ಪ್ಯಾನಲ್‌ ಕುಸಿತ ಹೆಚ್ಚಿದ ಆತಂಕ ! BRTS‌ ಸೇತುವೆ ಕಾಮಗಾರಿ ಕಳಪೆ ಮತ್ತೂಮ್ಮೆ ಸಾಬೀತು


Team Udayavani, Sep 30, 2020, 4:16 PM IST

ಪ್ಯಾನಲ್‌ ಕುಸಿತ ಹೆಚ್ಚಿದ ಆತಂಕ ! BRTS‌ ಸೇತುವೆ ಕಾಮಗಾರಿ ಕಳಪೆ ಮತ್ತೂಮ್ಮೆ ಸಾಬೀತು

ಹುಬ್ಬಳ್ಳಿ: ನವಲೂರು ಬಳಿಯ ಬಿಆರ್‌ಟಿಎಸ್‌ ಸೇತುವೆಯ ಇನ್ನೊಂದು ಭಾಗದಲ್ಲಿ ಪುನಃ ದೊಡ್ಡ ಪ್ರಮಾಣದಲ್ಲಿ ತಡೆಗೋಡೆ ಪ್ಯಾನಲ್‌ಗ‌ಳು ಕುಸಿದು ಬಿದ್ದಿದ್ದು, ಸ್ಥಳೀಯರಲ್ಲಿ ಮತ್ತಷ್ಟು ಆಂತಕ ಹೆಚ್ಚಿಸಿದೆ.

ಇತ್ತೀಚೆಗೆ ಸುರಿದ ಮಳೆಯಿಂದ ಸೆ.19ರ ಬೆಳಗಿನ ಜಾವ ಸೇತುವೆ ತಡೆಗೋಡೆಯ ಪ್ಯಾನಲ್‌ ಗಳು ಕಳಚಿ ಬಿದ್ದಿದ್ದವು. ಇದಾಗಿ ಒಂದು ವಾರದ ನಂತರ ಸೇತುವೆ ಇನ್ನೊಂದು ಭಾಗದಲ್ಲಿ ಇದಕ್ಕಿಂತ ದೊಡ್ಡ ಪ್ರಮಾಣದಲ್ಲಿ ಪ್ಯಾನಲ್‌ಗ‌ಳು ಕಳಚಿ ಬಿದ್ದಿವೆ. ಸುಮಾರು 15ಕ್ಕೂ ಹೆಚ್ಚು ಪ್ಯಾನಲ್‌ ಹಾಗೂ ಮಣ್ಣು ಕುಸಿದೆ. ಸೇತುವೆ ಎರಡು ಭಾಗದಲ್ಲಿ ತಡೆಗೋಡೆ ಪ್ಯಾನಲ್‌ಗ‌ಳು ಕುಸಿದು ಒಳಗಿನ ಮಣ್ಣು ಹಾಗೂ ಜಲ್ಲಿ ಕಲ್ಲುಗಳು ಕೂಡ ರಸ್ತೆಯಲ್ಲಿ ಬಿದ್ದಿವೆ. ಇದರಿಂದ ಅಲ್ಲಿನ ಸರ್ವಿಸ್‌ ರಸ್ತೆಯಲ್ಲಿ ಸಂಚರಿಸುವ ಜನರು ಆತಂಕದಲ್ಲಿ ಓಡಾಡುವಂತಾಗಿದೆ.

ಇನ್ನೊಂದು ಭಾಗದ ಪ್ಯಾನಲ್‌ಗ‌ಳು ಉಬ್ಬಿಕೊಂಡಿದ್ದು, ಕುಸಿಯುವ ಹಂತದಲ್ಲಿ ಹಾಗೂ ಸೇತುವೆಗೆ ಕಟ್ಟಿರುವ ಕಾಲಂ ಕೂಡ ಬಿರುಕು ಬಿಟ್ಟಿರುವ ಕುರಿತು ಸೆ.21 ಉದಯವಾಣಿ ವಿಸ್ತೃತ ವರದಿ ಪ್ರಕಟ ಮಾಡಿತ್ತು. ಇದೀಗ ಆ ಭಾಗದಲ್ಲಿಯ ಪ್ಯಾನಲ್‌ಗ‌ಳು ಕಳಚಿ ಬಿದ್ದಿದ್ದು, ಒಳಗಿನ ಮಣ್ಣು ಕೂಡ ಕುಸಿಯುತ್ತಿದೆ. ಇದೀಗ ಎರಡು ಭಾಗದಲ್ಲಿ ತಡೆಗೋಡೆ ಕುಸಿದಿರುವುದು ಕಾಮಗಾರಿ ಕಳಪೆ ಎನ್ನುವುದನ್ನು ಮತ್ತೂಮ್ಮೆ ಸಾಬೀತು ಮಾಡಿದಂತಾಗಿದೆ.

ಇದನ್ನೂ ಓದಿ :ಈಶ್ವರಪ್ಪ ನಾನು ವೈಯಕ್ತಿಕವಾಗಿ ಉತ್ತಮ ಸ್ನೇಹಿತರು, ರಾಜಕೀಯ ಸಿದ್ಧಾಂತ ಮಾತ್ರ ಬೇರೆ : ಸಿದ್ದು

ವಾಹನಗಳ ಸಂಚಾರಕ್ಕೆ ಲೋಕಾರ್ಪಣೆಗೊಳ್ಳುವ ಮುನ್ನವೇ ಅರ್ಧಕ್ಕೆ ನಿಂತಿರುವ ಸೇತುವೆ ಕುಸಿದ ಪರಿಣಾಮ ಬಿಆರ್‌ಟಿಎಸ್‌ ಕಳಪೆ ಕಾಮಗಾರಿಗೆ ಮಹಾನಗರದ ಜನತೆಯಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಇನ್ನೊಂದು ಭಾಗದಲ್ಲೂ ಪ್ಯಾನಲ್‌ಗ‌ಳು ಬಿದ್ದಿದ್ದು ಮತ್ತಷ್ಟು ಅಸಮಾಧಾನಕ್ಕೆ ಕಾರಣವಾಗಿದೆ. ಎರಡು ಭಾಗದಲ್ಲಿ ತಡೆಗೋಡೆ ಕುಸಿದಿರುವುದು ಕಾಮಗಾರಿಯ ಗುಣಮಟ್ಟ ಕುರಿತು ಪ್ರಶ್ನೆ ಮೂಡುವಂತಾಗಿದೆ.

ಎಚ್ಚೆತ್ತುಕೊಳ್ಳದ ಅಧಿಕಾರಿಗಳು: ತಡೆಗೋಡೆ ಪ್ಯಾನಲ್‌ಗ‌ಳು ಕುಸಿಯುತ್ತಿರುವ ಕುರಿತು ಶಾಸಕ ಅರವಿಂದ ಬೆಲ್ಲದ ಅವರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಪತ್ರದ ಮೂಲಕ ಎಚ್ಚರಿಸಿದ್ದರು. ಅಲ್ಲದೆ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದ ದೂರಿನಲ್ಲಿ ಕೂಡ ಮುನ್ನೆಚ್ಚರಿಕೆ ಕ್ರಮ ಹಾಗೂ ಕೂಡಲೇ ದುರಸ್ತಿ ಕೈಗೊಳ್ಳಬೇಕಾಗಿದೆ ಎಂದು ಮನವಿ ಮಾಡಿದ್ದರು. ಆದರೆ ಅಧಿಕಾರಿಗಳು ಮಾತ್ರ ಯಾವುದೇ ಮುನ್ನೆಚ್ಚರಿಕೆ ಕ್ರಮ ಗೊಂಡಿಲ್ಲ. ಇನ್ನೂ ಹಲವು ಕಡೆಗಳಲ್ಲಿ ಪ್ಯಾನಲ್‌ಗ‌ಳು ಕುಸಿಯುವ ಸಾಧ್ಯತೆಗಳಿವೆ. ಹೀಗಾಗಿ ಸೇತುವೆಯುದ್ದಕ್ಕೂ ಕೆಳ ಭಾಗದಲ್ಲಿ ಜನ ಹಾಗೂ ಜಾನುವಾರುಗಳು ಸಂಚಾರ ನಿರ್ಬಂಧಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಅಗತ್ಯವಿದೆ.

ಬಾಗಿರುವ ಪ್ಯಾನಲ್‌ಗ‌ಳೆಲ್ಲವೂ ಕಳಚಿ ಬಿದ್ದರೆ ಇಡೀ ರಸ್ತೆ ಕೊಚ್ಚಿಕೊಂಡು ಬೀಳುವ ಸಾಧ್ಯತೆಗಳಿವೆ. ಹೀಗಾಗಿ ಇದೇ ಮಾರ್ಗವಾಗಿ ತಡಸಿನಕೊಪ್ಪ, ಜೋಗ ಯಲ್ಲಾಪುರ, ಯೇರಿಕೊಪ್ಪ ಬೈಪಾಸ್‌ ಗೆ ಜನರು ಸಂಚರಿಸುತ್ತಾರೆ. ನಿತ್ಯ ಸುಮಾರು ಸಾವಿರಾರು ವಾಹನಗಳು ಇದೇ ರಸ್ತೆಯಲ್ಲಿ ಓಡಾಡುತ್ತವೆ. ಇದೀಗ ಒಂದು ಸೇತುವೆ ಎರಡು ಸಂಪರ್ಕಿಸುವ ರಸ್ತೆಯಾಗಿದೆ. ನಿತ್ಯ ಕನಿಷ್ಟ 1000 ವಾಹನಗಳು ಈ ರಸ್ತೆಯಲ್ಲಿ ಓಡಾಡುತ್ತವೆ. ಆದರೆ ಬಿದ್ದಿರುವ ಪ್ಯಾನಲ್‌ ಅಕ್ಕಪಕ್ಕದಲ್ಲಿ ಕೂಡ ಬೀಳುವ ಸ್ಥಿತಿಯಲ್ಲಿದ್ದು, ರಸ್ತೆಯಲ್ಲಿ ಓಡಾಡುವ ಜನರಲ್ಲಿ ಆತಂಕ ಸೃಷ್ಟಿಸಿದೆ. ಯಾವಾಗ ದುರ್ಘ‌ಟನೆ ಸಂಭವಿಸುತ್ತದೆ ಎನ್ನುವ ಭಯದಿಂದ ಓಡಾಡುವಂತಾಗಿದೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.