ಕೇಂದ್ರೀಯ ವಿದ್ಯಾಲಯ ಕಟ್ಟಡ ತೆರವಿಗೆ ಕೊಕ್
ಪಾಲಿಕೆಗೆ ವೆಚ್ಚ ಪಾವತಿಯಾಗದ ಹಿನ್ನೆಲೆ | ಕಾರ್ಯಾಚರಣೆ ಮೊಟಕು | ಸ್ಥಳದಲ್ಲೇ ಉಳಿದ ಅವಶೇಷಗಳು
Team Udayavani, Oct 13, 2021, 9:45 PM IST
ವರದಿ: ಶಿವಶಂಕರ ಕಂಠಿ
ಹುಬ್ಬಳ್ಳಿ: ನೃಪತುಂಗ ಬೆಟ್ಟದ ಬಳಿ ಕಾಣಿಸಿಕೊಂಡು ಜನರಲ್ಲಿ ಭೀತಿ ಸೃಷ್ಟಿಸಿದ್ದ ಚಿರತೆ ಸೆರೆಗೆ ಜಿಲ್ಲಾಡಳಿತ ಕಾರ್ಯಾಚರಣೆ ಕೈಗೊಂಡ ಸಂದರ್ಭದಲ್ಲಿ ಚಿರತೆಯ ವಾಸಸ್ಥಾನವಾಗಿದ್ದ ರಾಜನಗರದಲ್ಲಿರುವ ಕೇಂದ್ರೀಯ ವಿದ್ಯಾಲಯ ನಂ.1ರ ಹಳೆಯ ಕಟ್ಟಡ ತೆರವಿಗೆ ಮುಂದಾಗಿತ್ತು. ಆದರೆ ಈ ಕಾರ್ಯ ಪೂರ್ಣಗೊಳ್ಳದೆ ಅವಶೇಷಗಳು ಹಾಗೇ ಉಳಿದಿದ್ದು, ಇಲ್ಲಿಯವರೆಗೆ ತೆರವು ಮಾಡಲು ತಗುಲಿದ ಖರ್ಚು ವಿದ್ಯಾಲಯದಿಂದ ಪಾವತಿಯಾಗದ ಹಿನ್ನೆಲೆಯಲ್ಲಿ ಅರ್ಧಕ್ಕೆ ಸ್ಥಗಿತಗೊಂಡಿದೆ ಎನ್ನಲಾಗುತ್ತಿದೆ.
ರಾಜನಗರದ ಕೇಂದ್ರೀಯ ವಿದ್ಯಾಲಯವು ಸುಮಾರು 17 ಎಕರೆ ಪ್ರದೇಶದಲ್ಲಿದ್ದು, ಹೊಸ ಕಟ್ಟಡ ನಿರ್ಮಾಣದ ನಂತರ ಹಳೇ ಕಟ್ಟಡ ಹಾಗೇ ಉಳಿದುಕೊಂಡಿತ್ತು. ಆದರೆ ಈ ಕಟ್ಟಡವನ್ನು ಚಿರತೆ ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡಿದ್ದರಿಂದ ಜಿಲ್ಲಾಡಳಿತವು ಪಾಲಿಕೆ ಮೂಲಕ ತೆರವುಗೊಳಿಸಲು ಮುಂದಾಗಿತ್ತು.
ಚಿರತೆ ಈ ಸ್ಥಳದಲ್ಲಿರುವ ಕುರಿತು ಯಾವುದೇ ಕುರುಹುಗಳು ಸಿಗದೆ, ಧಾರವಾಡದ ಬಳಿ ಕವಲಗೇರಿಯಲ್ಲಿ ಕಾಣಿಸಿಕೊಂಡಿರುವುದು ದೃಢಪಡುತ್ತಿದ್ದಂತೆ ಇಲ್ಲಿನ ಕಾರ್ಯಾಚರಣೆ ಅಲ್ಲಿಗೆ ಸ್ಥಳಾಂತರಗೊಂಡಿತ್ತು. ಎರಡೂ ಕಡೆ ದೊರೆತಿದ್ದ ಚಿರತೆಯ ಲದ್ದಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದರ ನಡುವೆ ಕವಲಗೇರಿಯಲ್ಲಿ ಚಿರತೆ ಸೆರೆಹಿಡಿಯಲಾಗಿತ್ತು. ಆದರೆ ಎರಡು ಕಡೆ ಸಿಕ್ಕ ಗುರುತು ಹಾಗೂ ಲದ್ದಿ ಒಂದೇ ಚಿರತೆಯದ್ದು ಎನ್ನುತ್ತಿದ್ದಂತೆ ವಿದ್ಯಾಲಯದಲ್ಲಿ ನಡೆಯುತ್ತಿದ್ದ ಹಳೇ ಕಟ್ಟಡ ತೆರವು ಕಾರ್ಯಾಚರಣೆ ಮೊಟುಕುಗೊಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
MUST WATCH
ಹೊಸ ಸೇರ್ಪಡೆ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್