ಬಿಎಸ್ವೈ ಸರ್ಕಾರಕ್ಕೆ ಸದ್ಯ ಸಮಸ್ಯೆ ಇಲ್ಲ: ಕೋಡಿಮಠ ಶ್ರೀ
Team Udayavani, Feb 5, 2020, 8:46 PM IST
ಹುಬ್ಬಳ್ಳಿ: ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಕ್ಕೆ ಸದ್ಯ ಯಾವುದೇ ಸಮಸ್ಯೆ ಕಾಣುತ್ತಿಲ್ಲ. ಆತಂಕ ಪಡುವ ಅವಶ್ಯಕತೆಯೂ ಇಲ್ಲ ಎಂದು ಹಾಸನ ಜಿಲ್ಲೆ ಅರಸಿಕೆರೆ ತಾಲೂಕು ಹಾರನಹಳ್ಳಿ ಕೋಡಿಮಠದ ಡಾ| ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಸ್ಥಾನಕ್ಕಾಗಿ ಯಾರೇ ಎಷ್ಟೇ ಒತ್ತಡ ಹಾಕಿದರು ಯಡಿಯೂರಪ್ಪ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಎಲ್ಲವೂ ಸರಿಯಾಗುತ್ತದೆ. ಸುಸೂತ್ರವಾಗಿ ಆಡಳಿತ ನಡೆಸುತ್ತಾರೆ. ಯುಗಾದಿ ನಂತರ ಸರ್ಕಾರದ ಬಗ್ಗೆ ತಿಳಿಯುತ್ತದೆ ಎಂದರು.
ಅಯೋಧ್ಯೆಯಲ್ಲಿ ರಾಮ ಮಂದಿರ ಆಗಬೇಕು. ಅದು ಆಗುತ್ತದೆ. ಬಹುಸಂಖ್ಯಾತರ ಇಷ್ಟಾರ್ಥ ಈಡೇರಿಸುವುದು ದೇಶ ಆಳುವವರ ಕರ್ತವ್ಯ ಆಗಿದೆ. ಅದನ್ನು ಅವರು ಮಾಡುತ್ತಾರೆ. ಅಲ್ಲದೆ ಸಿಎಎ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ