ಚಂದ್ರಶೇಖರ್ ಗುರೂಜಿ ಹತ್ಯೆ: ‘ನಮಸ್ಕಾರ ಗುರೂಜಿ’ ಎಂದು ಕಾಲಿಗೆರಗಿ ಚುಚ್ಚಿ ಚುಚ್ಚಿ ಕೊಂದರು!
Team Udayavani, Jul 5, 2022, 2:34 PM IST
ಹುಬ್ಬಳ್ಳಿ: ಹಾಡುಹಗಲೇ ಜನರ ನಡುವೆ ನಡೆದ ಖ್ಯಾತ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಹತ್ಯೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲೊಂದರ ರಿಸೆಪ್ಶನ್ ನಲ್ಲಿ ಗುರೂಜಿ ಹತ್ಯೆ ಮಾಡಲಾಗಿದೆ.
ಹತ್ಯೆ ನಡೆಸುವ ಮತ್ತು ಆರೋಪಿಗಳು ಪರಾರಿಯಾಗುವ ದೃಶ್ಯಗಳು ಹೋಟೆಲ್ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಆಗಿದ್ದೇನು?: ದುಷ್ಕರ್ಮಿಗಳಿಬ್ಬರು ಹೋಟೆಲ್ ನ ರಿಸೆಪ್ಶನ್ ನಲ್ಲಿ ಕುಳಿತಿದ್ದರು. ಅಲ್ಲಿಗೆ ಭೇಟಿಗೆ ಬಂದ ಚಂದ್ರಶೇಖರ್ ಗುರೂಜಿ ಕುರ್ಚಿಯಲ್ಲಿ ಕುಳಿತರು. ಗುರೂಜಿ ಬಳಿ ಬಂದ ದುಷ್ಕರ್ಮಿಗಳಲ್ಲಿ ಓರ್ವ ಗುರೂಜಿ ಕಾಲಿಗೆರಗಿ ನಮಸ್ಕಾರ ಮಾಡಿದ್ದಾನೆ. ಗುರೂಜಿ ಆತನ ಮೈದಡವುತ್ತಿದ್ದಂತೆ ಬಳಿಯೇ ನಿಂತಿದ್ದ ಮತ್ತೋರ್ವ ಚಾಕು ತೆಗೆದು ಚುಚ್ಚಲಾರಂಭಿಸಿದ್ದಾನೆ.
ಇದನ್ನೂ ಓದಿ:ಅಸ್ವಸ್ಥಗೊಂಡಿದ್ದ ಮಗು ಸಾವು: ವೈದ್ಯರ ನಿರ್ಲಕ್ಷ್ಯ ಖಂಡಿಸಿ ಪೋಷಕರ ಆಕ್ರೋಶ
ಇಬ್ಬರು ಚಾಕುವಿನಿಂದ ಮನಬಂದಂತೆ ಮುಖ, ಎದೆಗೆ ಸುಮಾರು 50ಕ್ಕೂ ಹೆಚ್ಚು ಬಾರಿ ಇರಿದು ಕೊಲೆಗೈದಿದ್ದಾರೆ. ಸ್ವಾಮೀಜಿ ಇರಿಯ ಬೇಡವೆಂದು ಕೈಮುಗಿದು ಕೇಳಿಕೊಂಡರು ಕರುಣೆ ತೋರದೆ ಮನಸ್ಸೋ ಇಚ್ಛೆ ಚಾಕುವಿನಿಂದ ಇರಿದಿದ್ದು, ಪಕ್ಕದಲ್ಲಿದ್ದ ಮಹಿಳೆಯರು ಸೇರಿದಂತೆ ಇತರರು ಇದನ್ನು ನೋಡಿ ಕಂಗಾಲಾಗಿ ಓಡಿ ಹೋಗಿದ್ದಾರೆ. ತಡೆಯಲು ಬಂದ ಒಂದಿಬ್ಬಿಗೆ ದುಷ್ಕರ್ಮಿಗಳು ಚಾಕು ತೋರಿಸಿ ಹೆದರಿಸಿದ್ದಾರೆ.
ಸ್ವಾಮೀಜಿ ನೆಲಕ್ಕೆ ಉರುಳಿ, ಅತೀಯಾದ ರಕ್ತಸ್ರಾವವಾಗಿ ಅಸ್ವಸ್ಥರಾಗಿ ಬಿದ್ದಾಗ ದುಷ್ಕರ್ಮಿಗಳು ಅಲ್ಲಿಂದ ನಡೆದುಕೊಂಡು ಆರಾಮವಾಗಿ ತೆರಳಿದ್ದಾರೆ. ಈ ದೃಶ್ಯಗಳೆಲ್ಲ ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಚಂದ್ರಶೇಖರ ಗುರೂಜಿ ಪ್ರತಿ ಮಂಗಳವಾರ ಹೋಟೆಲ್ ಗೆ ಭೇಟಿ ಕೊಟ್ಟು ಭಕ್ತರಿಗೆ ವಾಸ್ತು ಕುರಿತು ಹೇಳಿಕೆ ನೀಡುತ್ತಿದ್ದರು ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ