ಚಿಕನ್‌ ಅಂಗಡಿ ತ್ಯಾಜ್ಯಕ್ಕೆ ಸಾಕುಪ್ರಾಣಿ ಆಹಾರ ರೂಪ

ಪಾಲಿಕೆಯೊಂದಿಗೆ ಕೈಜೋಡಿಸಿದ ಮಂಗಳೂರು ಕಂಪೆನಿ | ಧಾರವಾಡ ಬಳಿ ರೆಂಡರಿಂಗ್‌ ಘಟಕ ಸ್ಥಾಪನೆ

Team Udayavani, May 27, 2022, 9:40 AM IST

1

ಹುಬ್ಬಳ್ಳಿ: ಅವಳಿನಗರದಲ್ಲಿ ಸಂಗ್ರಹವಾಗುವ ತಾಜ್ಯದಿಂದ ಗೊಬ್ಬರ ತಯಾರಿಸುವ ಮೂಲಕ ರೈತರ ಮೆಚ್ಚುಗೆಗೆ ಪಾತ್ರವಾಗಿರುವ ಹು-ಧಾ ಮಹಾನಗರ ಪಾಲಿಕೆ, ಇದೀಗ ಚಿಕನ್‌ ಅಂಗಡಿಗಳಿಂದ ಸಂಗ್ರಹವಾಗುವ ತಾಜ್ಯವನ್ನು ಸಾಕು ಪ್ರಾಣಿಗಳ ಆಹಾರವನ್ನಾಗಿ ಮಾರ್ಪಡಿಸಲು ಮುಂದಾಗಿದೆ. ಪಾಲಿಕೆಯು ಮಂಗಳೂರು ಮೂಲದ IITAZ ventures ಕಂಪೆನಿಯೊಂದಿಗೆ ಒಡಬಂಡಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಲಿದ್ದು, ಇದರಿಂದ ಅವಳಿನಗರದಲ್ಲಿ ಚಿಕನ್‌ ಸೆಂಟರ್‌ಗಳಿಂದ ಪ್ರತಿದಿನ ಸಂಗ್ರಹವಾಗುವ ಸುಮಾರು 12-15 ಟನ್‌ ಕೋಳಿ ತಾಜ್ಯವನ್ನು ನಿರ್ವಹಣೆ ಮಾಡಲು ಸಹಕಾರಿಯಾಗಲಿದೆ.

ಹುಬ್ಬಳ್ಳಿಯಲ್ಲಿ 500, ಧಾರವಾಡದಲ್ಲಿ 300 ಸೇರಿದಂತೆ ಅವಳಿನಗರದಲ್ಲಿ ಸುಮಾರು 800ಕ್ಕೂ ಹೆಚ್ಚು ಚಿಕನ್‌ ಅಂಗಡಿಗಳಿವೆ. ಅವುಗಳಿಂದ ಪ್ರತಿದಿನ ಸುಮಾರು 12- 15 ಟನ್‌ ಕೋಳಿ ತಾಜ್ಯ ಸಂಗ್ರಹವಾಗುತ್ತಿದೆ. ಅದನ್ನು ಸರಿಯಾಗಿ ನಿರ್ವಹಣೆ ಮಾಡುವ ಮೂಲಕ ಸಾಕುಪ್ರಾಣಿಗಳ ಆಹಾರವನ್ನಾಗಿ ತಯಾರಿಸಲು IITAZ ventures ಸಂಸ್ಥೆ ಮುಂದೆ ಬಂದಿದೆ. ಅದಕ್ಕಾಗಿ ಮಹಾನಗರ ಪಾಲಿಕೆ ಸಹ ಹಸಿರು ನಿಶಾನೆ ತೋರಿಸಿದೆ. ಈಗಾಗಲೇ ಧಾರವಾಡ ಬೇಲೂರ ಕೈಗಾರಿಕಾ ವಸಾಹತು ಪ್ರದೇಶದಲ್ಲಿ 1.3 ಎಕರೆ ಪ್ರದೇಶದಲ್ಲಿ ಕೋಳಿ ತ್ಯಾಜ್ಯವನ್ನು ಸಾಕುಪ್ರಾಣಿಗಳ ಆಹಾರವನ್ನಾಗಿ ಪರಿವರ್ತಿಸುವ ರೆಂಡರಿಂಗ್‌ ಘಟಕ ಸ್ಥಾಪನೆ ಮಾಡಲಾಗುತ್ತಿದ್ದು, ಇನ್ನೊಂದು ತಿಂಗಳಲ್ಲಿ ಘಟಕ ಕಾರ್ಯಾರಂಭ ಮಾಡಲಿದೆ.

ಹುಬ್ಬಳ್ಳಿ-ಧಾರವಾಡದಲ್ಲಿ ಸಂಗ್ರಹವಾಗುವ ತಾಜ್ಯವನ್ನು ರಸ್ತೆ ಬದಿ ಮತ್ತು ತೆರೆದ ಚರಂಡಿಗಳಲ್ಲಿ ಸುರಿಯುವುದನ್ನು ಕಡಿಮೆ ಮಾಡಲು ಈ ಘಟಕ ನಿರ್ಮಾಣಕ್ಕೆ ಮುಂದಾಗಿದ್ದು, ಇದರಿಂದ ಬೀದಿ ನಾಯಿಗಳು ಸೇರಿದಂತೆ ಇನ್ನಿತರ ಸಾಕು ಪ್ರಾಣಿಗಳ ಉಪಟಳವೂ ಹತೋಟಿಗೆ ಬರಲಿದೆ ಎನ್ನುವ ಭರವಸೆ ಹೊಂದಲಾಗಿದೆ. ಸದ್ಯ ನಗರದಲ್ಲಿ ಹೆಚ್ಚಿನ ಚಿಕನ್‌ ಅಂಗಡಿಗಳ ತ್ಯಾಜ್ಯವನ್ನು ಸಾಮಾನ್ಯ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದು, ಇದನ್ನು ಸರಿಯಾಗಿ ನಿರ್ವಹಣೆ ಮಾಡಿದಲ್ಲಿ ಸಾಕು ಪ್ರಾಣಿಗಳಿಗೆ ಪೌಷ್ಟಿಕ ಆಹಾರ ನೀಡಿದಂತಾಗುತ್ತದೆ.

ಶೀಘ್ರದಲ್ಲಿಯೇ ಸಹಿ: ಈಗಾಗಲೇ ಮಹಾನಗರ ಪಾಲಿಕೆ ಹಾಗೂ ಮಂಗಳೂರು ಮೂಲದ ಕಂಪೆನಿಯೊಂದಿಗೆ ಮಾತುಕತೆಯಾಗಿದ್ದು, ಒಡಂಬಡಿಕೆ ಪತ್ರಕ್ಕೆ ಸಹಿ ಹಾಕುವುದು ಬಾಕಿ ಉಳಿದಿದೆ. ಮಹಾನಗರ ಪಾಲಿಕೆ ಮಹಾಪೌರ ಹಾಗೂ ಉಪಮಹಾಪೌರ ಆಯ್ಕೆ ನಂತರ ಪತ್ರಕ್ಕೆ ಸಹಿ ಆಗುವ ನಿರೀಕ್ಷೆ ಹೊಂದಲಾಗಿದೆ.

ಚಿಕನ್‌ ಅಂಗಡಿಗಳ ತ್ಯಾಜ್ಯವನ್ನು ಸಾಕುಪ್ರಾಣಿಗಳ ಆಹಾರವನ್ನಾಗಿ ಪರಿವರ್ತಿಸುವ ರೆಂಡರಿಂಗ್‌ ಘಟಕ ಸ್ಥಾಪಿಸುವ ಬಗ್ಗೆ ಮಂಗಳೂರು ಮೂಲದ ಸಂಸ್ಥೆ ಸಂಪರ್ಕಿಸಲಾಗಿತ್ತು. ಕಂಪೆನಿ ಈಗಾಗಲೇ ಧಾರವಾಡ ಬಳಿಯ ಕೈಗಾರಿಕಾ ಪ್ರದೇಶದಲ್ಲಿ ರೆಂಡರಿಂಗ್‌ ಘಟಕ ಸ್ಥಾಪಿಸುವ ಕೆಲಸ ಪ್ರಾರಂಭಿಸಿದೆ. ಚಿಕನ್‌ ತ್ಯಾಜ್ಯ ಸಂಗ್ರಹಿಸಲು ಅವರಿಗೆ ಹು-ಧಾ ಮಹಾನಗರ ಪಾಲಿಕೆ ಅಗತ್ಯ ನೆರವು ನೀಡಲಿದೆ. ಡಾ| ರವಿ ಸಾಲಿಗೌಡರ, ಪಾಲಿಕೆ ಪಶು ವೈದ್ಯಕೀಯ ವಿಭಾಗದ ಮುಖ್ಯಸ್ಥ

ಅವಳಿನಗರದಲ್ಲಿ ಸಂಗ್ರಹವಾಗುವ ಚಿಕನ್‌ ತ್ಯಾಜ್ಯವನ್ನು ಕಂಪನಿಯಿಂದ ಸಂಗ್ರಹಿಸುವ ಮೂಲಕ ಸಾಕು ಪ್ರಾಣಿಗಳ ಆಹಾರವನ್ನಾಗಿ ತಯಾರಿಸುವ ರೆಂಡರಿಂಗ್‌ ಘಟಕವನ್ನು ಧಾರವಾಡದ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ನಿರ್ಮಿಸಲಾಗುತ್ತಿದೆ. ಈಗಾಗಲೇ ಮಹಾನಗರ ಪಾಲಿಕೆ ಜೊತೆ ಈ ಕುರಿತು ಚರ್ಚೆಗಳು ನಡೆದಿದ್ದು, ಒಡಂಬಡಿಕೆ ಪತ್ರಕ್ಕೆ ಸಹಿ ಹಾಕುವುದು ಬಾಕಿ ಇದೆ. ಈಗಾಗಲೇ ಕಂಪೆನಿಯಿಂದ ಕೇರಳದಲ್ಲಿ ಘಟಕ ಇದ್ದು, ಮಂಗಳೂರಿನಲ್ಲೂ ಆರಂಭಿಸಲಾಗಿದೆ. ಹು-ಧಾದಲ್ಲಿ ಆರಂಭಿಸಬೇಕಿದ್ದು, ಮುಂದಿನ ದಿನಗಳಲ್ಲಿ ಗೋವಾ, ಶಿವಮೊಗ್ಗ ಹಾಗೂ ಬೆಂಗಳೂರಲ್ಲಿ ಘಟಕ ಕಾರ್ಯಾರಂಭವಾಗಲಿದೆ. ಅವಳಿನಗರದಲ್ಲಿ ನಿರ್ಮಾಣವಾಗುತ್ತಿರುವ ಘಟಕ 20 ಟನ್‌ ಸಾಮರ್ಥ್ಯ ಹೊಂದಿರಲಿದೆ. ಆರಿಫ್‌ ಬಾವಾ, IITAZ ventures ಮುಖ್ಯಸ್ಥ

„ಬಸವರಾಜ ಹೂಗಾರ

 

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.