ಹುಬ್ಬಳ್ಳಿ: ಚಿರತೆ ಕಣ್ಣಾಮುಚ್ಚಾಲೆಗೆ ಹೆಚ್ಚಾಯ್ತು ಚಿಂತೆ

ಶಿರಡಿನಗರ ಹನುಮಂತ ದೇವಸ್ಥಾನ ಬಳಿ ಪ್ರತ್ಯಕ್ಷ | ಭಯಭೀತರಾದ ಜನತೆ | ಮನೆಯಿಂದ ಹೊರಬರದಂತೆ ಎಚ್ಚರಿಕೆ

Team Udayavani, Sep 21, 2021, 1:32 PM IST

dfdsf

ಹುಬ್ಬಳ್ಳಿ:ರಾಜನಗರದ ಕೇಂದ್ರೀಯ ವಿದ್ಯಾಲಯ ಆವರಣದಲ್ಲಿ ಎರಡು ದಿನಗಳ ಹಿಂದೆ ಪ್ರತ್ಯಕ್ಷವಾಗಿದ್ದ ಚಿರತೆ ಸೋಮವಾರ ಸಂಜೆ 6:10ರ ಸುಮಾರಿಗೆ ಶಿರಡಿ ನಗರದ ಹನುಮಂತ ದೇವಸ್ಥಾನ ಬಳಿ ಜನರಿಗೆ ಮತ್ತೆ ಕಾಣಿಸಿಕೊಂಡಿದೆ.

ಶಿರಡಿ ಸಾಯಿಬಾಬಾ ದೇವಸ್ಥಾನ ಹತ್ತಿರ ನಿರ್ಮಾಣ ಹಂತದ ಮಾರುತಿ ಗುಡಿ ಬಳಿ ನಿವಾಸಿ ಸಾವಿತ್ರಿ ಮುದ್ದೇಬಿಹಾಳ ಅವರಿಗೆ ಮೊದಲು ಕಾಣಿಸಿಕೊಂಡಿದೆ. ಇವರು ಮನೆ ಅಂಗಳದಲ್ಲಿ ಕಸ ಗುಡಿಸುತ್ತಿದ್ದ ವೇಳೆ ನೃಪತುಂಗ ಬೆಟ್ಟದ ಅರಣ್ಯ ಪ್ರದೇಶದಿಂದ ಜಿಗಿಯುತ್ತ ಬಂದು ಹಂದಿ ಹಿಡಿದುಕೊಂಡು ಹೋಗಿದೆ. ಇದನ್ನು ನೋಡಿದ ಸಾವಿತ್ರಿ ಅವರು ಗಾಬರಿಗೊಂಡು ಮನೆಯೊಳಗೆ ಹೋಗಿದ್ದಾರೆ. ಚಿರತೆ ಅಲ್ಲಿಯೇ ಸಮೀಪದಲ್ಲಿ ಗಿಡ ಏರಿ ಕುಳಿತಿದೆ. ಇದನ್ನು ನೋಡಿದ ಅಲ್ಲಿನ ಕೆಲವು ಮಹಿಳೆಯರು, ಮಕ್ಕಳು ಹಾಗೂ ಪುರುಷರು ಭಯಗೊಂಡು ಮನೆಯೊಳಗೆ ಓಡಿ ಬಾಗಿಲು ಹಾಕಿಕೊಂಡಿದ್ದಾರೆ. ತಕ್ಷಣ ಅಶೋಕ ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೆಲ ಸಮಯದ ನಂತರ ಅರಣ್ಯ ಇಲಾಖೆಯವರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಚಿರತೆ ಪತ್ತೆ ಕಾರ್ಯಾಚರಣೆ ನಡೆಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ ಕ್ಷೀರಸಾಗರ ಅವರು, ಮನೆಬಿಟ್ಟು ಹೊರಗೆ ಬರಬೇಡಿ. ಚಿರತೆಯಿಂದ ನಿಮಗೆ ಯಾವುದೇ ಜೀವಹಾನಿ ಆಗದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಶಿರಡಿ ನಗರ ನಿವಾಸಿಗಳಿಗೆ ಧೈರ್ಯ ತುಂಬಿದರು.

ಕೇಂದ್ರೀಯ ವಿದ್ಯಾಲಯ ಬಂದ್‌- ಜನತಾ ಪ್ರೌಢಶಾಲೆ ಓಪನ್‌

ನೃಪತುಂಗ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಬೆಟ್ಟಕ್ಕೆ ಪ್ರವೇಶಿಸುವ ಮಾರ್ಗದಲ್ಲಿ ಬ್ಯಾರಿಕೇಡ್‌ ಹಾಕಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕೇಂದ್ರೀಯ ವಿದ್ಯಾಲಯ ನಂ.1ರಲ್ಲಿ ಭೌತಿಕ ತರಗತಿಗಳನ್ನು ರದ್ದು ಮಾಡಲಾಗಿದ್ದರೆ, ಬೆಟ್ಟಕ್ಕೆ ಹತ್ತಿಕೊಂಡೇ ಇರುವ ಜನತಾ ಪ್ರೌಢಶಾಲೆ ತೆರೆದುಕೊಂಡಿತ್ತು. ಸೋಮವಾರ ಈ ಶಾಲೆಯಲ್ಲಿ ತರಗತಿಗಳು ನಡೆದವು. ಸುತ್ತಲಿನ ಗ್ರಾಮಗಳ ಸುಮಾರು 8 ವಿದ್ಯಾರ್ಥಿಗಳು ಹಾಜರಾಗಿದ್ದರು. ಒಂದು ವೇಳೆ ಚಿರತೆ ಶಾಲೆ ಬಳಿ ಬಂದರೆ ಯಾರು ಹೊಣೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಶಾಲೆಯಲ್ಲಿ 8 ರಿಂದ 10ನೇ ತರಗತಿಗಳಿದ್ದು, ಅಂದಾಜು 75 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.

ಪಕ್ಕದಲ್ಲಿಯೇ ಹಾಸ್ಟೆಲ್‌ ಸಹ ಇದೆ. ಇಲ್ಲಿ 60 ವಿದ್ಯಾರ್ಥಿಗಳು ಇದ್ದಾರೆ. ಶಾಲೆಯ ತರಗತಿಗಳನ್ನು ರದ್ದು ಪಡಿಸುವ ಬಗ್ಗೆ ನಮಗೆ ಇಲಾಖೆಯಿಂದ ಯಾವುದೇ ಆದೇಶ ಬಂದಿಲ್ಲ. ಆದರೆ ಬೆಟ್ಟದ ಸುತ್ತಮುತ್ತಲಿನ ವಿದ್ಯಾರ್ಥಿಗಳಾದರೂ ಶಾಲೆಗೆ ಬಂದಿಲ್ಲ. ಸುತ್ತಲಿನ ಹಳ್ಳಿಯ ಕೆಲ ವಿದ್ಯಾರ್ಥಿಗಳು ಮಾತ್ರ ಸೋಮವಾರ ಶಾಲೆಗೆ ಬಂದಿದ್ದಾರೆ ಎಂದು ಪ್ರೌಢಶಾಲೆ ಮುಖ್ಯ ಶಿಕ್ಷಕಿ ಆರ್‌. ವೈ. ಗೋಕಾಕ ಸುದ್ದಿಗಾರರಿಗೆ ತಿಳಿಸಿದರು.

10-15 ದಿನಗಳಿಂದ ಇಲ್ಲಿಯೇ ಇದೆಯೇ? 

ನೃಪತುಂಗ ಬೆಟ್ಟ ಸುತ್ತಮುತ್ತ ಕಾಣಿಸಿಕೊಂಡಿರುವ ಚಿರತೆ ಕಳೆದ 10-15 ದಿನಗಳಿಂದ ಇಲ್ಲಿನ ಪ್ರದೇಶದಲ್ಲಿಯೇ ವಾಸಿಸುತ್ತಿದೆಯೇ ಎಂಬ ಸಂದೇಹ ಜನರಲ್ಲಿ ಕಾಡುತ್ತಿದೆ. ಸಂಜೆಯಾದರೆ ಸಾಕು ಚಿರತೆಯು ಗಿಡ, ಪೊದೆಗಳಿಂದ ಹೊರಗೆ ಬಂದು ನಾಯಿ, ಹಂದಿಗಳನ್ನು ಹಿಡಿದುಕೊಂಡು ಹೋಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಜನರ ಕಣ್ಣಿಗೆ ಅದು ಕಾಣಿಸಿಕೊಂಡಿದೆ. ಯಾರು ಅದರತ್ತ ಚಿತ್ತ ಹರಿಸಿರಲಿಲ್ಲ ಎಂದು ಶಿರಡಿನಗರದ ನಿವಾಸಿಗಳು ಅನುಮಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.