ಬಿಆರ್ ಟಿಎಸ್ ಅನುಷ್ಠಾನ ಸಂಪೂರ್ಣ ವಿಫಲ!
Team Udayavani, Sep 17, 2019, 9:36 AM IST
ಹುಬ್ಬಳ್ಳಿ: ಕೆಯುಐಡಿಎಫ್ಸಿ ಕಚೇರಿ ಸಭಾಂಗಣದಲ್ಲಿ ಸ್ಮಾರ್ಟ್ಸಿಟಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಹುಬ್ಬಳ್ಳಿ: ಸ್ಮಾರ್ಟ್ಸಿಟಿ ಯೋಜನೆ ಅನುದಾನದಲ್ಲಿ ಬಿಆರ್ಟಿಎಸ್ ವತಿಯಿಂದ ಕೈಗೊಳ್ಳಲಾಗುವ ಕಾಮಗಾರಿಗಳ ಪೂರ್ಣ ಮಾಹಿತಿ ನೀಡುವಲ್ಲಿ ವಿಫಲರಾದ ಬಿಆರ್ಟಿಎಸ್ ಅಧಿಕಾರಿಗಳನ್ನು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ತರಾಟೆಗೆ ತೆಗೆದುಕೊಂಡರು.
ಕೆಯುಐಡಿಎಫ್ಸಿ ಸಭಾಂಗಣದಲ್ಲಿ ಸೋಮವಾರ ನಡೆದ ಸ್ಮಾರ್ಟ್ಸಿಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಸ್ಮಾರ್ಟ್ಸಿಟಿ ಅನುದಾನದಡಿ ಕೈಗೊಳ್ಳಲು ನಿರ್ಧರಿಸಿದ ಕಾಮಗಾರಿಗಳ ಮಾಹಿತಿ ನೀಡುವಂತೆ ಸೂಚಿಸಿದರು. ಇಲ್ಲಿನ ಹಳೇ ಬಸ್ನಿಲ್ದಾಣದ ಕಟ್ಟಡ ನಿರ್ಮಾಣ, ವಾಣಿವಿಲಾಸ ವೃತ್ತ ಅಭಿವೃದ್ಧಿ ಹಾಗೂ ಎರಡನೇ ಹಂತದ ಬಿಆರ್ಟಿಎಸ್ ಯೋಜನೆ ಸೇರಿದಂತೆ 60 ಕೋಟಿ ರೂ. ಬೇಡಿಕೆ ಸಲ್ಲಿಸಲಾಗಿದೆ ಎಂದು ಬಿಆರ್ಟಿಎಸ್ ಅಧಿಕಾರಿಗಳು ಮಾಹಿತಿ ನೀಡಿದರು. ವಿವರವಾದ ಮಾಹಿತಿ ಕೊಡಿ ಎಂದು ಹೇಳುತ್ತಿದ್ದಂತೆ ನೀಲನಕ್ಷೆ ಹಾಗೂ ಹಾಗೂ ವಿಸ್ತೃತ ವರದಿ ತಯಾರಿಸದ ಪರಿಣಾಮ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪರಿಪೂರ್ಣ ಮಾಹಿತಿ ಇಲ್ಲದೆ ಹಣ ಕೊಡಿ ಎಂದರೆ ಹೇಗೆ. ಸಭೆಯ ಬಗ್ಗೆ ನಿಮಗೆ ಗಂಭೀರತೆ ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಬಿಆರ್ಟಿಎಸ್ ಅತ್ಯುತ್ತಮ ಯೋಜನೆ. ಆದರೆ ಅನುಷ್ಠಾನ ಸಂಪೂರ್ಣ ವಿಫಲವಾಗಿದೆ. ಫ್ಲೈಓವರ್ ಹಾಗೂ ರಸ್ತೆ ನಿರ್ಮಾಣ ಮಾಡಿ ಒಂದು ವರ್ಷ ಕಳೆಯುವುದರಲ್ಲಿ ಹದಗೆಟ್ಟಿವೆ. ಕಾಮಗಾರಿ ಉಸ್ತುವಾರಿ ನೋಡಿಕೊಳ್ಳುವ ಅಧಿಕಾರಿಗಳ ವೈಫಲ್ಯವೂ ಕಾರಣ. ಸಾಕಷ್ಟು ಕಡೆಗಳಲ್ಲಿ ಮಳೆ ನೀರು ನಿಲ್ಲುತ್ತಿದ್ದು, ಜನರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಗುತ್ತಿಗೆದಾರರಿಗೆ ನೋಟಿಸ್ ನೀಡಿ ಕಪ್ಪುಪಟ್ಟಿಗೆ ಶಿಫಾರಸು ಮಾಡಬೇಕು. ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸೈಕಲ್ ಮಾರ್ಗ ಬೇಡ: ಸ್ಮಾರ್ಟ್ಸಿಟಿಯಲ್ಲಿ ಅನುದಾನವಿದೆ ಎನ್ನುವ ಕಾರಣಕ್ಕೆ ಬೇಕಾಬಿಟ್ಟಿ ಖರ್ಚು ಸಲ್ಲ. ಗೋಕುಲ ರಸ್ತೆಯಲ್ಲಿ ಸೈಕಲ್ ಮಾರ್ಗ ನಿರ್ಮಾಣ ಸದ್ಯಕ್ಕೆ ಬೇಡ. ಟೆಂಡರ್ಶ್ಯೂರ್ ರಸ್ತೆಯ ಸೈಕಲ್ ಮಾರ್ಗದ ಪ್ರಯೋಜನ ನೋಡಿಕೊಂಡು ಮುಂದೆ ನಿರ್ಧಾರ ಕೈಗೊಳ್ಳಬಹುದು. ರಸ್ತೆ ವಿಭಜಕ ಸುಂದರವಾಗಿ ನಿರ್ಮಿಸಬೇಕು. ಸ್ಮಾರ್ಟ್ಸಿಟಿ ಯೋಜನೆಯಲ್ಲಿ ಡಾಂಬರ್ಗಿಂತ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದು ಸಚಿವ ಜೋಶಿ ಅಧಿಕಾರಿಗಳಿಗೆ ಸೂಚಿಸಿದರು.
2ನೇ ಹಂತದ ಬಿಆರ್ಟಿಎಸ್: ಬಿಆರ್ಟಿಎಸ್ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಮಾತನಾಡಿ, ಸ್ಮಾರ್ಟ್ಸಿಟಿ ಅನುದಾನದಲ್ಲಿ ಬಿಆರ್ಟಿಎಸ್ ಯೋಜನೆಯನ್ನು ಗೋಕುಲ ರಸ್ತೆ ಭಾಗಕ್ಕೆ ವಿಸ್ತರಿಸಲು ನಿರ್ಧರಿಸಲಾಗಿದೆ. 12 ಕೋಟಿ ರೂ. ವೆಚ್ಚದಲ್ಲಿ ಇನ್ಫೋಸಿಸ್ ಕಟ್ಟಡದಿಂದ ಹೊಸೂರು ವೃತ್ತದವರೆಗೆ 11 ಬಸ್ ನಿಲ್ದಾಣ, 12 ಕೋಟಿ ರೂ. ವೆಚ್ಚದಲ್ಲಿ ವಾಣಿ ವಿಲಾಸ ವೃತ್ತ, ಸುಮಾರು 40 ಕೋಟಿ ರೂ. ಸ್ಮಾರ್ಟ್ಸಿಟಿ, ಬಿಆರ್ಟಿಎಸ್ ಹಾಗೂ ವಾಯವ್ಯ ಸಾರಿಗೆ ಸಂಸ್ಥೆ ಅನುದಾನ ಸೇರಿದಂತೆ ಒಟ್ಟು 90 ಕೋಟಿ ರೂ. ವೆಚ್ಚದಲ್ಲಿ ಹಳೇ ಬಸ್ನಿಲ್ದಾಣ ಮರುಜನ್ಮಕ್ಕೆ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಬೃಹತ್-ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ, ಶಾಸಕರಾದ ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ದೀಪಾ ಚೋಳನ್, ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಡಿಸಿಪಿ ಡಾ| ಶಿವಕುಮಾರ ಗುಣಾರೆ, ಸ್ಮಾರ್ಟ್ಸಿಟಿ ಎಂಡಿ ಶಕೀಲ್ ಅಹ್ಮದ್ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ