ಸಿಬಿಐ ತನಿಖೆ ಚುರುಕು
Team Udayavani, Sep 29, 2019, 10:20 AM IST
ಧಾರವಾಡ: ಸಿಬಿಐ ಅಧಿಕಾರಿಗಳು ಹೆಬ್ಬಳ್ಳಿ ಜಿಪಂ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ತನಿಖೆ ಆರಂಭಿಸಿದ್ದಾರೆ.
ಸಿಬಿಐ ಎಸ್ಪಿ ಥಾಮಸ್ ನೇತೃತ್ವದ ತಂಡ ಶುಕ್ರವಾರವಷ್ಟೇ ಹು-ಧಾ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ಪ್ರಕರಣದ ಮಾಹಿತಿ ಸಂಗ್ರಹಿಸಿತ್ತು. ಶನಿವಾರ ಬೆಳಗ್ಗೆ ಧಾರವಾಡ ತಾಲೂಕಿನ ಗೋವನಕೊಪ್ಪದಲ್ಲಿನ ಯೋಗೀಶಗೌಡ ಗೌಡರ ತೋಟದ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಂದ ಮಾಹಿತಿ ಕಲೆಹಾಕಿದೆ. ಯೋಗೀಶಗೌಡ ಗೌಡರ ಅವರ ಸಹೋದರ ಗುರುನಾಥಗೌಡ ಹಾಗೂ ಕುಟುಂಬದ ಇತರೆ ಸದಸ್ಯರನ್ನು ಮೂರು ತಾಸುಗಳ ಕಾಲ ವಿಚಾರಣೆ ನಡೆಸಿದ ಅಧಿಕಾರಿಗಳು ಘಟನೆ ನಡೆದ ದಿನಾಂಕ, ನಂತರದಲ್ಲಾದ ಬೆಳವಣಿಗೆಗಳು, ಈ ಹಿಂದೆ ನಡೆದ ವಿಚಾರಣೆ ಸೇರಿದಂತೆಇತರೆ ಬೆಳವಣಿಗೆಗಳ ಸಮಗ್ರ ಮಾಹಿತಿ ಪಡೆದಿದ್ದಾರೆ. ಬಳಿಕ ಯೋಗೀಶಗೌಡ ಅವರ ಪತ್ನಿ ಮಲ್ಲಪ್ಪ ಗೌಡರ ನಿವಾಸಕ್ಕೆ ತೆರಳಿದರು. ಆದರೆ ಮನೆಯಲ್ಲಿ ಯಾರೂ ಇರದ ಕಾರಣ ಮಾಹಿತಿ ಪಡೆಯದೇ ಅಲ್ಲಿಂದ ಮರಳಿದ್ದಾರೆ.
ನಂತರ ಇನ್ನೂ ಕೆಲವೆಡೆ ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆಂದು ತಿಳಿದು ಬಂದಿದೆ. ನಗರದ ಸಪ್ತಾಪುರದ ಉದಯ ಜಿಮ್ನಲ್ಲಿ 2016ರ ಜೂ.15ರಂದು ಯೋಗೀಶಗೌಡ ಗೌಡರ ಅವರನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಲಾಗಿತ್ತು. ರಾಜ್ಯ ಸರ್ಕಾರ ಪ್ರಕರಣವನ್ನು ಸೆ.6ರಂದು ಸಿಬಿಐಗೆ ವಹಿಸಿ ಆದೇಶ ಹೊರಡಿಸಿತ್ತು. ಇದಾದ ಬಳಿಕ ಕೊಲೆ ಪ್ರಕರಣ ಆರೋಪಿಗಳ ಮೇಲೆ ಸಿಬಿಐ ಅಧಿಕಾರಿಗಳು ಮೂರ್ನಾಲ್ಕು ದಿನಗಳ ಹಿಂದಷ್ಟೇ ಎಫ್ಐಆರ್ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ
ಐಎನ್ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ
ನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾ
Neha ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್: ಮೌನ ಮೆರವಣಿಗೆ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ