ಉದ್ಯಮ ಸ್ನೇಹಿ ಗಣಿ ನೀತಿ ಶೀಘ್ರ ಜಾರಿ: ನಿರಾಣಿ


Team Udayavani, Mar 13, 2021, 3:21 PM IST

ಉದ್ಯಮ ಸ್ನೇಹಿ ಗಣಿ ನೀತಿ ಶೀಘ್ರ ಜಾರಿ: ನಿರಾಣಿ

ಧಾರವಾಡ: ರಾಜ್ಯದಲ್ಲಿ ಪರಿಸರ ಮತ್ತು ಉದ್ಯಮ ಸ್ನೇಹಿಯಾದ ನೂತನ ಗಣಿ ನೀತಿಯನ್ನು ರಾಜ್ಯ ಸರಕಾರದಿಂದ ರೂಪಿಸುತ್ತಿದ್ದು, ನೀತಿಯ ಕರಡು ಪ್ರತಿ ಪರಿಶೀಲನಾ ಹಂತದಲ್ಲಿದೆ. ಅಂತಿಮಗೊಳಿಸಿ ಶೀಘ್ರದಲ್ಲಿ ನೂತನ ಗಣಿ ನೀತಿ ಜಾರಿಗೊಳಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು.

ಡಿಸಿ ಸಭಾಂಗಣದಲ್ಲಿ ಅಧಿಕಾರಿಗಳ ಹಾಗೂಸ್ಟೋನ್‌ಕ್ರಷರ್‌ ಮತ್ತು ಕಲ್ಲು ಗಣಿಗಾರಿಕೆ ಸಂಘದ ಪದಾಧಿಕಾರಿಗಳ ಸಭೆ ಕೈಗೊಂಡು ಅವರು ಮಾತನಾಡಿದರು. ಹೊಸ ಮೈನಿಂಗ್‌ ನೀತಿಯಲ್ಲಿ ಲೈಸೆನ್ಸ್‌ ಸರಳೀಕರಣಕ್ಕೆ ಆದ್ಯತೆ ನೀಡಲಾಗಿದೆ ಮತ್ತು ಕ್ರಶರ್‌ ಮಾಲೀಕರ ಬೇಡಿಕೆಗಳಿಗೆ ಸ್ಪಂದಿಸಲಾಗಿದೆ. ಪಟ್ಟಾ ಭೂಮಿ ಹಾಗೂ ಸರಕಾರಿ ಭೂಮಿಗಳಲ್ಲಿ ನಡೆಯುವ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದ ರಾಜಧನ ಮೊತ್ತವನ್ನು ಬೇರೆ ಬೇರೆ ನಿಗದಿಗೊಳಿಸಲಾಗುವುದು ಎಂದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಏಕಗವಾಕ್ಷಿ ಯೋಜನೆ ಜಾರಿ ಮೂಲಕ ಉದ್ಯಮಿಗಳಿಗೆ ತ್ವರಿತವಾಗಿ ಸ್ಪಂದಿಸಲು ಕ್ರಮವಹಿಸಲಾಗುತ್ತಿದೆ. ಸದ್ಯದಲ್ಲಿ ರಾಜ್ಯದ ಎಲ್ಲ ಕಂದಾಯ ವಿಭಾಗ ಮತ್ತು ಎಲ್ಲ ಜಿಲ್ಲೆಗಳಲ್ಲಿ ಮೈನಿಂಗ್‌ ಅದಾಲತ್‌ ಆಯೋಜಿಸಲಾಗುತ್ತಿದೆ. ಅದಾಲತ್‌ ನಡೆಯುವ ಸ್ಥಳದಲ್ಲಿಯೇ ಗಣಿ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು.

ಡಿಸಿ ನಿತೇಶ ಪಾಟೀಲ ಮಾತನಾಡಿ, ಪ್ರತಿ ತಿಂಗಳು ಜಿಲ್ಲಾ ಟಾಸ್ಕ್ಫೋರ್ಸ್‌ ಸಭೆ ಜರುಗಿಸಿನಿಯಮಾನುಸಾರ ಲೈಸೆನ್ಸ್‌ ನೀಡಲಾಗುತ್ತಿದೆ. ಪ್ರತಿ ಗಣಿಗಾರಿಕೆ ಹಾಗೂ ಸ್ಟೋನ್‌ಕ್ರಷರ್‌ ಸ್ಥಳದಲ್ಲಿಸುರಕ್ಷತಾ ಕ್ರಮಗಳೊಂದಿಗೆ ಅನುಮತಿಗೆ ವಿ ಧಿಸಿದನಿಯಮಗಳ ಪಾಲನೆ ಕುರಿತು ಅ ಧಿಕಾರಿಗಳಿಂದ ವರದಿ ಪಡೆಯಲಾಗುತ್ತಿದೆ ಎಂದರು.

ಶಾಸಕ ಪ್ರಸಾದ ಅಬ್ಬಯ್ಯ, ಎಸ್‌ಪಿ ಪಿ. ಕೃಷ್ಣಕಾಂತ, ಡಿಸಿಪಿ ರಾಮರಾಜನ್‌, ಪರಿಸರ ಅಧಿಕಾರಿ ಶೋಭಾ ಪೋಳ ಹಾಗೂ ಧಾರವಾಡ ಜಿಲ್ಲಾ ಸ್ಟೋನ್‌ಕ್ರಷರ್‌ ಮತ್ತು ಕಲ್ಲು ಗಣಿಗಾರಿಕೆ ಸಂಘಗಳ ಅಧ್ಯಕ್ಷ ಕಲ್ಲಪ್ಪ ಹಟ್ಟಿಯವರ, ಉಪಾಧ್ಯಕ್ಷ ವಿ.ಎಸ್‌. ಪಾಟೀಲ ಮಾತನಾಡಿದರು. ಹಿರಿಯ ಭೂ ವಿಜ್ಞಾನಿ ಚಂದ್ರಶೇಖರ ಸ್ವಾಗತಿಸಿ,ನಿರೂಪಿಸಿದರು. ರೇಷ್ಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಡಿವೈಎಸ್‌ಪಿ ಎಂ.ಬಿ. ಸಂಕದ ಮೊದಲಾದವರಿದ್ದರು.

ಧಾರವಾಡ ಜಿಲ್ಲೆಯಲ್ಲಿ 62 ಸ್ಟೋನ್‌ ಕ್ರಷರ್‌ ಮತ್ತು 136 ಕಲ್ಲು ಗಣಿಗಾರಿಕೆಗಳಿವೆ. ನಿಯಮ ಉಲ್ಲಂಘಿಸಿಗಣಿಗಾರಿಕೆ ಹಾಗೂ ಸ್ಟೋನ್‌ಕ್ರಷರ್‌ ನಡೆಯುತ್ತಿದ್ದರೆ ಅ ಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಲಿದ್ದಾರೆ. ಗಣಿಮತ್ತು ಭೂ ವಿಜ್ಞಾನ ಇಲಾಖೆ ಅಧಿ ಕಾರಿಗಳಿಗೆ ಹಾಗೂ ಸ್ಟೋನ್‌ಕ್ರಷರ್‌, ಕಲ್ಲು

ಗಣಿಗಾರಿಕೆ ನಡೆಸುವ ಉದ್ಯಮಗಳಿಗೆ ಸೂಕ್ತತರಬೇತಿ ನೀಡಲು ಸ್ಕೂಲ್‌ ಆಫ್‌ ಮೈನಿಂಗ್‌ಆರಂಭಿಸಲು ಸರಕಾರ ಸಿದ್ಧತೆ ನಡೆಸಿದೆ.  –ಮುರುಗೇಶ ನಿರಾಣಿ, ಗಣಿ ಮತ್ತು ಭೂ ವಿಜ್ಞಾನ ಸಚಿವ

ಟಾಪ್ ನ್ಯೂಸ್

1-saasds

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

11-gangavathi

Hit and Run: ಗಂಗಾವತಿಯ ಹೊಟೇಲ್ ಕಾರ್ಮಿಕ ಬೆಂಗಳೂರಿನಲ್ಲಿ ಸಾವು

ICC World Cup 2023; ಪಾಕಿಸ್ತಾನ ತಂಡ ಪ್ರಕಟ; ಹೊರಬಿದ್ದ ನಸೀಂ ಶಾ; ಪ್ರಮುಖ ವೇಗಿ ಸೇರ್ಪಡೆ

ICC World Cup 2023; ಪಾಕಿಸ್ತಾನ ತಂಡ ಪ್ರಕಟ; ಹೊರಬಿದ್ದ ನಸೀಂ ಶಾ; ಪ್ರಮುಖ ವೇಗಿ ಸೇರ್ಪಡೆ

Davanagere: ಟ್ರ್ಯಾಕ್ಟರ್ ರ್ಯಾಲಿಗೆ ಮುಂದಾದ ರೈತರ ಬಂಧನ

Davanagere: ಟ್ರ್ಯಾಕ್ಟರ್ ರ್ಯಾಲಿಗೆ ಮುಂದಾದ ರೈತರ ಬಂಧನ

hd deve gowda

JDS BJP Alliance; ಮೈತ್ರಿ ವಿಚಾರವಾಗಿ ಮೌನ ಮುರಿಯದ ದೇವೇಗೌಡರು

madhu bangarappa

Cauvery ವಿಚಾರದಲ್ಲಿ ಸಿಎಂ ಕಠಿಣ ನಿಲುವಿಗೆ ಬೆಂಬಲ: ಮಧು ಬಂಗಾರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಮನೆ ಮಂದಿಯನ್ನು ಬೆದರಿಸಿ 70 ಲಕ್ಷ ರೂ. ಮೌಲ್ಯದ ನಗದು- ಚಿನ್ನ ಕಳವು

Hubli; ಮನೆ ಮಂದಿಯನ್ನು ಬೆದರಿಸಿ 70 ಲಕ್ಷ ರೂ. ಮೌಲ್ಯದ ನಗದು- ಚಿನ್ನ ಕಳವು

accident

Dharwad: ಗಣೇಶೋತ್ಸವಕ್ಕೆ ಹೋಗಿದ್ದ ಪೊಲೀಸ್ ಪೇದೆ ಅಪಘಾತದಲ್ಲಿ ಮೃತ್ಯು

6-

Chaitra Kundapur Caseಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಶಾಸಕ ಅರವಿಂದ ಬೆಲ್ಲದ್

Hubballi: ವಾದ್ಯಘೋಷಗಳೊಂದಿಗೆ ಅದ್ಧೂರಿಯಾಗಿ ಈದ್ಗಾ ಮೈದಾನ ತಲುಪಿದ ಗಣೇಶ ಮೂರ್ತಿ

Hubballi: ವಾದ್ಯಘೋಷಗಳೊಂದಿಗೆ ಅದ್ಧೂರಿಯಾಗಿ ಈದ್ಗಾ ಮೈದಾನ ತಲುಪಿದ ಗಣೇಶ ಮೂರ್ತಿ

Dharwad: ಮರಳಿ ಒಂದಾದ 19 ದಂಪತಿ; 30 ವರ್ಷಗಳ ಸುದೀರ್ಘ‌ ವ್ಯಾಜ್ಯ ಅಂತ್ಯ

Dharwad: ಮರಳಿ ಒಂದಾದ 19 ದಂಪತಿ; 30 ವರ್ಷಗಳ ಸುದೀರ್ಘ‌ ವ್ಯಾಜ್ಯ ಅಂತ್ಯ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1-saasds

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

ಕುಡಿಯುವ ನೀರಿಗೆ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಬೈರತಿ ಸುರೇಶ

ಕುಡಿಯುವ ನೀರಿಗೆ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಬೈರತಿ ಸುರೇಶ

Totapuri 2 ಜಗ್ಗೇಶ್-ಡಾಲಿ ಜೊತೆಯಾಟ; ಸೆ.28ರಿಂದ ತೋತಾಪುರಿ ರುಚಿ

Totapuri 2 ಜಗ್ಗೇಶ್-ಡಾಲಿ ಜೊತೆಯಾಟ; ಸೆ.28ರಿಂದ ತೋತಾಪುರಿ ರುಚಿ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

12–chikkamagaluru

Kottigehara: ಅಕ್ರಮ ಭೂ ಕಬಳಿಕೆ ತೆರವುಗೊಳಿಸದ ಕಂದಾಯ ಇಲಾಖೆ ವಿರುದ್ದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.