ಮಕ್ಕಳಂತೆ ಸಸಿ ಪಾಲನೆ ಮಾಡಿ: ಕುಲಕರ್ಣಿ
Team Udayavani, Jun 6, 2018, 5:22 PM IST
ಕುಳಗೇರಿ ಕ್ರಾಸ್: ಗಿಡ ಮರಗಳಿಂದ ಕೂಡಿದ ಪರಿಸರವು ಆರೋಗ್ಯಕ್ಕೆ ಪೂರಕವಾಗಿದ್ದು, ಪ್ರತಿಯೊಬ್ಬರು ತಮ್ಮ ಮನೆಯಂಗಳದಲ್ಲಿ ಸಸಿ ನೆಟ್ಟು ಅವುಗಳನ್ನು ಮಕ್ಕಳಂತೆ ಪಾಲನೆ ಮಾಡಿ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಮುಖ್ಯಾಧ್ಯಾಪಕ ಆರ್.ಆರ್. ಕುಲಕರ್ಣಿ ಹೇಳಿದರು. ಸ್ಥಳೀಯ ಜಿ.ಜಿ. ಹಕ್ಕಾ ಪಕ್ಕಿ ಪ್ರೌಢಶಾಲೆ ಹಾಗೂ ಅರಣ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪರಿಸರ ದಿನಾಚರಣೆಗೆ ಸಸಿ ನೆಟ್ಟು ನೀರು ಹಾಕುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಅರಣ್ಯ ಅಧಿಕಾರಿ ಆರ್.ಬಿ. ಗಂಗಾಪುರ ಮಾತನಾಡಿ, ಪರಿಸರ ನಾಶದಿಂದ ಭೂಮಿಯ ತಾಪಮಾನ ಹೆಚ್ಚುತಿದ್ದು, ಅದರ ಪರಿಣಾಮದಿಂದ ಅತಿಯಾದ ಬಿಸಿಲು, ಮಳೆ, ಚಳಿ ನೆರೆ ಹಾವಳಿ ಸಾಂಕ್ರಾಮಿಕ ರೋಗಗಳು ಸಾಮಾನ್ಯವಾಗಿದೆ. ಪ್ರತಿಯೊಬ್ಬರು ಗಿಡ ಮರ ಬೆಳೆಸಬೇಕು ಎಂದರು.
ವಿದ್ಯಾರ್ಥಿಗಳು, ಶಿಕ್ಷಕರು, ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಜಾಥಾ ಮೂಲಕ ಜನಸಾಮಾನ್ಯರಲ್ಲಿ ಅರಿವು ಮೂಡಿಸಿದರು. ಅರಣ್ಯ ಇಲಾಖೆ ಹವಾಲ್ದಾರ್ ಎಚ್.ಎಂ. ಗುಂಡಳ್ಳಿ, ಶಿಕ್ಷಕರಾದ ಎಂ.ಕೆ. ಸುಸಂಗಿ, ಪಿ.ವಿ. ಜಲ್ಲಿ, ಎಸ್.ಎಂ. ಅಂಗಡಿ, ಕೆ.ಎಲ್. ಪಾಟೀಲ, ಟಿ.ಪಿ. ಲಮಾಣಿ, ಎಸ್.ಎಚ್. ಪಾಟೀಲ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ