ಕತ್ತಲಲೇ ಬಿಆರ್‌ಟಿಎಸ್‌ ನಿಲ್ದಾಣ ಕಾರ್ಯಚರಣೆ

| ವಿದ್ಯುತ್‌ ಬಾಕಿ ಕಾರಣಕ್ಕೆ ಪವರ್‌ ಕಟ್‌? | ಮೊಬೈಲ್‌ ಟಾರ್ಚ್‌ ಬೆಳಕಲ್ಲೇ ಕೆಲಸ ನಿರ್ವಹಣೆ

Team Udayavani, Sep 5, 2020, 4:08 PM IST

huballi-tdy-02

ಹುಬ್ಬಳ್ಳಿ: ವಿದ್ಯುತ್‌ ಕಡಿತದಿಂದ ಕತ್ತಲಲ್ಲಿರುವ ರೈಲ್ವೆ ನಿಲ್ದಾಣ ಬಳಿಯ ಬಿಆರ್‌ಟಿಎಸ್‌ ನಿಲ್ದಾಣ. ವಿದ್ಯುತ್‌ ಸಂಪರ್ಕವಿಲ್ಲದ ಪರಿಣಾಮ ಮೊಬೈಲ್‌ ಬ್ಯಾಟರಿ ಸಹಾಯದಿಂದ ಕೆಲಸ ಮಾಡುತ್ತಿರುವ ಸಿಬ್ಬಂದಿ (ಒಳ ಚಿತ್ರ).

ಹುಬ್ಬಳ್ಳಿ: ಬಿಆರ್‌ಟಿಎಸ್‌ ಕಂಪನಿ ವಿದ್ಯುತ್‌ ಬಿಲ್‌ ಪಾವತಿ ಮಾಡದ ಪರಿಣಾಮ ಇಲ್ಲಿನ ರೈಲ್ವೆ ನಿಲ್ದಾಣ ಬಳಿಯ ಬಿಆರ್‌ಟಿಎಸ್‌ ಬಸ್‌ ನಿಲ್ದಾಣದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದು, ಮೂರು ತಿಂಗಳಿನಿಂದ ಪ್ರಯಾಣಿಕರು ಹಾಗೂ ಸಿಬ್ಬಂದಿ ಕತ್ತಲಲ್ಲೇ ಪರದಾಡುವಂತಾಗಿದೆ.

ತ್ವರಿತ ಬಸ್‌ ಸಾರಿಗೆ ವ್ಯವಸ್ಥೆ ಆರಂಭವಾಗಿ ಎರಡು ವರ್ಷಗಳಷ್ಟೇ ಆಗಿವೆ. ಇನ್ನೂ ಸಣ್ಣಪುಟ್ಟ ಕಾರ್ಯಗಳು ಬಾಕಿವೆ. ಹೀಗಿರುವಾಗ ನಿರ್ವಹಣೆ ಹಂತದಲ್ಲೇ ಸಮಸ್ಯೆಗಳು ಉದ್ಭವವಾಗುತ್ತಿವೆ. ರೈಲ್ವೆ ನಿಲ್ದಾಣ ಬಳಿಯ ಬಿಆರ್‌ಟಿಎಸ್‌ ಬಸ್‌ ನಿಲ್ದಾಣದ ವಿದ್ಯುತ್‌ ಬಿಲ್‌ ಪಾವತಿ ಮಾಡದ ಹಿನ್ನೆಲೆಯಲ್ಲಿ ಹೆಸ್ಕಾಂ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದೆ ಎನ್ನಲಾಗುತ್ತಿದೆ. ಸುಮಾರು 4.5 ಲಕ್ಷ ರೂ. ಬಾಕಿ ಉಳಿಸಿಕೊಂಡ ಪರಿಣಾಮ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದೆ. ಕೋವಿಡ್‌-19 ನಂತರದಲ್ಲಿ ಬಸ್‌ ಆರಂಭವಾದ ದಿನಗಳಿಂದಲೂ ವಿದ್ಯುತ್‌ ಕಡಿತಗೊಂಡಿದ್ದು, ಮೂರ್‍ನಾಲ್ಕು ತಿಂಗಳಿನಿಂದ ಕತ್ತಲಲ್ಲೇ ಪ್ರಯಾಣಿಕರು ಬಸ್‌ ಹತ್ತುವಂತಾಗಿದೆ.

ನಿತ್ಯ 144 ಬಸ್‌ಗಳು ಈ ನಿಲ್ದಾಣದಿಂದ ಸಂಚಾರ ಮಾಡುತ್ತಿದ್ದು, 4-5 ಸಾವಿರ ಪ್ರಯಾಣಿಕರು ಈ ನಿಲ್ದಾಣದ ಮೂಲಕ ವಿವಿಧ ಭಾಗಗಳಿಗೆ ತೆರಳುತ್ತಾರೆ. ನಿಲ್ದಾಣವೊಂದರಿಂದಲೇ ನಿತ್ಯ ಸರಿಸುಮಾರು 40-45 ಸಾವಿರ ರೂ. ಸಾರಿಗೆ ಆದಾಯವಿದೆ. ಹುಬ್ಬಳ್ಳಿ-ಧಾರವಾಡ ಮಾರ್ಗದಲ್ಲಿನ ಅತೀ ಹೆಚ್ಚು ಆದಾಯ ಇರುವ ಹಾಗೂ ಹೆಚ್ಚಿನ ಪ್ರಯಾಣಿಕರು ಸಂಚಾರ ಮಾಡುವ ನಿಲ್ದಾಣವಾಗಿದೆ.

ಆದರೆ ಇದೀಗ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಮೂರು ರೈಲುಗಳು ಮಾತ್ರ ಸಂಚಾರ ಮಾಡುತ್ತಿರುವುದರಿಂದ ನಿತ್ಯ 100-150 ಪ್ರಯಾಣಿಕರು ಈ ನಿಲ್ದಾಣದಿಂದ ಸಂಚಾರ ಮಾಡುತ್ತಿದ್ದಾರೆ. ಆದರೆ ಕಳೆದ ಮೂರು ತಿಂಗಳಿನಿಂದ ವಿದ್ಯುತ್‌ ಸಂಪರ್ಕವಿಲ್ಲದ ಪರಿಣಾಮ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ರಾತ್ರಿ ವೇಳೆ ಭಯದಿಂದಲೇ ಹೆಜ್ಜೆ ಹಾಕುವಂತಾಗಿದೆ.

ಕೊಂಚ ಯಾಮಾರಿದರೆ ಮುಗೀತು! :  ಪ್ರಮುಖವಾಗಿ ರೈಲ್ವೆ ಪ್ರಯಾಣಿಕರಿಗೆ ಹಾಗೂ ಸುತ್ತಲಿನ ಸಾರ್ವಜನಿಕರಿಗೆ ಬಸ್‌ ಸಾರಿಗೆ ವ್ಯವಸ್ಥೆ ಸಮರ್ಪಕವಾಗಿ ದೊರೆಯಲಿ ಎನ್ನುವ ಕಾರಣಕ್ಕೆ ರೈಲ್ವೆ ಇಲಾಖೆ ನಿಲ್ದಾಣ ನಿರ್ಮಾಣಕ್ಕೆ ಜಾಗದ ವ್ಯವಸ್ಥೆ ಮಾಡಿಕೊಟ್ಟಿದೆ. ಇನ್ನೂ ನಿರ್ಮಾಣ ಹಂತದಲ್ಲಿ ನಿರ್ಲಕ್ಷ್ಯ ತೋರಿದ ಪರಿಣಾಮ ನಿಲ್ದಾಣದ ಮುಂಭಾಗದಲ್ಲಿನ ತಗ್ಗು ಪ್ರದೇಶದಲ್ಲಿ ಸಂಗ್ರಹವಾಗುವ ಮಳೆ ನೀರು ದಾಟಿಕೊಂಡು ಬರಬೇಕು. ಕತ್ತಲಲ್ಲಿ ಕೊಂಚ ಯಾಮಾರಿದರೆ ನೀರಿನಲ್ಲಿ ಬಿದ್ದು ಏಳಬೇಕು. ಸೂಕ್ಷ್ಮ ಪ್ರದೇಶವಾಗಿರುವುದರಿಂದ ಸಂಜೆ ವೇಳೆ ಪ್ರಯಾಣಿಕರು ನಿಲ್ದಾಣಕ್ಕೆ ಬರುವುದಾದರೂ ಹೇಗೆ. ಏನಾದರೂ ಅವಘಡಗಳು ಸಂಭವಿಸಿದರೆ ಯಾರು ಹೊಣೆ ಎನ್ನುವುದು ಪ್ರಯಾಣಿಕರ ಪ್ರಶ್ನೆಯಾಗಿದೆ.

ಸಿಬ್ಬಂದಿ ಪಾಡು ಹೇಳತೀರದು :  ಸಂಜೆ ನಂತರ ಕರ್ತವ್ಯಕ್ಕೆ ಆಗಮಿಸುವ ಸಿಬ್ಬಂದಿ ಪಾಡಂತೂ ಹೇಳ ತೀರದು. ವಿದ್ಯುತ್‌ ಸಂಪರ್ಕವಿಲ್ಲದ ಕಾರಣ ಟಿಕೆಟ್‌ ಕೌಂಟರ್‌ ಬಂದಾಗಿದ್ದು, ಆನ್‌ಲೈನ್‌ ಇಟಿಎಂ ಯಂತ್ರದಿಂದ ಟಿಕೆಟ್‌ ನೀಡುತ್ತಾರೆ. ಮೊಬೈಲ್‌ ಬ್ಯಾಟರಿ ಸಹಾಯದಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಟಿಕೆಟ್‌ ನೀಡುವ ಇಟಿಎಂ ಯಂತ್ರದ ಚಾರ್ಜ್‌ ಮುಗಿಯುತ್ತಿದ್ದಂತೆ ಅಂಬೇಡ್ಕರ್‌ ನಿಲ್ದಾಣಕ್ಕೆ ತಂದು ಚಾರ್ಜ್‌ ಮಾಡಬೇಕು. ಸಿಸಿ ಕ್ಯಾಮೆರಾ, ಗೇಟ್‌ ಸೇರಿದಂತೆ ಕಾರ್ಯಗಳು ಸ್ಥಗಿತಗೊಂಡಿವೆ. ಹೀಗಾಗಿ ಈ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಸಂಗ್ರಹವಾಗುವ ಸಾರಿಗೆ ಆದಾಯವನ್ನು ರಾತ್ರಿ 10 ಗಂಟೆವರೆಗೆ ಜಾಗ್ರತೆಯಿಂದ ಕಾಪಾಡಿಕೊಂಡು ಹೋಗಬೇಕು. ಸಿಸಿ ಕ್ಯಾಮೆರಾ ಕೆಲಸ ಮಾಡದ ಪರಿಣಾಮ ಕಳ್ಳತನದಂತಹ ಘಟನೆಗಳು ನಡೆಯುವ ಸಾಧ್ಯತೆ ತಳ್ಳಿಹಾಕುವಂತಿಲ್ಲ.

ವಿದ್ಯುತ್‌ ಸಂಪರ್ಕ ಕಡಿತ ಮಾಡಿರುವ ಪರಿಣಾಮ ಪ್ರಯಾಣಿಕರಿಗೆ ತೊಂದರೆಯಾಗಬಾರದು ಎನ್ನುವ ಕಾರಣಕ್ಕೆ ಬಸ್‌ ಗಳ ಎಂಜಿನ್‌ ಬಂದ್‌ ಮಾಡದೆ ಬಸ್‌ಗಳ ದೀಪ ಉರಿಸಲಾಗುತ್ತಿದೆ. ಮೊದಲೇ ಮೈಲೇಜ್‌ ಬಾರದೆ ಆರ್ಥಿಕ ನಷ್ಟವಾಗುತ್ತಿರುವ ಸಂದರ್ಭದಲ್ಲಿ ಸಂಜೆ 6 ಗಂಟೆಯ ನಂತರ ಬರುವ ಎಲ್ಲಾ ಬಸ್‌ಗಳು ಕನಿಷ್ಟ 6-8 ನಿಮಿಷಗಳ ಕಾಲ ಎಂಜಿನ್‌ ಬಂದ್‌ ಮಾಡುವಂತಿಲ್ಲ. ಕತ್ತಲು ಇರುವ ಪರಿಣಾಮ ಪ್ರಯಾಣಿಕರು ಇತ್ತ ಆಗಮಿಸದೆ ಆಟೋ ರಿಕ್ಷಾ ಮೂಲಕ ತೆರಳುತ್ತಿದ್ದಾರೆ.  –ಹೆಸರು ಹೇಳಲಿಚ್ಛಿಸದ ಸಿಬ್ಬಂದಿ

ಸರಕಾರ ಯೋಜನೆಗೆ ಸಾವಿರಾರು ಕೋಟಿ ರೂ. ಖರ್ಚು ಮಾಡಿದೆ. ಅಧಿಕಾರಿಗಳಿಗೆ ನಿಲ್ದಾಣದಲ್ಲಿನ ವಿದ್ಯುತ್‌ ಸಮಸ್ಯೆ ಪರಿಹಾರ ಮಾಡಲು ಸಾಧ್ಯವಾಗುತ್ತಿಲ್ಲ. ನಾಲ್ಕೈದು ಗಂಟೆಗಳ ಕಾಲ ಮೊಬೈಲ್‌ ಬ್ಯಾಟರಿ ಸಹಾಯದಿಂದ ಕೆಲಸ ಮಾಡುವ ಸಿಬ್ಬಂದಿ ಪಾಡೇನು.  -ಪ್ರಶಾಂತ ಕುಲಕರ್ಣಿ, ಪ್ರಯಾಣಿಕ

 

 

-ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.