ಕಡ್ಡಾಯ ವರ್ಗ ರದ್ದು ಮಾಡಿ
Team Udayavani, Jun 30, 2019, 9:43 AM IST
ಹುಬ್ಬಳ್ಳಿ: ನ್ಯಾಯ ಸಮ್ಮತವಲ್ಲದ ಶಿಕ್ಷಕರ ವರ್ಗಾವಣೆಯನ್ನು ಕೂಡಲೇ ರದ್ದುಪಡಿಸಬೇಕೆಂದು ಒತ್ತಾಯಿಸಿ ಪ್ರೌಢಶಾಲಾ ಶಿಕ್ಷಕರ ಸಂಘದಿಂದ ಶನಿವಾರ ಮೌನ ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಹುಬ್ಬಳ್ಳಿ: ನ್ಯಾಯ ಸಮ್ಮತವಲ್ಲದ ಶಿಕ್ಷಕರ ಕಡ್ಡಾಯ ವರ್ಗಾವಣೆಯನ್ನು ಈ ಕೂಡಲೇ ರದ್ದುಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘ ಹುಬ್ಬಳ್ಳಿ ಶಹರ ಘಟಕದಿಂದ ಶನಿವಾರ ಮೌನ ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಯಾವ ಇಲಾಖೆಗೂ ಇಲ್ಲದ ಕಡ್ಡಾಯ ವರ್ಗಾವಣೆ ನಮ್ಮ ಇಲಾಖೆಗೇಕೆ ಎಂದು ಪ್ರಶ್ನಿಸಿರುವ ಪ್ರತಿಭಟನಾಕಾರರು ಪ್ರೌಢಶಾಲಾ ಶಿಕ್ಷಕರ ಕಡ್ಡಾಯ ವರ್ಗಾವಣೆ ನಿಯಮವು ಹಲವಾರು ಲೋಪದೋಷಗಳಿಂದ ಕೂಡಿದೆ. ಇದೊಂದು ಅವೈಜ್ಞಾನಿಕ ನಿಯಮವಾಗಿದೆ. 50 ವರ್ಷ ಮೇಲ್ಪಟ್ಟ ಮತ್ತು ಹಲವಾರು ಸಮಸ್ಯೆಗಳಿಂದ ಬಳಲುತ್ತಿರುವ ಶಿಕ್ಷಕರು ಕಡ್ಡಾಯ ವರ್ಗಾವಣೆಯಿಂದ ಸಾಕಷ್ಟು ಸಮಸ್ಯೆ ಎದುರಿಸುವಂತಾಗಿದೆ. ರಾಜ್ಯ ಸರಕಾರ ಈ ಕೂಡಲೇ ವರ್ಗಾವಣೆ ಕಾಯ್ದೆ ರದ್ದು ಪಡಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ನೆಹರು ಮೈದಾನದಿಂದ ಆರಂಭಗೊಂಡ ಮೌನ ಮೆರವಣಿಗೆ ತಹಶೀಲ್ದಾರ್ ಕಚೇರಿವರೆಗೆ ಆಗಮಿಸಿ ಮನವಿ ಸಲ್ಲಿಸಿದರು.ಬಿ.ಇಂದಿರಾ, ಎನ್.ಯು.ಬದ್ದಿ, ಪ್ರಹ್ಲಾದ ಗೆಜ್ಜಿ ಸೇರಿದಂತೆ ಅನೇಕ ಶಿಕ್ಷಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ