ಕಾವೇರಿ ನಿರ್ವಹಣಾ ಮಂಡಳಿ: ಸರ್ಕಾರ ನಿರ್ಲಕ್ಷ್ಯ
Team Udayavani, Jun 25, 2018, 7:00 AM IST
ಹುಬ್ಬಳ್ಳಿ: ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿಚಾರದಲ್ಲಿ ರಾಜ್ಯ ಸರಕಾರ ತೋರಿದ ನಿರ್ಲಕ್ಷ್ಯದ ಪರಿಣಾಮ ಇಂತಹ ಸ್ಥಿತಿ ಬಂದೊದಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾವೇರಿ ನಿರ್ವಹಣಾ ಮಂಡಳಿ ಕುರಿತು ಕೇಂದ್ರ ಸರಕಾರ ಚರ್ಚೆ ನಡೆಸುತ್ತಿರುವ ಸಂದರ್ಭದಲ್ಲಿ ರಾಜ್ಯದಲ್ಲಿ ಯಾರು ಸಿಎಂ ಆಗ ಬೇಕು, ಡಿಸಿಎಂ ಪಟ್ಟ ಯಾರಿಗೆ, ಯಾರ್ಯಾರಿಗೆ ಸಚಿವ ಸ್ಥಾನ ನೀಡಬೇಕು. ಭಿನ್ನಮತ ಹಾಗೂ ಅತೃಪ್ತರನ್ನು ಸಮಾಧಾನ ಮಾಡುವುದರಲ್ಲೇ ಕಾಲ ಕಳೆದರು. ಕಾವೇರಿ ಸಂಬಂಧ ಪ್ರಧಾನಿಯನ್ನು ಭೇಟಿಯಾಗುವ ಕನಿಷ್ಠ ಪ್ರಜ್ಞೆ ಕೂಡ ರಾಜ್ಯ ಸರಕಾರಕ್ಕಿರಲಿಲ್ಲ. ಈ ವಿಚಾರದಲ್ಲಿ ರಾಜ್ಯ ಸರಕಾರ, ಸುಪ್ರಿಂ ಆಜ್ಞೆಯನ್ನು ಚಾಲೇಂಜ್ ಮಾಡುವ ಗೋಜಿಗೆ ಹೋಗಲಿಲ್ಲ. ಕೊನೆಗೆ ತಗಾದೆ ತೆಗೆದರೆ ಏನು ಪ್ರಯೋಜನ? ಇವರಿಗೆ ಸ್ಥಾನಮಾನವೇ ಹೆಚ್ಚಾಗಿತ್ತು. ರಾಜ್ಯದ ಹಿತಾಸಕ್ತಿ ಅಗತ್ಯವಾಗಿರಲಿಲ್ಲ. ಸಮಿತಿಗೆ ನಾಮ ನಿರ್ದೇಶನ ಮಾಡುವಲ್ಲೂ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು