3 ಮನೆಗಳಿಗೆ ಕನ್ನ ಹಾಕಿದ್ದ ಕಳ್ಳರ ಸೆರೆ


Team Udayavani, Jul 22, 2019, 9:56 AM IST

hubali-tdy-4

ಧಾರವಾಡ: ಪೊಲೀಸ್‌ ತಂಡದೊಂದಿಗೆ ಬಂಧಿತ ಆರೋಪಿಗಳು.

ಧಾರವಾಡ: ಮೂರು ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂರು ಜನ ಕಳ್ಳರನ್ನು ಬಂಧಿಸುವಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಇಲ್ಲಿಯ ಲಕ್ಷ್ಮೀಸಿಂಗನಕೇರಿಯ ಮಂಜುನಾಥ ಅರ್ಜುನ ಹುಲ್ಲೂರ, ಶಾನು ರೆಹಮಾನಸಾಬ ಹಾಲಬಾವಿ ಮತ್ತು ರಾಜು ರಾಮಣ್ಣ ಅಮ್ಮಿನಬಾವಿ ಬಂಧಿತ ಆರೋಪಿಗಳು. 2-3 ತಿಂಗಳ ಹಿಂದೆಯಷ್ಟೇ ಲೋಕಾಯುಕ್ತ ಎಸ್‌ಪಿ ಅವರ ಮನೆಗೆ ಕನ್ನ ಹಾಕಿದ್ದ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು. ಕಳೆದ ಒಂದು ತಿಂಗಳ ಹಿಂದೆ ಜಾಮೀನು ಮೇಲೆ ಹೊರ ಬಂದಿದ್ದ ಇವರು ಮತ್ತೆ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಲಾಗಿದೆ. ಜೂ.2ರಂದು ವಿದ್ಯಾಗಿರಿ ಠಾಣಾ ವ್ಯಾಪ್ತಿಯ ವೀರಭದ್ರೇಶ್ವರ ಪಾರ್ಕ್‌ ಹತ್ತಿರದ ವೀರಾತಯ್ಯ ಬಳಗೋಡ ಅವರ ಮನೆಯ ಬೀಗ ಮುರಿದು 2.85 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿತ್ತು. ಬಳಿಕ ಜೂ.27ರಂದು ಶಹರ ಪೊಲೀಸ್‌ ಠಾಣೆ ವ್ಯಾಪ್ತಿಯ ದಿಕ್ಷಿತವಾಡಾದಲ್ಲಿಯ ಮಂಜುಳಾ ಕುಲಕರ್ಣಿ ಅವರ ಮನೆಗೆ ಕನ್ನ ಹಾಕಿ 47,500 ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿತ್ತು. ಇದಾದ ಬಳಿಕ ಜು.7ರಂದು ಶಹರ ಠಾಣಾ ವ್ಯಾಪ್ತಿಯ ಚರಂತಿಮಠ ಗಾರ್ಡ್‌ನ್‌ನಲ್ಲಿಯ ಪ್ರಸನ್ನ ಪ್ರಕಾಶ ನರೇಂದ್ರ ಅವರ ಮನೆ ಬೀಗ ಮುರಿದು ಒಳ ನುಗ್ಗಿ ಮನೆಯಲ್ಲಿದ್ದ 4,62,500 ರೂ.ಗಳ ಚಿನ್ನಾಭರಣ ಕಳ್ಳತನ ಮಾಡಲಾಗಿತ್ತು. ಈ ಮೂರೂ ಕಳ್ಳತನ ಪ್ರಕರಣ ಭೇದಿಸಿರುವ ಪೊಲೀಸರು ಕಳ್ಳರನ್ನು ಬಂಧಿಸಿದ್ದಾರೆ.ಇನ್ಸ್‌ಪೆಕ್ಟರ್‌ ಅಲ್ತಾಫಹುಸೇನ ಮುಲ್ಲಾ ನೇತೃತ್ವದಲ್ಲಿ ಶಿವಾನಂದ ಬನ್ನಿಕೊಪ್ಪ, ಬಿ.ಎಂ. ಅಂಗಡಿ, ಎ.ಎಂ. ಹುಯಿಲಗೋಳ, ಎ.ಬಿ. ನರೇಂದ್ರ, ಎಂ.ಎಫ್‌. ನದಾಫ, ಐ.ಪಿ. ಬುರ್ಜಿ, ಆರ್‌.ಕೆ. ಅತ್ತಾರ, ಎಂ.ಸಿ. ಮಂಕಣಿ, ಡಿ.ಎಸ್‌. ಸಾಂಗ್ಲಿಕರ, ಎಂ.ಜಿ. ಪಾಟೀಲ ಅವರಿದ್ದ ತಂಡ ಈ ಕಾರ್ಯ ಮಾಡಿದೆ. ಬಂಧಿತ ಆರೋಪಿಗಳಿಂದ 230 ಗ್ರಾಂ ಚಿನ್ನ, 690 ಗ್ರಾಂ ಬೆಳ್ಳಿ ಸೇರಿದಂತೆ 7 ಲಕ್ಷ 10 ಸಾವಿರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್‌ ಸಹಾಯಕ ಆಯುಕ್ತ ಎಂ.ಎನ್‌. ರುದ್ರಪ್ಪ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.