ಮಕ್ಕಳಲ್ಲಿ ಸ್ವಾಭಿಮಾನ-ಆತ್ಮವಿಶ್ವಾಸ ಬೆಳೆಸಿ

ಪ್ರತಿಭೆಗೆ ಪ್ರೋತ್ಸಾಹ ಪ್ರತಿಯೊಬ್ಬರ ಕರ್ತವ್ಯ

Team Udayavani, Mar 23, 2022, 10:59 AM IST

3

ಧಾರವಾಡ: ಬಾಲ್ಯದಿಂದಲೇ ಮಕ್ಕಳಲ್ಲಿ ಸ್ವಾಭಿಮಾನ, ಆತ್ಮವಿಶ್ವಾಸದ ಗುಣಗಳನ್ನು ಬೆಳೆಸಬೇಕು ಎಂದು ಕೃಷಿ ವಿವಿ ಕುಲಪತಿ ಡಾ| ಮಹದೇವ ಚೆಟ್ಟಿ ಹೇಳಿದರು.

ನಗರದ ವಿಠ್ಠಲ್‌ ಮಕ್ಕಳ ಆಸ್ಪತ್ರೆಯ 43ನೇ ಮತ್ತು ಮಕ್ಕಳ ಅಕಾಡೆಮಿಯ 21ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳ ಪ್ರತಿಭೆಗಳಿಗೆ ಸೂಕ್ತ ರೀತಿಯಲ್ಲಿ ಪ್ರೋತ್ಸಾಹ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಪ್ರಸ್ತುತ ಜಾಗತೀಕರಣ ಯುಗದಲ್ಲಿ ಮಕ್ಕಳಿಗೆ ಜೀವನದಲ್ಲಿ ಹೆಚ್ಚಿನ ಪೈಪೋಟಿ ಎದುರಿಸಬೇಕಾಗಿದೆ. ಹೀಗಾಗಿ ಅವರು ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಬೇಕಾಗುತ್ತದೆ. ಪಾಲಕರು ಮಕ್ಕಳೊಂದಿಗೆ ಹೆಚ್ಚು ಸಮಯವನ್ನು ಕಳೆದು ಅವರ ಮಾನಸಿಕ ಹಾಗೂ ದೈಹಿಕ ಬೆಳವಣಿಗೆ ಬಗ್ಗೆ ಕಾಳಜಿ ವಹಿಸಬೇಕು ಎಂದರು.

ಮೆಡಿಕಲ್‌ ಎಕ್ಸಲನ್ಸ್‌ ಪ್ರಶಸ್ತಿ ಸ್ವೀಕರಿಸಿದ ಡಾ| ಎಸ್‌.ಆರ್‌ ರಾಮನಗೌಡರ ಮಾತನಾಡಿ, ಆದರ್ಶ ಗುಣಗಳನ್ನು ಬೆಳೆಸಿಕೊಂಡರೆ ಸುಂದರ ಜೀವನ ಸಾಧ್ಯ. ಸಮಾಜ ಸೇವೆ ವೈದ್ಯರ ಕರ್ತವ್ಯವ್ಯಾಗಬೇಕು. ಪರೋಪಕಾರ ಮಾಡುವ ಮನೋವೃತ್ತಿ ಬೆಳೆಸಿಕೊಳ್ಳಬೇಕು ಎಂದರು.

ಡಾ| ರಾಜನ್‌ ದೇಶಪಾಂಡೆ ಮಾತನಾಡಿ, ಕಾಲಕಾಲಕ್ಕೆ ಸರಿಯಾಗಿ ಮಕ್ಕಳಿಗೆ ಲಸಿಕೆ ಹಾಕಿ ಅವರ ಪೌಷ್ಟಿಕತೆಗೆ ಪಾಲಕರು ಗಮನ ಹರಿಸಬೇಕು ಎಂದರು. ಮಕ್ಕಳ ಅಕಾಡೆಮಿಯಿಂದ ಕೊಡಮಾಡುವ ರಾಜ್ಯ ಪ್ರಶಸ್ತಿಯನ್ನು ಜೆಎಸ್ಸೆಸ್‌ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಆರ್ಯನ್‌ ಚಿಲಕವಾಡ ಅವರಿಗೆ ಪ್ರತಿಭಾವಂತ ಯುವ ಕಲಾವಿದ ಪ್ರಶಸ್ತಿ ನೀಡಲಾಯಿತು.

ತ್ರಿಭಾಷಾ ಕವಿಗೋಷ್ಠಿ, ನಿಬಂಧ ಸ್ಪರ್ಧೆ ಮತ್ತು ಸ್ವರ ನಮನ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಆರೋಗ್ಯವಂತ ಶಿಶು ಸ್ಪರ್ಧೆಗೆ ನಿರ್ಣಾಯಕರಾಗಿ ಆಗಮಿಸಿದ ವೈದ್ಯರನ್ನು ಸನ್ಮಾನಿಸಲಾಯಿತು.

ಬಿಂದು, ನಾಗರತ್ನಾ ಮತ್ತು ನಾಗಮ್ಮ ಪ್ರಾರ್ಥಿಸಿದರು. ಡಾ| ಕವನ ದೇಶಪಾಂಡೆ ಸ್ವಾಗತಿಸಿದರು. ಡಾ| ಪಲ್ಲವಿ ಕವನ ಪರಿಚಯಿಸಿದರು. ಅಕಾಡೆಮಿ ಕಾರ್ಯದರ್ಶಿ ಡಾ| ಎಂ.ವೈ. ಸಾವಂತ ವಾರ್ಷಿಕ ವರದಿ ಓದಿದರು. ಕರಣ ದೊಡವಾಡ ವಂದಿಸಿದರು. ಡಾ| ಸ್ನೇಹಾ ಜೋಶಿ ಮತ್ತು ಡಾ| ಎನ್‌.ಬಿ. ನಲತವಾಡ ನಿರೂಪಿಸಿದರು.

ಆರೋಗ್ಯಕರ ಶಿಶು ಸ್ಪರ್ಧೆ ಫಲಿತಾಂಶ: 6 ತಿಂಗಳಿಂದ 1 ವರ್ಷದೊಳಗಿನ ವಿಭಾಗದಲ್ಲಿ ಸುಲೋಚನಾ ಆಡಿನ, ಧೀರ ಪಾಟೀಲ, ಸಾತ್ವಕಿ ಗಜಕೋಶ, 1ರಿಂದ 2 ವರ್ಷದೊಳಗಿನ ವಿಭಾಗದಲ್ಲಿ ಅರಹಾಮ ಶೇಕ್‌, ಅದಿಯಾ ಸಂಗಲದ, ಶ್ರೀ ಸಹಸ್ರ, 3 ವರ್ಷದಿಂದ 4 ವರ್ಷದೊಳಗಿನ ವಿಭಾಗದಲ್ಲಿ ಭುವಿತ್‌ ಎಚ್‌., ತಕ್ಷ ಶೆಟ್ಟಿ, ಅಮೇಯ ಹಿರೇಮಠ ಹಾಗೂ ಗ್ರಾಮೀಣ ವಿಭಾಗದಲ್ಲಿ ಸುಜಯ ಕುಂಬಾರ, ಆದ್ಯಾ ಚಂದನಕರ, ಆಝಾನ ಮಾರಲಭಾವಿ ಅನುಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದರು. ಅಂತಿಮವಾಗಿ ಈ ಐದು ವಿಭಾಗಗಳ ಪೈಕಿ ಸ್ಮಾರ್ಟ್‌ ಬೋಸ್‌ ಬೇಬಿ ಪ್ರಶಸ್ತಿಯನ್ನು ಭುಮಿತ ಎಚ್‌.ಗೆ ನೀಡಿ ಗೌರವಿಸಲಾಯಿತು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.