ಕಾಂಗ್ರೆಸ್ ಬಗ್ಗೆ ಮಾತಾಡುವ ನೈತಿಕತೆ ಬಿಜೆಪಿಗಿಲ್ಲ
Team Udayavani, May 3, 2018, 7:00 AM IST
ಹುಬ್ಬಳ್ಳಿ: “ಟೂ+ ಒನ್ ಹಾಗೂ ಒನ್+ ಒನ್ ಎಂದು ಒಂದೇ ಕುಟುಂಬದವರಿಗೆ ಟಿಕೆಟ್ ನೀಡುವ ಹಾಗೂ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಕುರಿತು ಬಿಜೆಪಿ ಮುಖಂಡರು ಕಾಂಗ್ರೆಸ್ ಬಗ್ಗೆ ಮಾತನಾಡುವ ಬದಲು ತಮ್ಮ ಪಕ್ಷದಲ್ಲಿನ ಪರಿಸ್ಥಿತಿ ಅರಿತು ಮಾತನಾಡುವುದು ಸೂಕ್ತ ‘ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರೇ ಸೋಲಿನ ಭೀತಿಯಿಂದ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಗೋವಿಂದ ಕಾರಜೋಳ ಮಗ, ಶಶಿಕಲಾ ಜೊಲ್ಲೆ ಅವರ ಪತಿ, ಉಮೇಶ ಕತ್ತಿ ಸಹೋದರನಿಗೆ ಬಿಜೆಪಿಯಿಂದ ಟಿಕೆಟ್ ನೀಡಲಾಗಿದೆ.
ಯಡಿಯೂರಪ್ಪ ಮಗ ಬಿ.ವೈ.ರಾಘವೇಂದ್ರ ಇದಕ್ಕೆ ಹೊರತಾಗಿಲ್ಲ. ತಮ್ಮ ಪಕ್ಷದಲ್ಲೇ ಟೂ ಪ್ಲಸ್ ಒನ್ ಹಾಗೂ ಒನ್ ಪ್ಲಸ್ ಒನ್ ಇರುವಾಗ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗಿಲ್ಲ’ ಎಂದರು.
“ನಾನು ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದು ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಅನುಕೂಲವಾಗಲಿ ಎನ್ನುವುದಕ್ಕೆ ವಿನಃ ಚಾಮುಂಡೇಶ್ವರಿಯಲ್ಲಿ ಸೋಲಿನ ಭೀತಿಯಿಂದಲ್ಲ. ಚಾಮುಂಡೇಶ್ವರಿಯಲ್ಲಿ ಎಷ್ಟೇ ಒಳ ಒಪ್ಪಂದ ಮಾಡಿಕೊಂಡರೂ ನನ್ನ ಕ್ಷೇತ್ರದ ಜನರು ಕೈ ಬಿಡಲ್ಲ’ ಎಂದರು.
ಬಿಜೆಪಿಯವರೇ ಟಿಕೆಟ್ ತಪ್ಪಿಸಿದರು: ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಒಂದು ತಿಂಗಳಿಂದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಆದರೆ, ಟಿಕೆಟ್ ತಪ್ಪಲಿಕ್ಕೆ ಬಿಜೆಪಿಯ ಸಂತೋಷ್, ಅನಂತಕುಮಾರ್, ಜಗದೀಶ ಶೆಟ್ಟರ್ ಹಾಗೂ ಈಶ್ವರಪ್ಪನವರೇಕಾರಣ. ಇಷ್ಟೆಲ್ಲಾ ನೋಡಿದ ಮೇಲೂ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿದೆ ಎನಿಸುತ್ತಿಲ್ಲ.
ಎಲ್ಲರೂ ಒಗ್ಗಟ್ಟಿನಿಂದಿದ್ದರೆ ವಿಜಯೇಂದ್ರನಿಗೆ ಟಿಕೆಟ್ ತಪ್ಪುತ್ತಿರಲಿಲ್ಲ. ಶೋಭಾ ಕರಂದ್ಲಾಜೆಗೆ ಟಿಕೆಟ್ ಕೊಡಿಸಲು ಯಡಿಯೂರಪ್ಪನವರಿಂದ ಸಾಧ್ಯವಾಗಲಿಲ್ಲ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!