ನಾಳೆಯಿಂದ ಮಾಸಾಂತ್ಯದವರೆಗೆ ಸಂಜೆ 5ಗಂಟೆ ತನಕ ವಹಿವಾಟು


Team Udayavani, Jul 11, 2020, 2:09 PM IST

ನಾಳೆಯಿಂದ ಮಾಸಾಂತ್ಯದವರೆಗೆ ಸಂಜೆ 5ಗಂಟೆ ತನಕ ವಹಿವಾಟು

ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ಕೋವಿಡ್ ಹಿನ್ನೆಲೆಯಲ್ಲಿ ಜು.13ರಿಂದ 31ರವರೆಗೆ ವ್ಯಾಪಾರ ವಹಿವಾಟನ್ನು ಬೆಳಗ್ಗೆ 9:00ರಿಂದ ಸಂಜೆ 5:00 ಗಂಟೆವರೆಗೆ ಮಾತ್ರ ನಡೆಸಬೇಕೆಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ನಿರ್ಧರಿಸಿದೆ ಎಂದು ಕೆಸಿಸಿಐನ ಮಾಜಿ ಅಧ್ಯಕ್ಷ ಶಂಕರಣ್ಣ ಮುನವಳ್ಳಿ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ವೈರಸ್‌ ಹೆಚ್ಚುತ್ತಲಿದೆ. ಕಾರಣ ವರ್ತಕರು ಸರಕಾರದ ನಿರ್ದೇಶನಗಳನ್ನು ಪಾಲಿಸಬೇಕು. ತಮ್ಮ ಅಂಗಡಿಗಳಲ್ಲಿ ಮುಂಜಾಗ್ರತಾ ಕ್ರಮ ಅನುಸರಿಸಬೇಕು. ಮಾಸ್ಕ್, ಸ್ಯಾನಿಟೈಸರ್‌ ಬಳಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ವಚ್ಛತೆ ಕಾಪಾಡಬೇಕು. ಅಂಗಡಿಗೆ ಆಗಮಿಸುವ ಗ್ರಾಹಕರಿಗೆ ಈ ಕುರಿತು ಸರಿಯಾಗಿ ಮಾಹಿತಿ ಕೊಡಬೇಕು. ಸ್ವಯಂ ಪ್ರೇರಿತರಾಗಿ ಸಂಜೆ 5:00 ಗಂಟೆ ನಂತರ ಅಂಗಡಿಗಳನ್ನು ಮುಚ್ಚುವ ಮೂಲಕ ಕೋವಿಡ್ ವೈರಸ್‌ ನಿಯಂತ್ರಣಕ್ಕೆ ಕೈಜೋಡಿಸಬೇಕೆಂದು ವಿವಿಧ ಕ್ಷೇತ್ರಗಳ ವ್ಯಾಪಾರಸ್ಥರೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಕಿಮ್ಸ್‌ನ ತಜ್ಞ ವೈದ್ಯರಾದ ಡಾ| ಶೈಲೇಂದ್ರ ಕುಮಾರ ಅವರನ್ನು ಕರೆಯಿಸಿ, ಸಭೆಯಲ್ಲಿ ಪಾಲ್ಗೊಂಡಿದ್ದ ವ್ಯಾಪಾರಸ್ಥರ ಸಂಘಗಳ ಪದಾಧಿಕಾರಿಗಳಿಗೆ ಅಂಗಡಿಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ವ್ಯಾಪಾರಸ್ಥರು ಮತ್ತು ಗ್ರಾಹಕರು, ಕಾರ್ಮಿಕರು ತಮ್ಮ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕೆಂಬ ಕುರಿತು ಹಾಗೂ ಜ್ವರ, ನೆಗಡಿ, ಕೆಮ್ಮು ಬಂದರೆ ನಿರ್ಲಕ್ಷ್ಯ ತೋರಬೇಡಿ. ವೈದ್ಯರನ್ನು ತಕ್ಷಣ ಸಂಪರ್ಕಿಸಿ ಅವರ ಸಲಹೆ ಪಡೆಯಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು. ಆಹಾರ ಪದ್ಧತಿ ಬದಲಾಯಿಸಿಕೊಳ್ಳಬೇಕು. ಸ್ವತ್ಛತೆ ಕಾಪಾಡಿಕೊಳ್ಳಬೇಕು. ದೇವಸ್ಥಾನ, ಮಂದಿರ, ಮಸೀದಿ, ಚರ್ಚ್‌ಗಳಿಗೆ ಹೋಗಬೇಡಿ. ಅನವಶ್ಯಕವಾಗಿ ಮನೆ ಬಿಟ್ಟು ಎಲ್ಲಿ ಹೋಗಬೇಡಿ. ಹಣ್ಣು-ಹಂಪಲ, ಜವಾರಿ ಪದಾರ್ಥ ಹಾಗೂ ಬಿಸಿನೀರು ಸೇವಿಸಿ ಎಂದು ತಿಳಿವಳಿಕೆ ಕೊಡಲಾಗಿದೆ.  ಈ ಕುರಿತು ಕರಪತ್ರಗಳನ್ನು ಸಿದ್ಧಪಡಿಸಿ ಜಿಲ್ಲೆಯ ಸುತ್ತಲಿನ ಹಳ್ಳಿ ಹಳ್ಳಿಗೂ ಹಂಚಿಕೆ ಮಾಡಿ ಜಾಗೃತಿ ಮೂಡಿಸಲಾಗುವುದು. ಸಂಜೆ 5:00ರ ನಂತರ ಜನರು ತಮ್ಮ ಗ್ರಾಮ, ಮನೆಗಳಿಗೆ ತೆರಳಲು ಬಸ್‌ ವ್ಯವಸ್ಥೆ ಮಾಡುವಂತೆ ವಾಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೂ ಮನವಿ ಮಾಡಲಾಗಿದೆ. ಸಂಜೆ ನಂತರ ತಮ್ಮ ವ್ಯಾಪಾರ-ವಹಿವಾಟು ಬಂದ್‌ ಮಾಡಲು ವ್ಯಾಪಾರಸ್ಥರು ಸಮ್ಮತಿ ವ್ಯಕ್ತಪಡಿಸಿದ್ದಾರೆ ಎಂದರು.

ಕೆಸಿಸಿಐನ ಅಧ್ಯಕ್ಷ ಮಹೇಂದ್ರ ಲದ್ದಡ, ವಿನಯ ಜವಳಿ, ಸಿದ್ದೇಶ್ವರ ಕಮ್ಮಾರ, ಅಶೋಕ ಗಡಾದ ಮೊದಲಾದವರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.