ಸಾಹಸಿ ಮಕ್ಕಳ ವೇದಿಕೆಯಿಂದ ಶಿಬಿರ
Team Udayavani, May 14, 2019, 11:58 AM IST
ಧಾರವಾಡ: ಸಾಹಸಿ ಮಕ್ಕಳ ವೇದಿಕೆಯಿಂದ ನಗರದ ಟಿಸಿಡಬ್ಲ್ಯೂ ಆವರಣದಲ್ಲಿ ಎರಡು ದಿನಗಳ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು. ನಗರದ ವಿವಿಧ ಕೊಳಗೇರಿ ಹಾಗೂ ಬಡಾವಣೆ ಮಕ್ಕಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.
ನಿವೃತ್ತ ಶಿಕ್ಷಕಿ ಹಾಗೂ ಮಕ್ಕಳ ಸಾಹಿತಿ ದಮಯಂತಿ ನರೇಗಲ್ ಶಿಬಿರ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಒಳ್ಳೆಯ ವಿಷಯಗಳನ್ನು ಕಲಿಸಿಕೊಡಲು ಇಂತಹ ಶಿಬಿರಗಳು ಸಹಕಾರಿಯಾಗಲಿವೆ. ಹಿಂದಿನ ದಿನಗಳಲ್ಲಿ ಇಂತಹ ಶಿಬಿರಗಳು ನಡೆಯುತ್ತಿರಲಿಲ್ಲ. ನಮಗೆ ಅವಕಾಶಗಳು ಸಿಗುತ್ತಿರಲಿಲ್ಲ. ಇಂದು ಹಲವಾರು ಅವಕಾಶಗಳು ದೊರೆಯುತ್ತಿದ್ದು, ಮಕ್ಕಳು ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಬ್ರೆಕ್ಥ್ರೂ ಸೈನ್ಸ್ ಸೊಸೈಟಿ ಜಿಲ್ಲಾ ಸಂಚಾಲಕರಾದ ದೀಪಾ ವಿ. ಮಾತನಾಡಿ, ಮಕ್ಕಳು ಸಮಾಜದ ಭವಿಷ್ಯವೆನ್ನುತ್ತಾರೆ. ಅವರಲ್ಲಿ ಉನ್ನತ ವ್ಯಕ್ತಿತ್ವವನ್ನು ರೂಪುಗೊಳಿಸುವುದು ಇಂದಿನ ಅವಶ್ಯಕತೆಯಾಗಿದೆ. ಅದರಲ್ಲೂ ಕೊಳಗೇರಿಗಳ ಮಕ್ಕಳತ್ತ ಹೆಚ್ಚಿನ ಗಮನ ಕೊಡುವ ಅಗತ್ಯವಿದೆ. ಅವಳಿ ನಗರದ ಹಲವಾರು ಕೊಳಗೇರಿಗಳಲ್ಲಿ ನಮ್ಮ ಸಂಘಟನೆಗಳಿಂದ ಪ್ರತಿ ರವಿವಾರ ಮಕ್ಕಳಿಗೆ ಆಟ, ಹಾಡು, ಮೌಲ್ಯಗಳನ್ನು ಬೆಳೆಸುವ ನೀತಿ ಕಥೆಗಳನ್ನು ಹೇಳುತ್ತ ಬಂದಿದ್ದು, ಅದರ ಭಾಗವಾಗಿ ಈ ಶಿಬಿರ್ನ ನಡೆಸಲಾಗುತ್ತಿದೆ ಎಂದು ವಿವರಿಸಿದರು.
ಸಾಹಸಿ ಮಕ್ಕಳ ವೇದಿಕೆಯ ರಮೇಶ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಗಂಗಾ ಕೋಕರೆ ಉಪಸ್ಥಿತರಿದ್ದರು. ಎರಡು ದಿನಗಳ ಶಿಬಿರದಲ್ಲಿ ಮಹಾನ್ ವ್ಯಕ್ತಿಗಳ ಪರಿಚಯ, ಪವಾಡ ರಹಸ್ಯ ಬಯಲು ಕಾರ್ಯಕ್ರಮ, ಕುಶಲ ಕಲೆಯ ಅನಾವರಣ, ಹಾಡು, ನಾಟಕ, ನೃತ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ