ಧಾರವಾಡಕ್ಕೆ ಕೇಂದ್ರ ಸಂಗೀತ-ನಾಟಕ ಅಕಾಡೆಮಿ ಕಚೇರಿ


Team Udayavani, Jan 10, 2024, 2:15 PM IST

ಧಾರವಾಡಕ್ಕೆ ಕೇಂದ್ರ ಸಂಗೀತ-ನಾಟಕ ಅಕಾಡೆಮಿ ಕಚೇರಿ

ಉದಯವಾಣಿ ಸಮಾಚಾರ
ಧಾರವಾಡ: ಸಂಗೀತದ ತವರು ಧಾರವಾಡಕ್ಕೆ ಕೇಂದ್ರ ಸಂಗೀತ-ನಾಟಕ ಅಕಾಡೆಮಿ ಪ್ರಾದೇಶಿಕ ಕಚೇರಿ ಕೂಡ ತರಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭರವಸೆ ನೀಡಿದರು.

ಸೃಜನಾ ರಂಗಮಂದಿರದಲ್ಲಿ ಪಂ| ಕುಮಾರ ಗಂಧರ್ವರ ಜನ್ಮಶತಾಬ್ದಿ ಅಂಗವಾಗಿ ಜಿ.ಬಿ. ಜೋಶಿ ಮೆಮೋರಿಯಲ್‌ ಟ್ರಸ್ಟ್‌, ಕ್ಷಮತಾ ಸೇವಾ ಸಂಸ್ಥೆ ಹಾಗೂ ಕೇಂದ್ರ ಸಂಸ್ಕೃತಿ ಇಲಾಖೆ, ಎಲ್‌ ಐಸಿ ಸಹಯೋಗದಲ್ಲಿ ಮಂಗಳವಾರದಿಂದ ಆಯೋಜಿಸಿರುವ ಐದು ದಿನಗಳ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈಗಾಗಲೇ ಧಾರವಾಡಕ್ಕೆ ಬಂದಿರುವ ಲಲಿತಕಲಾ ಅಕಾಡೆಮಿಯಂತೆಯೇ ಕೇಂದ್ರ ಸಂಗೀತ-ನಾಟಕ ಅಕಾಡೆಮಿಯನ್ನೂ ಸ್ಥಾಪಿಸಲಾಗುವುದು. ಫೆಬ್ರವರಿ ಒಳಗಾಗಿ ಅಂತಾರಾಷ್ಟ್ರೀಯ ಮಟ್ಟದ ಕಲಾವಿದರನ್ನು ಆಹ್ವಾನಿಸಿ ಅವಳಿನಗರದಲ್ಲಿ ತಲಾ ಒಂದೊಂದು ಕಾರ್ಯಕ್ರಮ ಆಯೋಜಿಸಿದರೆ ಅದಕ್ಕೆ ಸಂಪೂರ್ಣ ವ್ಯವಸ್ಥೆ ಮಾಡಿಕೊಡುವುದಾಗಿ ತಿಳಿಸಿದರು.

ಸಂಗೀತವೆಂದರೆ ಹಾಡಿ ಕುಣಿಯುವುದಲ್ಲ. ಹಾಗಾದರೆ ಅದು ವಿದೇಶಿ ಸಂಗೀತ. ನಮ್ಮ ಸಂಗೀತ ಕೇಳಿದರೆ ಆರೋಗ್ಯ ಸುಧಾರಿಸಲಿದೆ. ತಲೆನೋವು ಇರುವ ರೋಗಿಗಳಿಗೆ ಹಿಂದೂಸ್ತಾನಿ ಸಂಗೀತ ಕೇಳಲು ವೈದ್ಯರು ಸೂಚಿಸುತ್ತಿದ್ದು, ಅಂತಹ ಶಕ್ತಿ ನಮ್ಮ ಸಂಗೀತಕ್ಕಿದೆ. ನಮ್ಮತನ ಹಾಗೂ ಭಾರತೀಯತೆಯನ್ನು ಕೀಳರಿಮೆಯಿಂದ ನೋಡುವ ಮನಸ್ಥಿತಿ ದೂರ ಮಾಡಿದ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಆರ್ಥಿಕವಾಗಿ ಸಬಲತೆ ಕಡೆಗೆ ಒಯ್ಯುತ್ತಿದ್ದಾರೆ ಎಂದರು.

ವಿಶ್ವಮಟ್ಟದಲ್ಲಿ ಭಾರತ ತಾಕತ್ವಾನ್‌ ದೇಶ ಆಗುತ್ತಿರುವುದರಿಂದ ಇಲ್ಲಿನ ಕುಟುಂಬ ಪದ್ಧತಿ, ಆಹಾರ ಪದ್ಧತಿ, ಔಷಧಿ ಪದ್ಧತಿ, ಯೋಗ ಪದ್ಧತಿ ಉಳಿದ ದೇಶದವರಿಗೆ ಮಾದರಿ ಆಗುತ್ತಿದೆ. ಇದು  ವ್ಯವಸ್ಥಿತ ಜೀವನಕ್ಕೆ ಪೂರಕ ಕೂಡ ಆಗಿದೆ. ಹೀಗಾಗಿ ನಾವು ನಮ್ಮತನದ ಬಗ್ಗೆ ಅಪಾರ ಗೌರವ, ನಂಬಿಕೆ ಇಟ್ಟುಕೊಳ್ಳಬೇಕು ಎಂದು ಹೇಳಿದರು.

ವಿಧಾನಸಭೆ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಮಾತನಾಡಿ, ಧಾರವಾಡ ಸಂಸ್ಕೃತಿ ಇನ್ನೂ ಬಲವಾಗಿ ಬೆಳೆಯಬೇಕೆಂದರೆ ಬೇರೆ ಬೇರೆ ಕಲೆಗಳು ಇಲ್ಲಿ ನೆಲೆಯೂರಬೇಕು. ಅದಕ್ಕಾಗಿ ಲಲಿತಕಲಾ ಅಕಾಡೆಮಿಯಂತೆಯೇ ಸಂಗೀತ-ನಾಟಕ ಅಕಾಡೆಮಿಯನ್ನೂ ತರಬೇಕು ಎಂದು ಮನವಿ ಮಾಡಿದರು.

ಮೇಯರ್‌ ವೀಣಾ ಬರದ್ವಾಡ, ಎಲ್‌ಐಸಿಯ ದೊರೆಸ್ವಾಮಿ ನಾಯ್ಕ, ರಮಾಕಾಂತ ಜೋಶಿ, ಆನಂದ ಜುಂಜುರವಾಡ ಇನ್ನಿತರರಿದ್ದರು. ಗೋವಿಂದ ಜೋಶಿ ಸ್ವಾಗತಿಸಿದರು. ರವಿ ಕುಲಕರ್ಣಿ ನಿರೂಪಿಸಿದರು. ನಂತರ ಪುಣೆಯ ಪಂ| ವಿಜಯ ಕೋಪರಕರ ಅವರ ಗಾಯನ ನಡೆಯಿತು. ಡಾ|ಎನ್‌. ರಾಜಮ್‌ ಹಾಗೂ ಅವರ ಮೊಮ್ಮಗಳು ನಂದಿನಿ ಶಂಕರ ಅವರಿಂದ ವಯೋಲಿನ್‌ ಜುಗಲಬಂಧಿ ಜರುಗಿತು.

ಟಾಪ್ ನ್ಯೂಸ್

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Modi insults Tamils ​​for votes: CM Stalin sparks

Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್‌ ಕಿಡಿ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

This time 2004 result will repeat: Jairam Ramesh

Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್‌

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.