ವಿನಯ್ ಡೈರಿಯಲ್ಲಿ ‘ಯಜಮಾನ’ನ ಭರ್ಜರಿ ಬಂಡಿ ಸವಾರಿ


Team Udayavani, Aug 14, 2020, 9:06 PM IST

Darshan-01

ಧಾರವಾಡ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಹೇಳಿ ಕೇಳಿ ಪ್ರಾಣಿ ಪ್ರೇಮಿ.

ಅವರ ಸ್ವಂತ ಫಾರ್ಮ್ ನಲ್ಲಿ ವಿವಿಧ ತಳಿಯ ದನಗಳು, ಎತ್ತುಗಳು, ಕುದುರೆಗಳು ಸೇರಿದಂತೆ ವಿವಿಧ ರೀತಿಯ ಪ್ರಾಣಿ ಪಕ್ಷಿಗಳನ್ನು ಸಾಕುತ್ತಿದ್ದಾರೆ.

ಇಷ್ಟು ಮಾತ್ರವಲ್ಲದೇ ದರ್ಶನ್ ಅವರು ವನ್ಯ ಜೀವಿಗಳ ಕುರಿತಾಗಿಯೂ ಅಪಾರವಾದ ಕಾಳಜಿಯನ್ನು ಹೊಂದಿರುವ ಒಬ್ಬ ನಟನಾಗಿ ತಮ್ಮ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ.

ಇಂತಹ ಪ್ರಾಣಿ ಪ್ರಿಯ ಸ್ವಭಾವದ ದರ್ಶನ್ ಅವರು ಧಾರವಾಡ ನಗರದ ಹೊರವಲಯದಲ್ಲಿ ಇರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ‘ವಿನಯ್  ಡೈರಿ’ಗೆ ಭೇಟಿ ನೀಡಿ ಕೆಲ ಸಮಯ ಕಳೆದರು.

ಕೋವಿಡ್ 19 ಸೋಂಕಿನ ಹಿನ್ನಲೆಯಲ್ಲಿ ಬೆಂಗಳೂರಿನಿಂದ ದೂರ ಉಳಿದು ಉತ್ತರ ಕರ್ನಾಟಕದ ಪ್ರೇಕ್ಷಣೀಯ ಸ್ಥಳ ಪ್ರವಾಸ ಕೈಗೊಂಡಿರುವ ದರ್ಶನ್ ಅವರು ಶುಕ್ರವಾರದಂದು ವಿನಯ್ ಡೈರಿಯಲ್ಲಿ ವಾಸ್ತವ್ಯ ಹೂಡಿದ್ದರು.

ಬೆಳಗ್ಗೆಯಿಂದಲೇ ಡೈರಿಯಲ್ಲಿನ ಹೈನೋದ್ಯಮ, ಹೊಸ ತಳಿಯ ಆಕಳು ಮತ್ತು ಜಾನುವಾರುಗಳನ್ನು ವೀಕ್ಷಣೆ ಮಾಡಿದ ದರ್ಶನ್ ಬಳಿಕ ಆಂಧ್ರದ ಭರ್ಜರಿ ತಳಿ ಹೋರಿಗಳನ್ನು ಹೂಡಿದ ಖಾಲಿಗಾಡಾದಲ್ಲಿ ಹತ್ತಿ ಡೈರಿಯ ಸುತ್ತ ಸುತ್ತಾಡಿ ಸಂಭ್ರಮಿಸಿದರು. ಈ ವೇಳೆ ಅವರ ಅಭಿಮಾನಿಗಳು ಕೂಡ ಅವರಿಗೆ ಸಾಥ್ ಕೊಟ್ಟಿದ್ದು ವಿಶೇಷವಾಗಿತ್ತು.


ಮಾಜಿ ಸಚಿವ ವಿನಯ್‌ರೊಂದಿಗೆ ಹಲವಾರು ವರ್ಷಗಳ ಸ್ನೇಹ ಹೊಂದಿರುವ ದರ್ಶನ, ಉತ್ತರ ಕರ್ನಾಟಕದ ಭಾಗಕ್ಕೆ ಬಂದಾಗಲೆಲ್ಲ ವಿನಯ್ ಡೈರಿಗೆ ಸಾಮಾನ್ಯವಾಗಿ ಭೇಟಿ ನೀಡುತ್ತಿರುತ್ತಾರೆ.

ಇತ್ತ ನಟ ದರ್ಶನ್ ಅವರು ಡೈರಿಯಲ್ಲಿದ್ದಾರೆ ಎನ್ನುವ ಸುದ್ದಿ ಸುತ್ತಲಿನ ಹಳ್ಳಿಗಳಿಗೆ ಹರಡುತ್ತಿದ್ದಂತೆಯೇ ಅವರ ಸಾವಿರಾರು ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ನೋಡಲು ಡೈರಿಯತ್ತ ಆಗಮಿಸಿದರು.

ಆದರೆ ಕೋವಿಡ್ 19 ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ದರ್ಶನ್ ಅವರ ಭೇಟಿ ಅಭಿಮಾನಿಗಳಿಗೆ ಸಾಧ್ಯವಾಗದೇ ನಿರಾಶೆ ಉಂಟಾಯಿತು. ಪ್ರಾರಂಭದಲ್ಲಿ ದಚ್ಚು ತಮ್ಮ ಕೆಲ ಅಭಿಮಾನಿಗಳೊಂದಿಗೆ ಫೋಟೋ ತೆಗೆಸಿಕೊಂಡರು. ಆದರೆ ಬಳಿಕ ಅಭಿಮಾನಿಗಳು ಹೆಚ್ಚಿನ ಪ್ರಮಾಣದಲ್ಲಿ ಬರತೊಡಗಿದ್ದರಿಂದ ಅವರನ್ನೆಲ್ಲಾ ಫಾರ್ಮ್ ಹೊರಗಡೆಯೇ ತಡೆಯಲಾಯಿತು.

ವಿನಯ್ ಡೈರಿಯಲ್ಲಿ ಮೇಕೆ ಖರೀದಿಸಿದ ದರ್ಶನ್
ಪ್ರಾಣಿ ಪ್ರಿಯರಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ ಅವರು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಒಡೆತನದ ಧಾರವಾಡ ಹೊರವಲಯದಲ್ಲಿನ ವಿನಯ್ ಡೈರಿ ಯಿಂದ ಶುಕ್ರವಾರ ಮೇಕೆಯೊಂದನ್ನು ಖರೀದಿಸಿದ್ದಾರೆ.

ದೇಶದಲ್ಲೇ ಅತೀ ದೊಡ್ಡ ಡೈರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಡೈರಿಗೆ ಶುಕ್ರವಾರ ಭೇಟಿಕೊಟ್ಟ ದರ್ಶನ್, ಇಲ್ಲಿ ವೈಜ್ಞಾನಿಕ ವಿಧಾನದಿಂದ ಸಾಕಾಣಿಕೆ ಮಾಡಲಾಗಿರುವ ಜಮುನಾ ಪುರಿ ತಳಿಯ 25ಕ್ಕೂ ಹೆಚ್ಚು ಮೇಕೆಗಳನ್ನು ಖರೀದಿಸಿ ತಮ್ಮ ಮೈಸೂರು ಫಾರ್ಮ್ ಗೆ ಕೊಂಡೊಯ್ದರು.

ಈ ವೇಳೆ ಮಾತನಾಡಿದ ದರ್ಶನ್, ನಾನು ಮೇಕೆ ಖರೀದಿಸಲು ಇಲ್ಲಿಗೆ ಬಂದಿದ್ದೇನೆ. ವಿನಯ್ ನನ್ನ ಆತ್ಮೀಯರು, ನಮ್ಮದು ಅವರದು ಹಳೆಯ ಗೆಳೆತನ, ಅವರ ಡೈರಿಯಲ್ಲಿ ಎತ್ತಿನಗಾಡಿ, ಕುದರೆ ಸವಾರಿ ಮಾಡುವುದು ನನಗೆ ಬಹಳ ಇಷ್ಟ ಎಂದರು.

ನಂತರ ಮಾತಾನಾಡಿದ ಮಾಜಿ ಸಚಿವ ವಿನಯ್ ಕುಲಕರ್ಣಿ, ದರ್ಶನ ಪ್ರಾಣಿ ಪ್ರಿಯರಾಗಿದ್ದು ನಮ್ಮ ಡೈರಿಯಿಂದ ಜಮುನಾ ಪುರಿ ತಳಿಯ ಮೇಕೆಗಳನ್ನು ಖರೀದಿಸಿದ್ದಾರೆ. ಅವರು ಜೀವನದಲ್ಲಿ ಕಷ್ಟಪಟ್ಟು ಮೇಲೆ ಬಂದಿದ್ದಾರೆ. ಅವರು ನಟರಾಗೊ ಮುಂಚೆ ಹೈನುಗಾರಿಕೆ ಮಾಡಿದ್ದರು. ಅವರ ತಂದೆ ಕಾಲದಿಂದಲೂ ನಾವು ಆತ್ಮೀಯರು ಎಂದು ಹೇಳಿದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.