ಕೃಷಿ ಪರಿಕರ ಮಾರಾಟಗಾರರಿಗೆ ಪ್ರಮಾಣಪತ್ರ

ಕರ್ನಾಟಕದಲ್ಲಿ 6,500 ಜನರಿಗೆ ಡಿಪ್ಲೊಮಾ ತರಬೇತಿ ಪೂರ್ಣ; ದೇಶಕ್ಕೆ ಮೊದಲ ಸ್ಥಾನದ ಹೆಗ್ಗಳಿಕೆ

Team Udayavani, May 10, 2019, 11:59 AM IST

hubali-tdy-4..

ಧಾರವಾಡ: ಡಿಪ್ಲೊಮಾ ತರಬೇತಿ ಮುಗಿದ ಕೃಷಿ ಪರಿಕರ ಮಾರಾಟಗಾರರಿಗೆ ಪ್ರಮಾಣಪತ್ರ ವಿತರಣಾ ಸಮಾರಂಭವನ್ನು ಡಾ| ವಿ.ಎಸ್‌. ಉಷಾರಾಣಿ ಉದ್ಘಾಟಿಸಿದರು.

ಧಾರವಾಡ: ಇಲ್ಲಿಯ ಕೃಷಿ ವಿವಿ ಆವರಣದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣಾ ಸಂಸ್ಥೆ, ಕೃಷಿ ಇಲಾಖೆ ಸಹಯೋಗದಲ್ಲಿ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೊಮಾ ತರಬೇತಿ ಮುಗಿದ ಕೃಷಿ ಪರಿಕರ ಮಾರಾಟಗಾರರಿಗೆ ಪ್ರಮಾಣಪತ್ರ ವಿತರಣಾ ಸಮಾರಂಭ ಗುರುವಾರ ಜರುಗಿತು.

ಕಾರ್ಯಕ್ರಮ ಉದ್ಘಾಟಿಸಿದ ಡಾ| ವಿ.ಎಸ್‌. ಉಷಾರಾಣಿ ಮಾತನಾಡಿ, ದೇಶದಲ್ಲಿ ಇದುವರೆಗೂ 35,000 ಕೃಷಿ ಪರಿಕರ ಮಾರಾಟಗಾರರು ಡಿಪ್ಲೊಮಾ ಪ್ರಮಾಣಪತ್ರ ಪಡೆದಿದ್ದು, ಅದರಲ್ಲಿ ಕರ್ನಾಟಕ ರಾಜ್ಯದಿಂದ 6,500 ಜನ ಡಿಪ್ಲೊಮಾ ತರಬೇತಿ ಮುಗಿಸಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿದೆ. ಕೃಷಿ ಪರಿಕರ ಮಾರಾಟಗಾರರು ತರಬೇತಿಯಲ್ಲಿ ಪಡೆದ ಜ್ಞಾನ-ಅನುಭವದ ಆಧಾರದ ಮೇಲೆ ಸ್ಥಾನಿಕವಾಗಿ ರೈತರಿಗೆ ಉತ್ಪಾದನಾ ವೆಚ್ಚ ಕಡಿಮೆ ಮಾಡುವ ಹಾಗೂ ಉತ್ಪಾದಕತೆ ಹೆಚ್ಚಿಸುವ ದಿಸೆಯಲ್ಲಿ ಮಾರ್ಗದರ್ಶನ ಮಾಡಬೇಕು. ಹೊಸ ಸಮಸ್ಯೆಗಳಿಗೆ ಪರಿಹಾರ ಬೇಕಾದಲ್ಲಿ ತರಬೇತಿ ನೀಡಿದ ವಿಜ್ಞಾನಿಗಳೊಡನೆ ಸಲಹೆ ಪಡೆದು ರೈತರಿಗೆ ತಿಳಿಸಬೇಕು ಎಂದರು.

ಇಂಪಾಲ್ದ ಕೇಂದ್ರೀಯ ವಿವಿ ಕುಲಪತಿ ಡಾ| ಎಸ್‌. ಅಯ್ಯಪ್ಪನ್‌ ಮಾತನಾಡಿ, ಕೃಷಿ ಅಭಿವೃದ್ಧಿ ಕ್ರಿಯೆಯ ಸರಪಳಿಯಲ್ಲಿ ಕೃಷಿ ಪರಿಕರ ಮಾರಾಟಗಾರರು ಮುಖ್ಯ ಕೊಂಡಿಯಾಗಿ ಕಾರ್ಯ ನಿರ್ವಹಿಸಬೇಕು. ಕೃಷಿ ಪರಿಕರಗಳ ಉಪಯೋಗಕ್ಕೆ ನಿಖರವಾದ ಸಲಹೆ-ಸೂಚನೆ ನೀಡಬೇಕು. ಪದವಿ ಪಡೆದ ಕೃಷಿ ಪರಿಕರ ಮಾರಾಟಗಾರರಿಗೆ ಹವಾಮಾನ ಬದಲಾವಣೆ, ಒಣ ಬೇಸಾಯ ಮುಂತಾದ ಆದ್ಯತಾ ವಿಷಯಗಳಲ್ಲಿ ವಿಶೇಷ ತರಬೇತಿಗಳನ್ನು ವಿಶ್ವವಿದ್ಯಾಲಯಗಳು ಹಾಗೂ ಇತರ ಸಂಸ್ಥೆಗಳು ಏರ್ಪಡಿಸುವ ಅವಶ್ಯಕತೆ ಎಂದು ಹೇಳಿದರು.

ಕೃವಿವಿ ಕುಲಪತಿ ಡಾ|ಎಮ್‌.ಬಿ. ಚೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎಂಟು ಜಿಲ್ಲೆಗಳಿಂದ 320 ಕೃಷಿ ಪರಿಕರ ಮಾರಾಟಗಾರರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಡಾ|ಎಂ.ಎನ್‌. ಶೀಲವಂತರ, ಡಾ|ಎಸ್‌.ಬಿ. ದಂಡಿನ, ಡಾ|ಎಂ.ಜಿ. ಚಂದ್ರಕಾಂತ, ಡಾ| ಎ.ಬಿ. ಪಾಟೀಲ ಇದ್ದರು.

ದೇಸಿ ಪುಸ್ತಕ ಹಾಗೂ ದೇಸಿ ಯಶೋಗಾಥೆ ಕುರಿತ ಸಿಡಿ ಬಿಡುಗಡೆಗೊಳಿಸಲಾಯಿತು. ಡಾ| ಎನ್‌.ಎ. ಎಲೇದಹಳ್ಳಿ ಸ್ವಾಗತಿಸಿದರು. ಡಾ| ಸುರೇಖಾ ಸಂಕನಗೌಡರ ಹಾಗೂ ಡಾ| ಎಸ್‌. ದೇವೇಂದ್ರಪ್ಪ ನಿರೂಪಿಸಿದರು. ಡಾ|ಎಸ್‌.ಪಿ. ಹಲಗಲಿಮಠ ವಂದಿಸಿದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.