ಸಚಿವರ ಆಗಮನಕ್ಕೆ ಕಾದಿದೆ ಸಿಬಿಟಿ


Team Udayavani, May 31, 2018, 5:13 PM IST

31-may-20.jpg

ಹುಬ್ಬಳ್ಳಿ: ಎರಡೆರಡು ಬಾರಿ ಶಿಲಾನ್ಯಾಸ ಕಂಡು, ನಿರ್ಮಾಣದಲ್ಲಿ ಎದುರಾದ ಹಲವು ಅಡೆತಡೆಗಳ ಅಂಕ ಮುಗಿಸಿರುವ ಇಲ್ಲಿನ ನಗರ ಸಾರಿಗೆ ಬಸ್‌ ಟರ್ಮಿನಲ್‌ (ಸಿಬಿಟಿ) ಬಹುತೇಕ ಪೂರ್ಣಗೊಂಡು ಉದ್ಘಾಟನೆಗೆ ನೂತನ ಸಾರಿಗೆ ಸಚಿವರು ಬರುವುದೊಂದೇ ಬಾಕಿ ಇದೆ.

ಸಿಬಿಟಿಯಲ್ಲಿ ಆಧುನಿಕ ಸೌಕರ್ಯಗಳ ಬಿ+ಜಿ+5 ಮಾದರಿಯ ಬಹು ಮಹಡಿಯ ಬಹುಪಯೋಗಿ ಕಟ್ಟಡ ನಿರ್ಮಿಸಲಾಗಿದೆ. ನಿರ್ಮಾಣ ಕಾರ್ಯದಲ್ಲಿ ಆಮೆ ವೇಗಕ್ಕೆ ಸವಾಲು ಹಾಕಿದ್ದ ಕಟ್ಟಡ ಕೊನೆಗೂ ಪೂರ್ಣಗೊಂಡು ನಿಟ್ಟುಸಿರು ಬಿಟ್ಟಿದೆ. 2008ರಲ್ಲಿ ಶಿಲಾನ್ಯಾಸ ಮಾಡಲಾಗಿದ್ದ ಕಟ್ಟಡ 2018ರಲ್ಲಿ ಉದ್ಘಾಟನೆಗೆ ಸಜ್ಜುಗೊಂಡಿದೆ.

ಅಂದಾಜು 17 ಕೋಟಿ ರೂ. ವೆಚ್ಚದಲ್ಲಿ ಸುಮಾರು 8047 ಚದುರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಕಟ್ಟಡದ ಬೇಸ್‌ಮೆಂಟ್‌ನಲ್ಲಿ ಅಂದಾಜು 10 ಸಾವಿರ ಚದರ ಅಡಿಯಲ್ಲಿ ಸಾರ್ವಜನಿಕರ ವಾಹನಗಳ ನಿಲುಗಡೆಗಾಗಿ ಸ್ಥಳಾವಕಾಶ ಕಲ್ಪಿಸಲಾಗಿದೆ. ಎರಡು ಲಿಫ್ಟ್ ವ್ಯವಸ್ಥೆ ಮಾಡಲಾಗಿದೆ.

ನೆಲಮಹಡಿ ನಗರ ಸಾರಿಗೆ ಬಸ್‌ಗಳ ಸಂಚಾರಕ್ಕೆ ಮೀಸಲಾಗಿದ್ದು, ಇನ್ನುಳಿದ ಅಂತಸ್ತುಗಳು ಪಾಲಿಕೆ, ಎಚ್‌ಡಿಬಿಆರ್‌ಟಿಎಸ್‌ ಕಚೇರಿ, ವಾಣಿಜ್ಯ ಮಳಿಗೆ, ವಿವಿಧ ಇಲಾಖೆಯ ಕಚೇರಿಗಳಿಗೆ ಮೀಸಲಿಡಲು ಯೋಜಿಸಲಾಗಿದೆ. ಈಗಾಗಲೇ ಕಟ್ಟಡದ ಬಹುತೇಕ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಅಂತಿಮ ಕಾಮಗಾರಿ ನಡೆದಿದೆ.

ಈಗಾಗಲೇ 2 ಪ್ಲಾಟ್‌ ಫಾರಂನ್ನು ನಗರ ಸಾರಿಗೆ ಸಂಸ್ಥೆಗೆ ನೀಡಲಾಗಿದ್ದು, ಇನ್ನುಳಿದಂತೆ ಬಿಆರ್‌ಟಿಎಸ್‌ಗೆ ನೀಡಲಾಗುತ್ತಿದೆ. ಕಟ್ಟಡದ ಬಹುತೇಕ ಪ್ರದೇಶಗಳಲ್ಲಿ ಬಿಆರ್‌ಟಿಎಸ್‌ ಕಚೇರಿಗಳು ತಲೆ ಎತ್ತಲಿವೆ.

ಈಗಾಗಲೇ ಆರಂಭಗೊಂಡ ಸಿಬಿಟಿ ಬಸ್‌ ನಿಲ್ದಾಣದಲ್ಲಿ ಬಸ್‌ ಸಂಚಾರ ಆರಂಭಿಸಿದ್ದು, ಅದರಲ್ಲಿ 117 ಶೆಡೊÂಲ್‌ನಲ್ಲಿ 1214 ಟ್ರಿಪ್‌ ಬಸ್‌ ಸಂಚಾರ ಮಾಡುತ್ತಿವೆ. ಬಿಆರ್‌ಟಿಎಸ್‌ ನಂತರ ನಗರ ಸಾರಿಗೆ ಬಸ್‌ ಸಂಚಾರದಲ್ಲಿ ಗಣನೀಯವಾಗಿ ಇಳಿಕೆಯಾಗಲಿದ್ದು, ಸಾರಿಗೆ ಬಸ್‌ಗಳು ಬಿಆರ್‌ಟಿಎಸ್‌ ಮುಖ್ಯ ರಸ್ತೆಯನ್ನು ಬಿಟ್ಟು ಎಲ್ಲಾ ಒಳರಸ್ತೆಯಲ್ಲಿ ಸಂಚರಿಸಲಿವೆ.

ನಿಲ್ದಾಣದ ಸುತ್ತಲೂ ಬಿಆರ್‌ಟಿಎಸ್‌ ಕಾಮಗಾರಿ ಪೂರ್ಣಗೊಳ್ಳಬೇಕಿದ್ದು, ಇದು ಮುಗಿದ ಕೂಡಲೇ ಉದ್ಘಾಟನೆಗೆ ಮುಹೂರ್ತ ನಿಗದಿ ಮಾಡಲಾಗುತ್ತದೆಯಂತೆ.

ಇಲ್ಲಿನ ಸಿಟಿ ಬಸ್‌ ಟರ್ಮಿನಲ್‌ (ಸಿಬಿಟಿ) ನೂತನ ಕಟ್ಟಡ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದು ಫಿನಿಶಿಂಗ್‌ ವರ್ಕ್‌ ನಡೆಯುತ್ತಿದೆ. ಈ ಹಿಂದೆಯೇ ಬಸ್‌ ನಿಲ್ದಾಣ ಉದ್ಘಾಟನೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಕಾರಣಾಂತರಗಳಿಂದ ಅದು ಮುಂದಕ್ಕೆ ಹೋಗಿದ್ದು ಶೀಘ್ರದಲ್ಲೇ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು.
ಪಾಂಡುರಂಗ ನಾಯಕ,
ವಾಕರಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ

ಈಗಾಗಲೇ ನೂತನ ಸಿಟಿ ಬಸ್‌ ನಿಲ್ದಾಣದ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದು, ಶೀಘ್ರದಲ್ಲೇ ಉದ್ಘಾಟನೆಗೆ ಮುಹೂರ್ತ ನಿಗದಿ ಪಡಿಸಬೇಕಿದೆ. ನೂತನ ಸಚಿವ ಸಂಪುಟ ನಂತರ ಉದ್ಘಾಟನೆಗೆ ದಿನಾಂಕ ನಿಗದಿ ಪಡಿಸಲಾಗುವುದು. ಇನ್ನು ಬಿಆರ್‌ ಟಿಎಸ್‌ ಕಾಮಗಾರಿ ಬಾಕಿ ಇದ್ದು ಕೂಡಲೇ ಮುಕ್ತಾಯಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. 
ಪ್ರಸಾದ ಅಬ್ಬಯ್ಯ,
ಶಾಸಕ

ಬಸವರಾಜ ಹೂಗಾರ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.