ಸಸಿ ನೆಟ್ಟು ಎಐಡಿವೈಒ 53ನೇ ವರ್ಷಾಚರಣೆ
ಪರಿಸರ ನಾಶದಿಂದ ರೈತರ ಬದುಕು ಹೈರಾಣ
Team Udayavani, Jun 29, 2019, 11:42 AM IST
ಧಾರವಾಡ: ಗರಗದ ಎಸ್ಜಿಎಂ ಪದವಿ ಪೂರ್ವ ಕಾಲೇಜಿನಲ್ಲಿ ಸಸಿ ನೆಡುವ ಮೂಲಕ ಎಐಡಿವೈಒ ಸಂಘಟನೆಯ 53ನೇ ಸಂಸ್ಥಾಪನಾ ದಿನ ಆಚರಿಸಲಾಯಿತು.
ಧಾರವಾಡ: ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಸಂಘಟನೆಯ 53ನೇ ಸಂಸ್ಥಾಪನಾ ದಿನವನ್ನು ತಾಲೂಕಿನ ಗರಗದ ಎಸ್ಜಿಎಂ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸಸಿ ನೆಡುವ ಮೂಲಕ ಆಚರಿಸಲಾಯಿತು.
ಸಂಸ್ಥೆ ಅಧ್ಯಕ್ಷ ಮಡಿವಾಳಗೌಡರ ಪಾಟೀಲ್ ಮಾತನಾಡಿ, ಇಂದು ಪರಿಸರ ನಾಶದಿಂದ ರೈತರ ಬದುಕು ಹೈರಾಣಾಗಿದೆ. ಮಳೆಯಿಲ್ಲದೆ, ಬರಗಾಲದಿಂದ ಕಂಗೆಟ್ಟಿದ್ದಾರೆ. ಪರಿಸರ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಗಳ ಸುತ್ತಮುತ್ತ ಪರಿಸರದಲ್ಲಿ ಸಸಿ ನೆಡುವ ಪ್ರತಿಜ್ಞೆ ಮಾಡೋಣ ಎಂದರು.
ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಭವಾನಿಶಂಕರ್ ಎಸ್.ಗೌಡ ಮಾತನಾಡಿ, ಎಐಡಿವೈಒ ಸಂಘಟನೆ ಇಡೀ ದೇಶವ್ಯಾಪಿ ಯುವ ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಹೋರಾಟಗಳನ್ನು ಕಟ್ಟುತ್ತಿದೆ. 1966 ಜೂನ್ 26ರಂದು ಶಿವದಾಸ್ಘೋಷ್ರವರ ಮಾರ್ಗದರ್ಶನದಲ್ಲಿ ಪ್ರಾರಂಭವಾದ ಕ್ರಾಂತಿಕಾರಿ ಯುವಜನ ಸಂಘಟನೆ ಯುವಜನರಲ್ಲಿ ಉನ್ನತವಾದ ನೀತಿ ನೈತಿಕತೆಗಳನ್ನು ಬೆಳೆಸುತ್ತ ಬಂದಿದೆ ಎಂದರು.
ಪರಿಸರ ನಾಶವಾಗುತ್ತಿರುವ ಈ ಸಂದರ್ಭದಲ್ಲಿ ನಾವೆಲ್ಲರೂ ಪರಿಸರ ಕಾಪಾಡಲು ಜವಾಬ್ದಾರಿ ತೆಗೆದುಕೊಳ್ಳಬೇಕಿದೆ ಎಂದರು. ಕಾಲೇಜಿನ ಉಪನ್ಯಾಸಕರಾದ ಆರ್.ಎಲ್.ಲಮಾಣಿ, ಆನಂದ ತೋಟಗಿ, ಭಾಗ್ಯಶ್ರೀ ಕುಲಕರ್ಣಿ, ಜಯಶ್ರೀ, ಎಐಡಿವೈಒನ ಹನುಮೇಶ ಹುಡೇದ, ಮಂಜುನಾಥ್, ಅಭಿಷೇಕ್, ಶ್ರೀಧರ, ಚೇತನ್ ಸೇರಿದಂತೆ ಹಲವರು ಇದ್ದರು.
ಎಐಡಿವೈಒ ಜಿಲ್ಲಾಧ್ಯಕ್ಷ ರಮೇಶ ಹೊಸಮನಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ