ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರವಾಗಲಿದೆ: ಬಿಎಸ್ ವೈ
Team Udayavani, Dec 13, 2021, 3:46 PM IST
ಹುಬ್ಬಳ್ಳಿ: ಹಲವು ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾಗಿದೆ. ರಾಜ್ಯದಲ್ಲೂ ಬೆಳಗಾವಿಯ ಅಧಿವೇಶನದಲ್ಲಿ ಮಸೂದೆ ಅಂಗೀಕಾರವಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ಕಾಯ್ದೆ ನಿಷೇಧ ಜಾರಿ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಪಕ್ಷದ ವಿರೋಧ ಇದ್ದೆ ಇರುತ್ತದೆ. ನಮ್ಮ ಅಪೇಕ್ಷೆ ಸಹ ನಿಷೇಧ ಮಾಡುವುದಾಗಿದೆ. ಅಧಿವೇಶನ ಮುಗಿಯುವ ಎರಡು ಮೂರು ದಿನಗಳ ಒಳಗೆ ಕಾಯ್ದೆ ಜಾರಿಯಾಗಲಿದೆ. ಇದು ಕೇವಲ ನನ್ನ ಅಭಿಪ್ರಾಯ ಅಷ್ಟೇ ಅಲ್ಲ. ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಆಡಳಿತ ಪಕ್ಷದವರು ಸೇರಿದಂತೆ ಸಂಸತ್ ಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆಯಲಾಗಿದೆ ಎಂದರು.
ಇದನ್ನೂ ಓದಿ:ವಿಶೇಷ ವಿಮಾನದಲ್ಲಿ ವಾರಾಣಸಿಗೆ ತೆರಳಿದ ಸಿಎಂ ಬಸವರಾಜ್ ಬೊಮ್ಮಾಯಿ
ಮಂಗಳವಾರ ವಿಧಾನ ಪರಿಷತ್ ಫಲಿತಾಂಶ ಬರುತ್ತೆ. ನಾವು ಕನಿಷ್ಟ 15 ಸೀಟ್ ಗಳನ್ನು ಗೆಲ್ಲುತ್ತೇವೆ. ಇದರಿಂದ ವಿಧಾನ ಪರಿಷತ್ ನಲ್ಲಿ ನಮಗೆ ಬಹುಮತ ಸಾಬೀತಾಗುತ್ತದೆ. ಜನ ನಮಗೆ ಆಶೀರ್ವಾದ ಮಾಡುತ್ತಾರೆಂಬ ವಿಶ್ವಾಸವಿದೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಬಿಜೆಪಿ ನಾಯಕರಿಂದ ಸಹಕಾರ ಸಿಗುತ್ತಿಲ್ಲ ಎನ್ನುವ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿಕೆಯಲ್ಲಿ ಸತ್ಯಾಂಶ ಇಲ್ಲ. ಎಲ್ಲ ರೀತಿಯ ಸಹಕಾರ ಸಿಗುತ್ತಿದೆ. ಅವರು ತಮ್ಮ ಅವಧಿ ಪೂರ್ಣಗೊಳಿಸುತ್ತಾರೆ. ಬೆಳಗಾವಿ ಅಧಿವೇಶನ ಚರ್ಚೆಗಳಿಗೆ ಮತ್ತು ಹಲವು ತೀರ್ಮಾನಗಳು ಆಗುತ್ತವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
MUST WATCH
ಹೊಸ ಸೇರ್ಪಡೆ
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ