ಮಕ್ಕಳ ಆರೋಗ್ಯ ದತ್ತ ಇರಲಿ ಚಿತ್ತ


Team Udayavani, Dec 13, 2019, 11:57 AM IST

huballi-tdy-2

ಅಳ್ನಾವರ: ಮಕ್ಕಳು ದೇಶದ ಆಸ್ತಿ ಇದ್ದಂಗೆ. ದೇಶದ ಭವಿಷ್ಯ ನಿರ್ಮಿಸುವ ಗುರುತರ ಜವಾಬ್ದಾರಿ ಅವರ ಹೆಗಲ ಮೇಲಿದೆ. ಅಂತಹ ಮಕ್ಕಳ ಆರೋಗ್ಯದ ಕಡೆ ಗಮನ ಹರಿಸುವುದು ನಮ್ಮೆಲ್ಲರ ಹೊಣೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್‌ ಸಿದ್ದಲಿಂಗಯ್ಯ ಹಿರೇಮಠ ಹೇಳಿದರು.

ಇಲ್ಲಿನ ಅನ್ನಪೂರ್ಣ ಚಂದ್ರಶೇಖರಯ್ಯ ಹಿರೇಮಠ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಧಾರವಾಡದ ಮಕ್ಕಳ ಅಕಾಡೆಮಿ, ಸಾರ್ವಜನಿಕ ಶಿಕ್ಷಣ ಇಲಾಖೆ, ರೋಟರಿ ಕ್ಲಬ್‌ ಧಾರವಾಡ ಸೆಂಟ್ರಲ್‌ ಹಾಗೂ ಎಸ್‌ಡಿಎಂ ದಂತ ಮಹಾವಿದ್ಯಾಲಯದ ಆಶ್ರಯದಲ್ಲಿ ನಡೆದ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಅವರು ಮಾತನಾಡಿದರು.

ಜೀವನದಲ್ಲಿ ಸಾಧನೆಯ ಮೆಟ್ಟಿಲು ಹತ್ತಲು ಪಠ್ಯ ಜ್ಞಾನದ ಜೊತೆಗೆ ಸಾಮಾನ್ಯ ಜ್ಞಾನ ಸಂಪಾದನೆ ಕೂಡಾ ಅಷ್ಟೇ ಮಹತ್ವ ಪಡೆದಿದೆ. ದೇಶದ ಪಾರಂಪರಿಕ ಇತಿಹಾಸದ ಅರಿವು ಮಕ್ಕಳಿಗೆ ತಿಳಿಸಬೇಕು. ಪುರಾಣ, ಪುಣ್ಯ ಕಥೆ, ರಾಮಾಯಣ, ಮಹಾಭಾರತ ಜೊತೆಗೆ ಬೇರೆ ದೇಶದ ಕಥೆಗಳನ್ನು ಮಕ್ಕಳು ಓದಲು ಅನುಕೂಲ ಮಾಡಿಕೊಡಬೇಕು. ಕಥೆ ಪುಸ್ತಕ ಓದುವ ಹವ್ಯಾಸ ಮಕ್ಕಳ ಬುದ್ಧಿವಂತಿಕೆ ಹಾಗೂ ಮನೋಬಲ ಹೆಚ್ಚಿಸಲು ಸಹಕಾರಿಯಾಗಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿ ಕಾರಿ ವಿದ್ಯಾ ನಾಡಿಗೇರ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಪ್ರಾರ್ಥನೆ ಮಾಡುವಾಗ ಪುಸ್ತಕ ಪರಿಚಯ ಎಂಬ ವಿನೂತನ ಕಾರ್ಯಕ್ರಮ ಜಾರಿ ಮಾಡಲಾಗಿದೆ. ದಿನಕ್ಕೊಂದು ಪುಸ್ತಕ ಪರಿಚಯ ಮಾಡುವ ಘನ ಉದ್ದೇಶ ಹೊತ್ತು ಅನುಷ್ಠಾನಗೊಂಡ ಇಂತಹ ಪ್ರಯೋಗ ನಡೆಸಲು ಖಾಸಗಿ ಶಾಲೆಗಳು ಮುಂದೆ ಬರಬೇಕು ಎಂದರು. ಚಿಕ್ಕ ಮಕ್ಕಳ ತಜ್ಞ ಡಾ| ರಾಜನ್‌ ದೇಶಪಾಂಡೆ ಮಾತನಾಡಿ, ತಂಬಾಕು ಸೇವನೆಯಿಂದ ದೂರ ಇರಬೇಕು. ಝಂಕ್‌ ಫುಡ್‌ ತಿನ್ನಬಾರದು. ಪೌಷ್ಟಿಕಾಂಶಯುಳ್ಳ ಆಹಾರ ಸೇವನೆ ಮಾಡಬೇಕು. ಒಳ್ಳೆಯ ಆಹಾರ ಪದ್ಧತಿಯಿಂದ ಸಕಾರಾತ್ಮಕ ಚಿಂತನೆಗಳು ಮೂಡಿ ಉಲ್ಲಾಸದ ಜೀವನ ನಿಮ್ಮದಾಗುತ್ತದೆ ಎಂದರು.

ಈ ಶಿಬಿರದಲ್ಲಿ ಭಾಗವಹಿಸಿದ ಧಾರವಾಡ ಎಸ್‌ಡಿಎಂ ದಂತ ಮಹಾವಿದ್ಯಾಲಯದ ಡಾ| ವಿಜಯ ತ್ರಾಸದ್‌ ನೇತೃತ್ವದ 22 ಜನರ ವೈದ್ಯರ ತಂಡ 2500ಕ್ಕೂ ಹೆಚ್ಚು ಮಕ್ಕಳ ದಂತ ತಪಾಸಣೆ ಮಾಡಿದರು. ವಿದ್ಯಾರ್ಥಿನಿಯರು ಋತು ಚಕ್ರ ಕಾಲದಲ್ಲಿ ಕೈಗೊಳ್ಳಬಹುದಾದ ಸ್ವತ್ಛತೆ ನಿರ್ವಹಣೆ ಬಗ್ಗೆ ಸ್ತ್ರೀ ರೋಗ ತಜ್ಞೆ ಡಾ| ಕೋಮಲ್‌ ಕುಲಕರ್ಣಿ ಹಾಗೂ ಡಾ| ನಂದಾ ಹಂಪಿಹೋಳಿ ಮಾಹಿತಿ ನೀಡಿದರು. ಪೌಷ್ಟಿಕ ಆಹಾರ ಸೇವನೆ ಬಗ್ಗೆ ಡಾ| ಪೂರ್ತಿ ಶರ್ಮಾ ತಿಳಿಸಿದರು.

ಅಳ್ನಾವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ.ಸಿ. ಹಿರೇಮಠ, ಧಾರವಾಡ ರೋಟರಿ ಕ್ಲಬ್‌ ಅಧ್ಯಕ್ಷ ಡಾ| ಕವನ ದೇಶಪಾಂಡೆ, ಮುಖ್ಯಶಿಕ್ಷಕಿ ಶೋಭಾ ನಾಯಕ, ಡಾ| ಪ್ರಗತಿ ಭಟ್‌, ಸುನೀಲ ಬಾಗೇವಾಡಿ, ಸಿಆರ್‌ಪಿ ದಪೇದಾರ ಇದ್ದರು. ಮುಕುಂದ ಕುಲಕರ್ಣಿ ನಿರ್ವಹಿಸಿದರು. ಸುಧಾ ಜೋಶಿ ವಂದಿಸಿದರು.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.