಪೀಳಿಗೆ ಮೊಬೈಲ್ಅನ್ನೇ ಜೀವನಾಧಾರವಾಗಿಟ್ಟುಕೊಂಡಿದೆ. ಆದರೆ ಅನೇಕ ಮಹಾತ್ಮರ ಅನುಭವದ ಮಾತುಗಳನ್ನು ತಿಳಿದುಕೊಳ್ಳಬೇಕಾದರೆ ಪುಸ್ತಕಗಳ ಜ್ಞಾನವನ್ನು ಪಡೆಯಬೇಕು.
ಇಲ್ಲವಾದರೆ ಯಾವುದೇ ರೀತಿಯ ಪ್ರಯೋಜನವಾಗುವುದಿಲ್ಲ. ಯುವ ಪೀಳಿಗೆಗೆ ಅನುಕೂಲವಾಗುವಂತಹ ಕಾರ್ಯಕ್ರಮವನ್ನು ನಮ್ಮ ಸಂಸ್ಥೆ ಹಮ್ಮಿಕೊಂಡಿದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಎಂ.ಮೆಣಸಿನಕಾಯಿ ಮಾತನಾಡಿ, ಶ್ರೀಗಳ ಆಶಯದಂತೆ ಮಕ್ಕಳಿಗೆ ಓದುವ ಕೊಠಡಿ ಮಾಡಿ ಪ್ರತಿದಿನ ಒಂದು ಗಂಟೆ ಪುಸ್ತಕ ಓದಲು ಸಮಯವನ್ನು ನಿಗದಿಪಡಿಸುವುದಾಗಿ ತಿಳಿಸಿದರು. ಪದ್ಮರಾಜ ಹಿರೇಮಠ, ವೀರನಗೌಡ ಧರ್ಮಗೌಡ್ರ, ಆಶೋಕ ಲೆಂಕೆಣ್ಣವರ, ಪವನ ಪಾಟೀಲ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್